ಆ್ಯಪ್ನಗರ

ಮಕ್ಕಳಿಗೆ ಸ್ಪರ್ಧಾತ್ಮಕ ಶಿಕ್ಷಣ ನೀಡೋಣ

ಇಂದಿನ ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಶಿಕ್ಷ ಣ ನೀಡಬೇಕು ಎಂದು ದೇವರಾಜ್‌ ಅರಸ್‌ ಶಿಕ್ಷ ಣ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಹಾಗೂ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಹೇಳಿದರು.

Vijaya Karnataka 17 Dec 2018, 9:49 pm
ಚಿತ್ರದುರ್ಗ : ಇಂದಿನ ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಶಿಕ್ಷ ಣ ನೀಡಬೇಕು ಎಂದು ದೇವರಾಜ್‌ ಅರಸ್‌ ಶಿಕ್ಷ ಣ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಹಾಗೂ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಹೇಳಿದರು.
Vijaya Karnataka Web lets compete with children
ಮಕ್ಕಳಿಗೆ ಸ್ಪರ್ಧಾತ್ಮಕ ಶಿಕ್ಷಣ ನೀಡೋಣ


ನಗರದ ದೇವರಾಜ್‌ ಅರಸ್‌ ವಿದ್ಯಾಸಂಸ್ಥೆಯಲ್ಲಿ ಭಾನುವಾರ ಎಸ್‌ಎಲ್‌ವಿ ಪದವಿಪೂರ್ವ ಕಾಲೇಜು ಹಾಗೂ ಇಂಡಿಯನ್‌ ಇಂಟರ್‌ ನ್ಯಾಷನಲ್‌ ಸಿಬಿಎಸ್‌ಇ ಶಾಲೆ ಆಶ್ರಯದಲ್ಲಿ ರೆಸ್ಪೆಕ್ಟ್ ಟ್ಯಾಲೆಂಟ್‌-2018 ಪ್ರತಿಭಾನ್ವೇಷಣಾ ಪರೀಕ್ಷೆಗೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಚಿತ್ರದುರ್ಗ ಜಿಲ್ಲೆಯ ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಶೈಕ್ಷ ಣಿಕವಾಗಿ ಬೆಳೆಯಬೇಕು. ಆದ್ದರಿಂದ ದೇವರಾಜ್‌ ಅರಸು ಶಿಕ್ಷ ಣ ಸಂಸ್ಥೆ ನೀಡುತ್ತಿರುವ ಗುಣಮಟ್ಟದ ಶಿಕ್ಷ ಣದ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು.

ಎಸ್‌ಎಲ್‌ವಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಬಿ.ಎ.ಕೊಟ್ರೇಶ್‌ ಮಾತನಾಡಿ, ಎಸ್‌ಎಸ್‌ಎಲ್‌ಸಿ ನಂತರ ವಿದ್ಯಾರ್ಥಿಗಳು ಪಿಯುಸಿ ಹಂತದಲ್ಲಿ ನಿಶ್ಚಿತ ಗುರಿ ಹಾಗೂ ಬದ್ಧತೆಯೊಂದಿಗೆ ವಿದ್ಯಾಭ್ಯಾಸ ನಡೆಸಬೇಕು. ಜೀವನದಲ್ಲಿ ಒಂದು ಗುರಿ ಇಟ್ಟುಕೊಂಡು ಅದನ್ನು ಸಾಧಿಸಬೇಕು ಎಂದರು.

ಜಿಲ್ಲೆಯಿಂದ ಒಟ್ಟು 3650 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ರೆಸ್ಪೆಕ್ಟ್ ಟ್ಯಾಲೆಂಟ್‌-2018 ಪ್ರತಿಭಾನ್ವೇಷಣಾ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಪ್ರೊ.ಬಿ.ಸಿ.ಅನಂತರಾಮು, ಪ್ರೊ.ಭೈರಸಿದ್ಧಪ್ಪ, ಬಿಇಡಿ ಕಾಲೇಜಿನ ಪ್ರಾಚಾರ್ಯ ರುದ್ರಮುನಿ ಹಾಗೂ ಮತ್ತಿತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ