ಆ್ಯಪ್ನಗರ

ಕಾಂಗ್ರೆಸ್‌ ಕಾರ್ಯಕರ್ತರಿಂದ ಹಲ್ಲೆ: ಪ್ರತಿಭಟನೆ

ತಾಲೂಕಿನ ದೊಡ್ಡತೇಕಲವಟ್ಟಿ , ಬೆಲಗೂರು, ಗ್ರಾಮಗಳಲ್ಲಿ ಬಿಜೆಪಿ ಬೆಂಬಲಿತ ಕಾರ್ಯಕರ್ತರ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ಮಾಡುತ್ತಿರುವುದನ್ನು ...

Vijaya Karnataka 1 May 2018, 7:43 pm
ಹೊಸದುರ್ಗ: ತಾಲೂಕಿನ ದೊಡ್ಡತೇಕಲವಟ್ಟಿ , ಬೆಲಗೂರು, ಗ್ರಾಮಗಳಲ್ಲಿ ಬಿಜೆಪಿ ಬೆಂಬಲಿತ ಕಾರ್ಯಕರ್ತರ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ಮಾಡುತ್ತಿರುವುದನ್ನು ಖಂಡಿಸಿ ಸೋಮವಾರ ಬಿಜೆಪಿ ಅಭ್ಯರ್ಥಿ ಗೂಳಿಹಟ್ಟಿ ಡಿ. ಶೇಖರ್‌, ಮುಖಂಡ ಎಸ್‌.ಲಿಂಗಮೂರ್ತಿ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಶ್ರೀರಾಂಪುರ ಪೊಲೀಸ್‌ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು.
Vijaya Karnataka Web congress protest
ಕಾಂಗ್ರೆಸ್‌ ಕಾರ್ಯಕರ್ತರಿಂದ ಹಲ್ಲೆ: ಪ್ರತಿಭಟನೆ


ತಾಲೂಕಿನ ಕೆಲವು ಗ್ರಾಮಗಳಲ್ಲ್ಲಿ ಕಾಂಗ್ರೆಸ್‌ ಕಾರ್ಯರ್ತರು ಕೆಲವು ಸ್ಥಳೀಯ ಪೊಲೀಸ್‌ ಸಿಬ್ಬಂದಿ ಸಹಕಾರದಿಂದ ಅಮಾಯಕರ ಮೇಲೆ ದೌರ್ಜನ್ಯ ನಡೆಸುತ್ತಾ ಜನ ಸಾಮಾನ್ಯರಿಗೆ ಭಯ ಮೂಡಿಸುತ್ತಿದ್ದಾರೆ. ಮರಳು ಸಾಗಣೆದಾರರಿಗೆ ನೆರವಾಗಿ, ಶಾಸಕರಿಗೆ ಮಾಹಿತಿದಾರರಾಗಿ ಹಾಗೂ ಕೆಲವು ಪೊಲೀಸ್‌ ಅಧಿಕಾರಿಗಳು ವಸೂಲಿಕಾರರಾಗಿ ಕೆಲಸ ಮಾಡುತ್ತಿರುವುದರಿಂದ ಪೊಲೀಸ್‌ ಇಲಾಖೆಯ ಬಗ್ಗೆ ಜನ ಸಾಮಾನ್ಯರಿಗೆ ವಿಶ್ವಾಸವಿಲ್ಲದಂತಾಗಿದೆ. ಇಂತಹ ಪೊಲೀಸರ ಬಗ್ಗೆ ಮೇಲಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತಾಲೂಕಿನ ಗಡಿ ಗ್ರಾಮ ಹೆಗ್ಗರೆ ಸಮೀಪದ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸರ ಬಗ್ಗೆ ಕರ್ತವ್ಯ ನಿರ್ಲಕ್ಷ್ಯದ ಬಗ್ಗೆ ಸ್ಥಳೀಯ ಚುನಾವಣಾಧಿಕಾರಿಗಳಿಗೆ ದೂರವಾಣಿ ಮೂಲಕ ತಿಳಿಸಿದ್ದಾರೆ. ಇದೇ ಕಾರಣಕ್ಕೆ ಶ್ರೀರಾಂಪುರ ಪಿಎಸ್‌ಐ, ಗ್ರಾಮಕ್ಕೆ ಹೋಗಿ ಸಾರ್ವಜನಿಕರನ್ನು ಬೆದರಿಸಿ ನಮ್ಮ ಮೇಲೆ ಮೇಲಧಿಕಾರಿಗಳಿಗೆ ದೂರು ನೀಡುತ್ತೀರಾ ಎಂದು ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಪ್ರತಿಭಟನಕಾರರು ದೂರಿದರು.

ಸ್ಥಳಕ್ಕೆ ಆಗಮಿಸಿದ ಸಿಪಿಐ ಕುಮಾರ್‌ ಪ್ರತಿಭಟನಕಾರರ ದೂರುಗಳನ್ನು ಕೇಳಿ ಈ ಬಗ್ಗೆ ತಪಿತಸ್ಥರ ಬಗ್ಗೆ ಕ್ರಮಕೈಗೊಂಡು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳನ್ನು ಜರುಗದಂತೆ ಎಚ್ಚರವಹಿಸುವುದಾಗಿ ಹೇಳಿದಾಗ ಪ್ರತಿಭಟನಕಾರರು ಪ್ರತಿಭಟನೆ ನಿಲ್ಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ