ಆ್ಯಪ್ನಗರ

ಚಿತ್ರದುರ್ಗವನ್ನು ಪ್ರವಾಹ ಪೀಡಿತ ಜಿಲ್ಲೆ ಎಂದು ಘೋಷಿಸಲು ಸಿಎಂಗೆ ಮನವಿ ಮಾಡ್ತೇವೆ: ಶ್ರೀರಾಮುಲು

ಸಚಿವ ಶ್ರೀರಾಮುಲು ಅವರು ಸರಣಿ ಟ್ವೀಟ್ ಮಾಡಿದ್ದು, ಚಿತ್ರದುರ್ಗ ಜಿಲ್ಲೆಯನ್ನು ಅತಿವೃಷ್ಟಿ ಮತ್ತು ಪ್ರವಾಹ ಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಮಾನ್ಯ ಮುಖ್ಯಮಂತ್ರಿ ಶ್ರೀ ಬಿಎಸ್‌ ಯಡಿಯೂರಪ್ಪ ಅವರ ಜತೆ ನಾನು ಮತ್ತು ನಮ್ಮ ಜಿಲ್ಲೆಯ ಎಲ್ಲ ಶಾಸಕರೂ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ.

Vijaya Karnataka Web 19 Sep 2020, 12:06 pm
ಬೆಂಗಳೂರು: ಚಿತ್ರದುರ್ಗ ಜಿಲ್ಲೆಯನ್ನು ಅತಿವೃಷ್ಟಿ ಮತ್ತು ಪ್ರವಾಹ ಪೀಡಿತ ಜಿಲ್ಲೆ ಎಂದು ಘೊಷಿಸುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜೊತೆ ಮಾಡುತ್ತೇನೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.
Vijaya Karnataka Web Sriramulu
Karnataka hHealth minister B Sriramulu


ಈ ಕುರಿತು ಟ್ವೀಟ್ ಮಾಡಿರುವ ಅವರು, ಚಿತ್ರದುರ್ಗ ಜಿಲ್ಲೆಯಲ್ಲಿ ಈರುಳ್ಳಿ ಮತ್ತು ಇತರೆ ಬೆಳೆಗಳು ಮಳೆಯಿಂದ ನಾಶವಾಗಿ ರೈತರಿಗೆ ತುಂಬಲಾರದ ನಷ್ಟವಾಗಿದೆ. ಈವರೆಗೂ ಸುಮಾರು 7,302 ಹೆಕ್ಟರ್ ಪ್ರದೇಶದಲ್ಲಿ 9 ಕೋಟಿ 87 ಲಕ್ಷ ರೂಪಾಯಿಗಳ ಮೊತ್ತದಷ್ಟು ನಷ್ಟವಾಗಿದೆ ಎಂದು ಜಿಲ್ಲಾಡಳಿತ ಅಂದಾಜು ಮಾಡಿದೆ ಎಂದು ಹೇಳಿದ್ದಾರೆ.

ಚಿತ್ರದುರ್ಗದಲ್ಲಿರುವ ಸಾಮ್ರಾಟ್ ಅಶೋಕನ ಶಿಲಾ ಶಾಸನ ಅವಸಾನದ ಅಂಚಿಗೆ!

ಅಲ್ಲದೇ ಜನ, ಜಾನುವಾರು ಮತ್ತು ಮೂಲ ಸೌಕರ್ಯ ಸೇರಿದಂತೆ ಅಂದಾಜು 91 ಕೋಟಿ 87 ಲಕ್ಷ ರೂಪಾಯಿಗಳ ನಷ್ಟವಾಗಿದೆ ಎಂದು ತಿಳಿದಿದ್ದು, ನಷ್ಟ ಹೊಂದಿರುವ ಯಾವುದೇ ರೈತನೂ ಬೆಳೆ ಸಮೀಕ್ಷೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಲಾಗುವುದು. ನಮ್ಮ ಸರ್ಕಾರ ರೈತರ ಜೊತೆಗಿದ್ದು, ಯಾರೂ ಧೃತಿಗೆಡಬೇಕಿಲ್ಲ ಎಂದು ಶ್ರೀರಾಮುಲು ಭರವಸೆ ನೀಡಿದ್ದಾರೆ.

ಚಿತ್ರದುರ್ಗ: 4 ಎಕರೆ ಭೂಮಿಯಲ್ಲಿ ಗಾಂಜಾ ಬೆಳೆದಿದ್ದ ಖದೀಮರು, 4 ಕೋಟಿ ಮೌಲ್ಯದ ಗಿಡ ಪೊಲೀಸ್‌ ವಶಕ್ಕೆ!

ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿ ಸಚಿವರು ಆಗಿರುವ ಶ್ರೀರಾಮುಲು ಅವರು ಸರಣಿ ಟ್ವೀಟ್ ಮಾಡಿದ್ದು, ಚಿತ್ರದುರ್ಗ ಜಿಲ್ಲೆಯನ್ನು ಅತಿವೃಷ್ಟಿ ಮತ್ತು ಪ್ರವಾಹ ಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಮಾನ್ಯ ಮುಖ್ಯಮಂತ್ರಿ ಶ್ರೀ ಬಿಎಸ್‌ ಯಡಿಯೂರಪ್ಪ ಅವರ ಜತೆ ನಾನು ಮತ್ತು ನಮ್ಮ ಜಿಲ್ಲೆಯ ಎಲ್ಲ ಶಾಸಕರೂ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ