ಆ್ಯಪ್ನಗರ

ಕೊರೊನಾ ಭೀತಿಗೆ ಚಿತ್ರದುರ್ಗ ಸ್ತಬ್ಧ: ಮಾ.22ರವರೆಗೆ ನಿಷೇಧಾಜ್ಞೆ ಜಾರಿ!

ಕೊರೊನಾ ವೈರಸ್‌ ಸೋಂಕು ಹಬ್ಬುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ಚಿತ್ರದುರ್ಗ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ.

Vijaya Karnataka Web 18 Mar 2020, 2:02 pm
ಕೊರೊನಾ: ಕೊರೊನಾ ವೈರಸ್‌ ಸೋಂಕು ಹಬ್ಬುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ಚಿತ್ರದುರ್ಗ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ.
Vijaya Karnataka Web Coronavirus 1


ಜಿಲ್ಲೆಯಾದ್ಯಂತ ಮಾರ್ಚ್‌ 17ರಿಂದಲೇ 144 ಸೆಕ್ಷನ್‌ ನಿಷೇಧಾಜ್ಞೆ ಜಾರಿಯಲ್ಲಿದ್ದು ಮಾರ್ಚ್‌ 22ರವರೆಗೆ ಮುಂದುವರಿಯಲಿದೆ.

ಸಾರ್ವಜನಿಕರು ಹೆಚ್ಚಾಗಿ ಸೇರುವಂತಹ ಸಂತೆ, ಜಾತ್ರೆ, ಸಮಾವೇಶ, ಸಮ್ಮೇಳನ, ಮದುವೆ, ಕ್ರೀಡಾಕೂಟ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೊನಾ ವೈರಸ್‌ ಸೋಂಕು ಹರಡುವ ಸಾಧ್ಯಗಳಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್‌ ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ ಮಾರ್ಚ್‌ 22ರವರೆಗೆ ಜಿಲ್ಲೆಯಾದ್ಯಂತ ಮೇಲೆ ತಿಳಿಸಿರುವ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೆ, ಜಿಲ್ಲೆಯಾದ್ಯಂತ 5 ಜನಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಕೊರೊನಾ ವೈರಸ್ ಲೈವ್ ಅಪ್ಡೇಟ್ಸ್: ಲೂಧಿಯಾನದಲ್ಲಿ ಶಂಕಿತ 167 ಮಂದಿ ನಾಪತ್ತೆ!

ಇದುವರೆಗೆ ಕರ್ನಾಟಕದಲ್ಲಿ 11 ಕೊರೊನಾ ಪ್ರಕರಣಗಳು ದೃಢವಾಗಿವೆ. ದೇಶದಲ್ಲಿ 147 ಪ್ರಕರಣಗಳು ಪತ್ತೆಯಾಗಿವೆ. ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧನಿಗೆ ಕೊರೊನಾ ಸೋಂಕು ತಗುಲಿದ್ದು, ಸೈನಿಕರಲ್ಲಿ ಆತಂಕ ಮೂಡಿಸಿದೆ. ಬುಧವಾರ ಸೇನೆಯ ಮೂಲಗಳು ಸೋಂಕು ತಗುಲಿರುವ ಮಾಹಿತಿಯನ್ನು ಸ್ಪಷ್ಟಪಡಿಸಿವೆ.


ಕೊರೊನಾ ವೈರಸ್ ಸ್ಟೇಜ್-2ರಲ್ಲಿದೆ ಭಾರತ: ಸ್ಟೇಜ್-4ಕ್ಕೆ ಹೋಗದಂತೆ ಮಾಡುವುದೇನು?

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ