ಆ್ಯಪ್ನಗರ

ಲಾರಿ-ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ತಾಲೂಕಿನ ಮೇಟಿಕುರ್ಕೆ ಗ್ರಾಮದ ಹತ್ತಿರದ ಎನ್‌ಎಚ್‌4 ರಸ್ತೆಯಲ್ಲಿ ಬುಧವಾರ ಇನ್ನೋವಾ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ನಡೆದು ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.

Vijaya Karnataka 2 May 2019, 5:00 am
ಹಿರಿಯೂರು : ತಾಲೂಕಿನ ಮೇಟಿಕುರ್ಕೆ ಗ್ರಾಮದ ಹತ್ತಿರದ ಎನ್‌ಎಚ್‌4 ರಸ್ತೆಯಲ್ಲಿ ಬುಧವಾರ ಇನ್ನೋವಾ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ನಡೆದು ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.
Vijaya Karnataka Web lorry car collision five deaths of one family
ಲಾರಿ-ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ಸಾವು


ಕಾರಿನಲ್ಲಿದ್ದ ಆಂಧ್ರ ಮೂಲದ ತಾಯಮ್ಮ(50), ಮುಂಬಯಿ ಮೂಲದ ಸುಶ್ಮಿತಾ(12), ಬೆಂಗಳೂರಿನ ಲತಾ(26), ವರ್ಣಿಕಾ(9) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಜಾಹ್ನವಿ(3) ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾಳೆ.

ಆಂಧ್ರ ಮೂಲದ ಚಾಲಕ ಪ್ರಕಾಶ್‌ಗೆ(33) ತೀವ್ರ ಗಾಯಾಗಳಾಗಿದ್ದು, ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕ ಪ್ರಕಾಶ್‌ರ ಪತ್ನಿ ಲತಾ ಹಾಗೂ ಪುತ್ರಿ ವರ್ಣಿಕಾ ಮೃತಪಟ್ಟಿದ್ದಾರೆ.

ಭದ್ರಾವತಿಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಮತ್ತು ಲಾರಿ ನಡುವೆ ಅಪಘಾತ ನಡೆದಿದೆ. ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಒಬ್ಬರು ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಎಸ್ಪಿ ಕೆ.ಅರುಣ್‌, ಹೆಚ್ಚುವರಿ ಪೋಲಿಸ್‌ ಅಧೀಕ್ಷ ಕ ನಂದಗಾವಿ, ಡಿವೈಎಸ್‌ಪಿ ರಮೇಶ್‌, ವೃತ್ತ ನಿರೀಕ್ಷ ಕ ಚಿನ್ನೇಗೌಡ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮಾಂತರ ಪೋಲಿಸ್‌ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ