ಆ್ಯಪ್ನಗರ

ವಕೀಲರಿಂದ ಕಲಾಪ ಬಹಿಷ್ಕಾರ

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಒಂದು ತಿಂಗಳ ಒಳಗಾಗಿ ನೀರನ್ನು ಹರಿಸಬೇಕು ಎಂದು ವಕೀಲರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಚಿತ್ರದುರ್ಗ ಬಾರ್‌ ಅಸೋಸಿಯೇಶನ್‌ ನೇತೃತ್ವದಲ್ಲಿ ಬುಧವಾರ ಬೃಹತ್‌ ಪ್ರತಿಭಟನೆ ನಡೆಸಿದರು.

Vijaya Karnataka 4 Jul 2019, 5:00 am
ಚಿತ್ರದುರ್ಗ : ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಒಂದು ತಿಂಗಳ ಒಳಗಾಗಿ ನೀರನ್ನು ಹರಿಸಬೇಕು ಎಂದು ವಕೀಲರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಚಿತ್ರದುರ್ಗ ಬಾರ್‌ ಅಸೋಸಿಯೇಶನ್‌ ನೇತೃತ್ವದಲ್ಲಿ ಬುಧವಾರ ಬೃಹತ್‌ ಪ್ರತಿಭಟನೆ ನಡೆಸಿದರು.
Vijaya Karnataka Web dispossession by a lawyer
ವಕೀಲರಿಂದ ಕಲಾಪ ಬಹಿಷ್ಕಾರ


ಜಿಲ್ಲಾ ನ್ಯಾಯಾಲಯದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ಆಗಮಿಸಿದ ವಕೀಲರು ಭದ್ರಾ ಮೇಲ್ದಂಡೆ ಯೋಜನೆ ಅನುಷ್ಟಾನಕ್ಕೆ ಒತ್ತಾಯಿಸಿ, ಘೋಷಣೆ ಕೂಗಿದರು. ಭದ್ರಾ ಮೇಲ್ದಂಡೆ ಯೋಜನಾ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.

ಭದ್ರಾ ಮೇಲ್ದಂಡೆ ಕಾಮಗಾರಿ ಪ್ರಗತಿಯಲ್ಲಿದ್ದರೂ ಕಾಮಗಾರಿಯ ವೇಗ ನಿಧಾನಗತಿಯಲ್ಲಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಯೋಜನೆ ಶೀಘ್ರ ಪೂರ್ಣಗೊಳಿಸುವುದಾಗಿ ಪೊಳ್ಳು ಆಶ್ವಾಸನೆ ನೀಡುತ್ತಾ ಬಂದಿದ್ದಾರೆ. ಇದೇ ಕಾರಣಕ್ಕೆ ಸಾರ್ವಜನಿಕ ಹೋರಾಟಗಳು ತೀವ್ರಗೊಳ್ಳುತ್ತಿವೆ ಎಂದರು.

ಇಡೀ ಜಿಲ್ಲೆ ಬರದಿಂದ ತತ್ತರಿಸಿದೆ. ಅಡಕೆ, ತೆಂಗಿನ ತೋಟಗಳು ಬಹುತೇಕ ಹಾಳಾಗಿದ್ದು, ಟ್ಯಾಂಕರ್‌ಗಳ ಮೂಲಕ ನೀರು ಹಾಯಿಸಿ ಉಳಿಸಿಕೊಳ್ಳಲು ಸಹಾ ಹೆಣಗಾಡುತ್ತಿದ್ದಾರೆ. ಇತರೆ ಬೆಳೆ ಬೆಳೆಯುವವರೂ ಹಿಂದೇಟು ಹಾಕುತ್ತಿದ್ದು, ಇಡೀ ರೈತಾಪಿ ಸಮುದಾಯ ಸಂಕಷ್ಟದಲ್ಲಿದೆ. ಜನ ಜಾನುವಾರು ನೀರಿಲ್ಲದೇ ಪರದಾಡುವಂತಾಗಿದೆ ಎಂದರು.

ಸತತ ಬರದಿಂದಾಗಿ ಜಿಲ್ಲೆಯ ಜನ ಎಣೆಯಿಲ್ಲದ ಕಷ್ಟನಷ್ಟಗಳಿಗೆ ಈಡಾಗಿದ್ದಾರೆ. ಜನ ಈ ಸಂಕಷ್ಟದಿಂದ ಪಾರಾಗಬೇಕಾದರೆ, ಭದ್ರಾ ಮೇಲ್ದಂಡೆ ಯೋಜನೆಯಿಂದ ಶೀಘ್ರ ನೀರು ಹರಿಸುವು ದೊಂದೇ ಪರಿಹಾರವಾಗಿದೆ. ರಾಜ್ಯ ಸರಕಾರ ವಿಶೇಷ ಗಮನ ಹರಿಸಿ, ಯೋಜನೆಯ ಶೀಘ್ರ ಅನುಷ್ಟಾನಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ