ಆ್ಯಪ್ನಗರ

ಎಲ್ಲ ವರ್ಗದ ಜನರ ಆರೋಗ್ಯ ರಕ್ಷಣೆಯಲ್ಲಿ ರಾಜ್ಯ ಸರ್ಕಾರ ವಿಫಲ: ಡಿ.ಕೆ ಶಿವಕುಮಾರ್ ಆರೋಪ

ಜನರ ಆರೋಗ್ಯ ರಕ್ಷಣೆಯ ದೃಷ್ಟಿಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದಿಷ್ಟು.

Vijaya Karnataka Web 22 Nov 2020, 1:44 pm
ಚಿತ್ರದುರ್ಗ : ರಾಜ್ಯದ ಎಲ್ಲ ವರ್ಗದ ಜನರ ಆರೋಗ್ಯ ರಕ್ಷಣೆ ಸರ್ಕಾರದ ಜವಾಬ್ದಾರಿ. ಆದರೆ ಈ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
Vijaya Karnataka Web dk shivakumar


ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಳ್ಳಾರಿಯ ಹೊಸಪೇಟೆಗೆ ತೆರಳುವ ಮಾರ್ಗಮಧ್ಯೆ ಹಿರಿಯೂರಿನಲ್ಲಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

ಕೋವಿಡ್‌ ನಿರ್ವಹಣೆ ನಿಟ್ಟಿನಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸರ್ಕಾರವಾಗಿ ರಾಜ್ಯದಲ್ಲಿರುವ ಎಲ್ಲ ವರ್ಗಗಳ ಜನರ ಆರೋಗ್ಯವನ್ನು ರಕ್ಷಣೆ ಮಾಡುವುದು ಜವಾಬ್ದಾರಿಯಾಗಿದೆ. ಆದರೆ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.

ಬೈಎಲೆಕ್ಷನ್‌ಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲ್ವಾ ಜೆಡಿಎಸ್‌? ಎಚ್‌ಡಿಕೆ ಮಾರ್ಮಿಕ ಮಾತಿನ ಅರ್ಥ ಏನು?

ಈ ವೇಳೆ ಹೊಸ ಜಿಲ್ಲೆ ರಚನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ನೂತನ ಜಿಲ್ಲೆ ರಚನೆ ಬಗ್ಗೆ ಮಾಹಿತಿ ಇಲ್ಲ. ಈವರೆಗೂ ಸರ್ಕಾರ ಆದೇಶ ಹೊರಡಿಸಿಲ್ಲ. ಈ ಬಗ್ಗೆ ಅಧಿಕೃತ ಆದೇಶ ಬಂದ ನಂತರ ನಾನು ಮಾತನಾಡುತ್ತೇನೆ' ಎಂದರು.

ಬುಧವಾರ ನಡೆದ ಸಂಪುಟ ಸಭೆಯಲ್ಲಿ ಬಳ್ಳಾರಿ ಜಿಲ್ಲೆಯ ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ರಚನೆ ಮಾಡಲು ಸರ್ಕಾರ ಮೌಕಿಕ ಆದೇಶ ನೀಡಿದೆ. ಆದರೆ ಸರ್ಕಾರದ ನಿಲುವಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸ್ವತಃ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಕೂಡಾ ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ