ಆ್ಯಪ್ನಗರ

ಲಾರಿ ಬಸ್‌ ಮುಖಾಮುಖಿ ಡಿಕ್ಕಿ: ಒಬ್ಬ ಸಾವು, 20 ಮಂದಿಗೆ ಗಾಯ

ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಸಮೀಪದ ಕೋಟೆಹಾಳ್‌ ಕ್ರಾಸ್‌ ರಸ್ತೆಯಲ್ಲಿ ಖಾಸಗಿ ಬಸ್‌ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲಿಯೇ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.

Vijaya Karnataka 30 Jan 2019, 5:00 am
ಚಿಕ್ಕಜಾಜೂರು: ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಸಮೀಪದ ಕೋಟೆಹಾಳ್‌ ಕ್ರಾಸ್‌ ರಸ್ತೆಯಲ್ಲಿ ಖಾಸಗಿ ಬಸ್‌ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲಿಯೇ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
Vijaya Karnataka Web lorry bus collides with one person injures 20 people
ಲಾರಿ ಬಸ್‌ ಮುಖಾಮುಖಿ ಡಿಕ್ಕಿ: ಒಬ್ಬ ಸಾವು, 20 ಮಂದಿಗೆ ಗಾಯ


ಹೊಳಲ್ಕೆರೆ ತಾಲೂಕಿನ ಎಚ್‌.ಡಿ. ಪುರ ಗ್ರಾಮದ ಹೊರಕೇರಪ್ಪ(40)ಮೃತ ವ್ಯಕ್ತಿ. ಈತ ಖಾಸಗಿ ಶಾಲೆ ಬಸ್‌ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ.

ಲಾರಿ, ಪಶುವಿಗೆ ಆಹಾರ ತುಂಬಿಕೊಂಡು ದಾವಣಗೆರೆಯಿಂದ ಹೊಳಲ್ಕೆರೆಗೆ ಹೋಗುತ್ತಿತ್ತು. 40 ಜನರು ಪ್ರಯಾಣಿಸುತ್ತಿದ್ದ ಬಸ್‌ ಹೊಳಲ್ಕೆರೆಯಿಂದ ದಾವಣಗೆರೆ ಬರುತ್ತಿತ್ತು. ವೇಗವಾಗಿ ಬಸ್‌ ಚಾಲನೆ ಮಾಡುತ್ತಿದ್ದ ಚಾಲಕ, ಕೋಟೆಹಾಳ್‌ ಕ್ರಾಸ್‌ ರಸ್ತೆಯಲ್ಲಿನ ಟ್ರಂಚ್‌ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಲಾರಿ ಚಾಲಕ ಪುಟ್ಟುರಾಜು, ಕ್ಲೀನರ್‌ ಜಯಪ್ಪ ಸೇರಿದಂತೆ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇವರನ್ನು ಚಿಕ್ಕಜಾಜೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ತೀವ್ರ ಗಾಯಗೊಂಡ ಕೆಲವರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಲ್ಲಿ ಎರಡು ವಾಹನಗಳು ನಜ್ಜುಗುಜ್ಜಾಗಿವೆ. ಈ ಕುರಿತು ಚಿಕ್ಕಜಾಜೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ