ಆ್ಯಪ್ನಗರ

​ಚಿತ್ರದುರ್ಗ: ಕೊರೊನಾ ಭೀತಿ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಆರೋಗ್ಯ ಜಾಗೃತಿ ಕಾರ್ಯಕ್ರಮ

ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಹರಡದಂತೆ ತಡೆಯಲು ಆರೋಗ್ಯ ಜಾಗೃತಿ ಅರಿವು ಕಾರ್ಯಕ್ರಮ ಪೊಲೀಸ್ ಕವಾಯತು ಮೈದಾನದಲ್ಲಿ ಜರುಗಿತು.

Vijaya Karnataka Web 19 Mar 2020, 11:46 am
ಚಿತ್ರದುರ್ಗ: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕೊರೊನಾ ಮಹಾಮಾರಿಯ ಸೋಂಕು ಹರಡದಂತೆ ತಡೆಯಲು ಆರೋಗ್ಯ ಜಾಗೃತಿ ಅರಿವು ಕಾರ್ಯಕ್ರಮವು ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು.
Vijaya Karnataka Web chithradurga


ಕೊರೊನಾ ವೈರಸ್ ಮುನ್ನೆಚ್ಚರಿಕೆಯನ್ನು ಹೇಗೆ ಪಾಲಿಸಬೇಕು ಎಂಬುದರ ಕುರಿತಾಗಿ ಡಿಎಚ್ಒ ರವರು ಮಾತನಾಡಿದರು.
ಎಸ್ ಪಿ ರಾಧಿಕಾ ಅವರು ಮಾತನಾಡಿ, ಪೊಲೀಸ್ ಸಿಬ್ಬಂದಿಗಳು ಹೆಚ್ಚು ಜನರ ಸಂಪರ್ಕದಲ್ಲಿರುತ್ತಾರೆ. ಕರೋನಾ ಸೋಂಕು ಹರಡದಂತೆ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು.
ನಂತರ ಪೊಲೀಸ್ ಸಿಬ್ಬಂದಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟರಿಯನ್ನು ವಿತರಣೆ ಮಾಡಲಾಯಿತು.

ಸಭೆಯಲ್ಲಿ ಹೆಚ್ಚುವರಿ ಅಧೀಕ್ಷಕರಾದ ಮಹಾನಿಂಗ ನಂದಗಾವಿ, ಡಿವೈಎಸ್ಪಿ ಪಾಂಡುರಂಗಪ್ಪ ಹಾಗು ತಿಪ್ಪೇಸ್ವಾಮಿ, ಇನ್ಸ್ಪೆಕ್ಟರ್ ಮೋಹಿದೀನ್ ಮತ್ತು ಸೋಮಶೇಖರ್ ಬಸವೇಶ್ವರ ಆಸ್ಪತ್ರೆಯ ಡಾಕ್ಟರ್ ಸುಧಾ ನಾರಾಯಣ್ ರವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ