ಆ್ಯಪ್ನಗರ

ಮೆಡಿಕಲ್‌ ಕಾಲೇಜಿಗೆ ಪತ್ರ ಚಳವಳಿ

ಮುಂಬರುವ ಬಜೆಟ್‌ನಲ್ಲಿ ಮೆಡಿಕಲ್‌ ಕಾಲೇಜು ಆರಂಭಕ್ಕೆ ಕನಿಷ್ಠ 100 ಕೋಟಿ ರೂ. ಮೀಸಲಿಡುವಂತೆ ಒತ್ತಾಯಿಸಿ ಮಂಗಳವಾರ ಸಮಿತಿ ನೇತೃತ್ವದಲ್ಲಿ ಡಿಸಿ ಕಚೇರಿ ಬಳಿಯ ಅಂಚೆ ಕಚೇರಿ ಬಳಿ ಪತ್ರ ಚಳವಳಿ ನಡೆಸಲಾಯಿತು.

Vijaya Karnataka 6 Feb 2019, 5:00 am
ಚಿತ್ರದುರ್ಗ: ಮುಂಬರುವ ಬಜೆಟ್‌ನಲ್ಲಿ ಮೆಡಿಕಲ್‌ ಕಾಲೇಜು ಆರಂಭಕ್ಕೆ ಕನಿಷ್ಠ 100 ಕೋಟಿ ರೂ. ಮೀಸಲಿಡುವಂತೆ ಒತ್ತಾಯಿಸಿ ಮಂಗಳವಾರ ಸಮಿತಿ ನೇತೃತ್ವದಲ್ಲಿ ಡಿಸಿ ಕಚೇರಿ ಬಳಿಯ ಅಂಚೆ ಕಚೇರಿ ಬಳಿ ಪತ್ರ ಚಳವಳಿ ನಡೆಸಲಾಯಿತು.
Vijaya Karnataka Web letter movement to medical college
ಮೆಡಿಕಲ್‌ ಕಾಲೇಜಿಗೆ ಪತ್ರ ಚಳವಳಿ


'ಜಿಲ್ಲೆಯ ಜನ ನಾನಾ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ದಾವಣಗೆರೆ, ಮಂಗಳೂರು, ಉಡುಪಿ, ಬೆಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ಬಡವರು ತೆರಳುತ್ತಿದ್ದಾರೆ. ಇದಕ್ಕೆ ಪರಿಹಾರ ಒದಗಿಸಲು ತಕ್ಷ ಣ ಸರಕಾರಿ ಮೆಡಿಕಲ್‌ ಕಾಲೇಜು ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಬೇಕು' ಎಂದು ಮುಖಂಡರು ಒತ್ತಾಯಿಸಿದರು.

ಜಿಲ್ಲೆಯ ಶಾಸಕರು, ಸಂಸದರ ಶ್ರಮದಿಂದ ಮಂಜೂರಾಗಿರುವ ಸರಕಾರಿ ಮೆಡಿಕಲ್‌ ಕಾಲೇಜು ಆರಂಭಕ್ಕೆ ಮೀನಾಮೇಷ ಎಣಿಸುತ್ತಿದ್ದಾರೆ. ಕಾಲೇಜು ಆರಂಭಕ್ಕೆ ಮಂಜೂರಾತಿ ನೀಡಿ ಐದು ವರ್ಷ ಆಗಿದೆ. ಅಗತ್ಯ ಭೂಮಿ ನೊಂದಣಿ ಮಾಡಿಕೊಟ್ಟಿದೆ. ಜನಪ್ರತಿನಿಧಿಗಳು ಈ ನಿಟ್ಟಿನಲ್ಲಿ ನಿರಂತರ ಒತ್ತಡ ಹಾಕುತ್ತಿದ್ದರೂ ಗಮನಹರಿಸುತ್ತಿಲ್ಲ ಎಂದು ಆರೋಪಿಸಿದರು.

ಬಜೆಟ್‌ನಲ್ಲಿ ಮಾನವೀಯತೆಯ ದೃಷ್ಟಿಯಿಂದ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್‌ ಕಾಲೇಜು ಆರಂಭಕ್ಕೆ ಕ್ರಮ ಕೈಗೊಳ್ಳುತ್ತಾರೆ ಎಂಬ ವಿಶ್ವಾಸ ಇದೆ. ಜಿಲ್ಲಾ ಆಸ್ಪತ್ರೆ ಯಲ್ಲಿ ವೈದ್ಯರು, ಮೂಲ ಸೌಕರ್ಯ ಕೊರತೆ ಯಿಂದ ಸಮಸ್ಯೆಗೆ ಸಿಲುಕಿದ್ದಾರೆ. ಸರಕಾರ ವಿಳಂಬ ಮಾಡದೇ ಮೆಡಿಕಲ್‌ ಕಾಲೇಜು ಆರಂಭಕ್ಕೆ ಮುಂದಾಗಬೇಕು ಎಂದರು.

ಅಹಿಂದ ಬಳಗದ ಮುಖಂಡ ಮುರುಘರಾಜೇಂದ್ರ ಒಡೆಯರ್‌, ಸಮಿತಿ ಅಧ್ಯಕ್ಷ ಟಿ.ಷಫೀವುಲ್ಲಾ, ಕೆ. ಸಾಕ್ಯ ಹೊಳೆಯಪ್ಪ, ಸಹನ, ಅನಿಲ್‌.ಎಸ್‌, ಉಮ್ಮೆ ಜೈಬಾ, ಮಂಜುನಾಥ, ಲಂಕೇಶ್‌ ಹಾಯ್ಕಲ್‌, ಫಯಾಜ್‌, ಮೊಹಿದ್ದೀನ್‌, ಶರೀಫ್‌, ಆಕಾಸ್‌, ದೀಪಕ್‌ಕುಮಾರ್‌ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ