ಆ್ಯಪ್ನಗರ

ಲಾರಿ ಡಿಕ್ಕಿ: ಇಬ್ಬರು ದುರ್ಮರಣ

ತಾಲೂಕಿನ ಜವನಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿಗೆ ಹಿಂಬದಿಯಿಂದ ಬಂದ ಲಾರಿವೊಂದು ಡಿಕ್ಕಿ ಹೊಡೆದ ಪರಿಣಾಮ ನಿಂತಿದ್ದ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ.

Vijaya Karnataka 5 Aug 2018, 5:00 am
ಹಿರಿಯೂರು : ತಾಲೂಕಿನ ಜವನಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿಗೆ ಹಿಂಬದಿಯಿಂದ ಬಂದ ಲಾರಿವೊಂದು ಡಿಕ್ಕಿ ಹೊಡೆದ ಪರಿಣಾಮ ನಿಂತಿದ್ದ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ.
Vijaya Karnataka Web larry collision two dead
ಲಾರಿ ಡಿಕ್ಕಿ: ಇಬ್ಬರು ದುರ್ಮರಣ


ಮಹಾರಾಷ್ಟ್ರ ಮೂಲದ ಚಾಲಕ ರಾಕೇಶ್‌ ನಿಗ್ವಾಲ್‌ ಹಾಗೂ ಕ್ಲಿನರ್‌ ಪಿಂಟೂ ಮೃತರು. ಟೈರ್‌ ಪಂಚರ್‌ ಆಗಿದ್ದರಿಂದ ಹೆದ್ದಾರಿಯಲ್ಲಿ ಲಾರಿ ನಿಲ್ಲಿಸಲಾಗಿತ್ತು. ಈ ವೇಳೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ.

ಚಾಲಕನ ಅಜಾಗರೂಕತೆ ಹಾಗೂ ಅತಿ ವೇಗವೇ ಅಪಘಾತಕ್ಕೆ ಪ್ರಮುಖ ಕಾರಣವಾಗಿದ್ದು, ತಮಿಳುನಾಡು ಮೂಲದ ಚಾಲಕ ಕರಮತ್‌ ಷಾ ಮತ್ತು ಕ್ಲಿನರ್‌ ಶೇಖ್‌ ಸದ್ದಾಂ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ