ಆ್ಯಪ್ನಗರ

ಕಾರ್ಮಿಕ ಸಚಿವರ ಜಿಲ್ಲೆಯಲ್ಲೇ ಮ್ಯಾನ್‌ಹೋಲ್‌ಗೆ ಇಳಿದ ಕಾರ್ಮಿಕರು

ಮ್ಯಾನ್‌ಹೋಲ್‌ಗೆ ಇಳಿದು ಸ್ವಚ್ಛಗೊಳಿಸಿವ ಪದ್ದತಿಗೆ ರಾಜ್ಯದಲ್ಲಿ ಇನ್ನೂ ಕೊನೆಯಾಗಿಲ್ಲ. ಚಿತ್ರದುರ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ನಗರಸಭೆ ಗುತ್ತಿಗೆದಾರ ಕಾರ್ಮಿಕರನ್ನು ಮ್ಯಾನ್‌ಹೋಲ್‌ಗೆ ಇಳಿಸಿ ಸ್ವಚ್ಛಗೊಳಿಸಿದ್ದಾನೆ.

Vijaya Karnataka Web 13 Oct 2018, 11:51 am
ಚಿತ್ರದುರ್ಗ : ಕೆಎಸ್‌ಟಿಸಿ ಬಸ್ ನಿಲ್ದಾಣ ಬಳಿ ಮ್ಯಾನ್ ಹೋಲ್‌ಗೆ ಇಳಿಸಿ ಸ್ವಚ್ಛ ಮಾಡಿಸಲಾಗಿದೆ. ನಗರಸಭೆ ಗುತ್ತಿಗೆದಾರ ಕಾರ್ಮಿಕರಿಂದ ಈ ಕೆಲಸ ಮಾಡಿಸಿದ್ದು, ಆಧುನಿಕ ಸಕ್ಕಿಂಗ್‌ ಯಂತ್ರಗಳಿದ್ದಾಗಿಯೂ ಮ್ಯಾನ್‌ಹೋಲ್‌ಗೆ ಕಾರ್ಮಿಕರನ್ನು ಇಳಿಸಿ ಸ್ವಚ್ಛಗೊಳಿಸುವ ಕಾರ್ಯ ಮಾಡಲಾಗಿದೆ.
Vijaya Karnataka Web manhole2.


ವಿಪರ್ಯಾಸವೆಂದರೆ ಕಾರ್ಮಿಕ ಸಚಿವ ಎಂ ವೆಂಕಟರಮಣಪ್ಪ ಅವರ ಉಸ್ತುವಾರಿ ಜಿಲ್ಲೆಯಲ್ಲೇ ಈ ಕೃತ್ಯ ನಡೆದಿದೆ. ಕಾರ್ಮಿಕ ಸಚಿವರ ಜಿಲ್ಲೆಯಲ್ಲೇ ಕಾರ್ಮಿಕರನ್ನು ಶೋಷಣೆ ಮಾಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ದೇಶಾದ್ಯಂತ ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವ ವೇಳೆ ನಡೆದ ದುರಂತಗಳು ತಿಳಿದಿದ್ದರೂ, ಈ ಅನಿಷ್ಠ ಪದ್ದತಿ ಅಂತ್ಯ ಮಾತ್ರ ಕಂಡಿಲ್ಲ. ಬೆಂಗಳೂರು ಸೇರಿ ನಾನಾ ಭಾಗಗಳಲ್ಲಿ ಮ್ಯಾನ್‌ ಹೋಲ್‌ಗೆ ಇಳಿದು ಸ್ವಚ್ಛ ಮಾಡುವ ವೇಳೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮರುಕಳಿಸುತ್ತಲೇ ಇವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ