ಆ್ಯಪ್ನಗರ

ಹಂಪನಾರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಸಾಣೇಹಳ್ಳಿ ಶ್ರೀ

ಈ ನಾಡಿನಲ್ಲಿ ಅಭಿಪ್ರಾಯ ಸ್ವಾತಂತ್ರ್ಯ ಎನ್ನುವುದು ಪ್ರತಿಯೊಬ್ಬರಿಗೂ ಇದೆ. ಅದನ್ನು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ. ಕಸಿದುಕೊಳ್ಳುವುದು ಪ್ರಜಾಪ್ರಭುತ್ವವೂ ಆಗುವುದಿಲ್ಲ ಎಂದು ಸಾಣೇಹಳ್ಳಿ ಶ್ರೀಗಳು ಹೇಳಿದ್ದಾರೆ.

Agencies 23 Jan 2021, 1:50 pm
ಚಿತ್ರದುರ್ಗ: ಹಂಪ ನಾಗರಾಜಯ್ಯ ಸರಕಾರದ ವಿರುದ್ದ ಧ್ವನಿ ಎತ್ತಿದ್ದು ಸ್ವಾಗತಾರ್ಹ. ಅವರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಯಬಾರದು. ಪೋಲೀಸರು ಹಂಪನಾರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದು ನಮಗೆ ಬೇಸರ ಮೂಡಿಸಿದೆ ಎಂದು ಸಿರಿಗೆರೆ ತರಳಾಬಾಳು ಶಾಖಾ ಮಠ ಸಾಣೇಹಳ್ಳಿಯ ಪೀಠಾಧಿಪತಿ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಹೇಳಿದ್ದಾರೆ.
Vijaya Karnataka Web sanehalli swamiji
ಸಾಣೇಹಳ್ಳಿ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ


ಈ ನಾಡಿನಲ್ಲಿ ಅಭಿಪ್ರಾಯ ಸ್ವಾತಂತ್ರ್ಯ ಪ್ರತಿಯೊಬ್ಬರಿಗೂ ಇದೆ. ಅದನ್ನು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ. ಕಸಿದುಕೊಳ್ಳುವುದು ಪ್ರಜಾಪ್ರಭುತ್ವವೂ ಆಗುವುದಿಲ್ಲ. ನಾಗರಾಜಯ್ಯರ ಅಭಿಪ್ರಾಯವನ್ನು ಸ್ವಾಗತಿಸಿ, ಪೋಲೀಸರ ಧೋರಣೆ ವಿರೋಧಿಸುತ್ತೇನೆ ಎಂದ ಸಾಣೆಹಳ್ಳಿ ಶ್ರೀಗಳು ಹಂಪನಾ ಅವರನ್ನು ಬೆಂಬಲಿಸಿದ್ದಾರೆ.

ಕಳೆದ ಒಂದು ವರ್ಷದಿಂದ ದೆಹಲಿಯಲ್ಲಿ ರೈತರು, ಮಹಿಳೆಯರು ಪ್ರತಿಭಟನೆ ಮಾಡುತ್ತಿದ್ದಾರೆ. ಸರಕಾರದ ಮೂರು ಕಾನೂನುಗಳ ವಿರುದ್ದ ಹೋರಾಟ ನಡೆಸಿದ್ದಾರೆ. ಮಳೆ, ಚಳಿ, ಗಾಳಿ ಲೆಕ್ಕಿಸದೇ ಕೆಲವು ಸಾರಿ ಉಪವಾಸ ಸತ್ಯಾಗ್ರಹ ಮಾಡಿದ್ದಾರೆ. ರೈತರನ್ನು ಸಂಧಾನ ಮಾಡಲು ಸರಕಾರ ಹನ್ನೊಂದು ಸಾರಿ ವಿಫಲವಾಗಿದೆ. ಭಾರತ ಬದುಕಿರುವುದೇ ರೈತರ ಆದಾರದ ಮೇಲೆ. ರೈತ ಈ ನಾಡಿನ ಬೆನ್ನೆಲುಬು ಎಂದು ಅವರು ತಿಳಿಸಿದ್ದಾರೆ.

ರೈತರ ಬೇಡಿಕೆಗಳನ್ನು ಈಡೇರಿಸುವುದು ಎಲ್ಲಾ ಸರಕಾರಗಳ ಜವಾಬ್ದಾರಿ. ರೈತರಿಗೆ ಬೆಂಬಲವಾಗಿ ನಿಲ್ಲುವುದು ಸಾಹಿತಿ, ಪ್ರಜ್ಞಾವಂತರ, ಮಠಾಧೀಶರ, ರಾಜಕಾರಣಿಗಳ ಹೊಣೆಗಾರಿಕೆ. ನಾವೆಲ್ಲ ಆಹಾರ ಸೇವಿಸಲು ಕಾರಣ ರೈತರು ಎಂದು ಅವರು ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ