ಆ್ಯಪ್ನಗರ

‘ಸಿದ್ದರಾಮಯ್ಯ ಹೇಳಿದ್ದಕ್ಕೆಲ್ಲ ಉತ್ತರ ಕೊಡಲು ಆಗೋದಿಲ್ಲ’: ಬಿ.ಸಿ ಪಾಟೀಲ್ ಕಿಡಿ

'ಸಿದ್ದರಾಮಯ್ಯ ಒಬ್ಬರೇ ಬಾರಿ ಜವಾಬ್ದಾರಿಯಿಂದ ಕೆಲಸ ಮಾಡಿದ್ದಾರಾ? ಅವರ ಮಾತಿನ ಅರ್ಥವೇನು? ದಾವಣಗೆರೆಯಲ್ಲಿ ಒಂದೂವರೆ ಸಾವಿರ ಹೆಕ್ಟೇರ್‌ ಬೆಳೆ ಹಾನಿಯಾಗಿದೆ. ಅಲ್ಲಿಗೆ ಪರಿಶೀಲನೆಗಾಗಿ ಹೋಗುತ್ತಿದ್ದೇವೆ. ಎಲ್ಲ ಸಚಿವರು ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಹೇಳಿದ್ದಕ್ಕೆಲ್ಲ ಉತ್ತರ ಕೊಡಲು ಆಗೋದಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ವಿಪಕ್ಷ ನಾಯಕ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Vijaya Karnataka 21 May 2022, 6:22 am

ಹೈಲೈಟ್ಸ್‌:

  • ಸಿದ್ದರಾಮಯ್ಯ ಹೇಳಿದ್ದಕ್ಕೆಲ್ಲ ಉತ್ತರ ಕೊಡಲು ಆಗೋದಿಲ್ಲ.
  • ನಮಗೂ ಜವಾಬ್ದಾರಿಯಿದೆ, ಕೆಲಸ ಮಾಡುತ್ತಿದ್ದೇವೆ
  • ವಿಪಕ್ಷ ನಾಯಕ ವಿರುದ್ಧ ಕೃಷಿ ಸಚಿವ ಬಿ.ಸಿ.ಪಾಟೀಲ್‌ ಆಕ್ರೋಶ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
ಚಿತ್ರದುರ್ಗ : 'ಸಿದ್ದರಾಮಯ್ಯ ಹೇಳಿದ್ದಕ್ಕೆಲ್ಲ ಉತ್ತರ ಕೊಡಲು ಆಗೋದಿಲ್ಲ. ದಿನ ಬೆಳಗ್ಗೆ ಸಿದ್ದರಾಮಯ್ಯನವರ ಮನೆ ಬಾಗಿಲಲ್ಲಿ ಕುಳಿತುಕೊಳ್ಳಬೇಕಾ? ನಮಗೂ ಜವಾಬ್ದಾರಿಯಿದೆ, ಕೆಲಸ ಮಾಡುತ್ತಿದ್ದೇವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ವಿಪಕ್ಷ ನಾಯಕ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು 'ಸಿದ್ದರಾಮಯ್ಯ ಒಬ್ಬರೇ ಬಾರಿ ಜವಾಬ್ದಾರಿಯಿಂದ ಕೆಲಸ ಮಾಡಿದ್ದಾರಾ? ಅವರ ಮಾತಿನ ಅರ್ಥವೇನು? ದಾವಣಗೆರೆಯಲ್ಲಿ ಒಂದೂವರೆ ಸಾವಿರ ಹೆಕ್ಟೇರ್‌ ಬೆಳೆ ಹಾನಿಯಾಗಿದೆ. ಅಲ್ಲಿಗೆ ಪರಿಶೀಲನೆಗಾಗಿ ಹೋಗುತ್ತಿದ್ದೇವೆ. ಎಲ್ಲ ಸಚಿವರು ಕೆಲಸ ಮಾಡುತ್ತಿದ್ದಾರೆ ಎಂದರು. ಸಿಎಂ ಬೆಂಗಳೂರು ರೌಂಡ್ಸ್‌ ಕುರಿತ ಟೀಕೆಗೆ ಪ್ರತಿಕ್ರಿಯಿಸಿದ ಬಿ. ಸಿ ಪಾಟೀಲ್ ಸಚಿವರು' ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷದ ಅಸ್ತಿತ್ವದ ಪ್ರಶ್ನೆಯಾಗಿದೆ. ಹಾಗಾಗಿ ಮಾಧ್ಯಮಗಳ ಮುಂದೆ ಟೀಕೆ ಮಾಡುತ್ತಾರೆ. ಕಾಮಾಲೆ ಕಣ್ಣಿನವರಿಗೆ ಜಗತ್ತೆಲ್ಲಾ ಹಳದಿಯಾಗಿ ಕಾಣುತ್ತದೆ. ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರಿಗೆ ಎಲ್ಲವೂ ಹಳದಿಯಾಗಿ ಕಾಣುತ್ತದೆ' ಎಂದು ಕುಟುಕಿದರು.
ಸಿದ್ದರಾಮಯ್ಯ ಮತ್ತೆ ಎಂದಿಗೂ ಸಿಎಂ ಆಗಲ್ಲ: ಬಿಸಿ ಪಾಟೀಲ್ ಭವಿಷ್ಯ
'ಕೋಮು ಸಂಘಟನೆಗಳನ್ನು ಬ್ಯಾನ್‌ ಮಾಡಬೇಕು' ಎಂಬ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿ. ಸಿ ಪಾಟೀಲ್ ,'ಮೊದಲು ಮುಸ್ಲಿಂ ಸಂಘಟನೆಗಳನ್ನೆಲ್ಲ ಬ್ಯಾನ್‌ ಮಾಡಲಿ, ಅವರಿದ್ದಾಗ ಎಲ್ಲಾ ಬ್ಯಾನ್‌ ಮಾಡಿದ್ರಾ?' ಎಂದು ಪ್ರಶ್ನಿಸಿದರು.

ರಸಗೊಬ್ಬರ ಕೊರತೆ ಇಲ್ಲ'ರಾಜ್ಯದಲ್ಲಿ ರಸಗೊಬ್ಬರದ ಸಮಸ್ಯೆ ಇಲ್ಲ. 11, 18,519 ಲಕ್ಷ ಮೆಟ್ರಿಕ್‌ ಟನ್‌ ರಸಗೊಬ್ಬರ ಸಂಗ್ರಹ ಇದೆ. ಏ.1 ಕ್ಕೆ ಆರಂಭಿಕ ಶಿಲ್ಕು 5,94,773 ಲಕ್ಷ ಮೆಟ್ರ್ರಿಕ್‌ ಟನ್‌ ಇತ್ತು. ಆನಂತರ 5,23,746 ಲಕ್ಷ ಮೆಟ್ರಿಕ್‌ ಟನ್‌ ಗೊಬ್ಬರ ಬಂದಿದೆ. ಎಲ್ಲಿಯೂ ಕೊರತೆ ಇಲ್ಲ. ಮುಂಗಾರು ಆರಂಭವಾಗಿರುವುದರಿಂದ ಬೀಜ, ಗೊಬ್ಬರದ ಅಭಾವ ಆಗದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಕ್ರಮವಾಗಿ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ