ಆ್ಯಪ್ನಗರ

ಕೊಪ್ಪಳದಿಂದ ಸ್ಪರ್ಧಿಸುವಂತೆ ಸೂಚನೆ ಇಲ್ಲ: ಶ್ರೀರಾಮುಲು

ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಹೈಕಮಾಂಡ್‌ನಿಂದ ನಮಗೆ ಯಾವುದೇ ಸೂಚನೆ ಇಲ್ಲ ಎಂದು ಶಾಸಕ, ರಾಜ್ಯ ಬಿಜೆಪಿ ಮುಖಂಡ ಬಿ.ಶ್ರೀರಾಮುಲು ತಿಳಿಸಿದರು.

Vijaya Karnataka 27 Mar 2019, 5:00 am
ಚಿತ್ರದುರ್ಗ: ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಹೈಕಮಾಂಡ್‌ನಿಂದ ನಮಗೆ ಯಾವುದೇ ಸೂಚನೆ ಇಲ್ಲ ಎಂದು ಶಾಸಕ, ರಾಜ್ಯ ಬಿಜೆಪಿ ಮುಖಂಡ ಬಿ.ಶ್ರೀರಾಮುಲು ತಿಳಿಸಿದರು.
Vijaya Karnataka Web notice to contest from koppal sreeramulu
ಕೊಪ್ಪಳದಿಂದ ಸ್ಪರ್ಧಿಸುವಂತೆ ಸೂಚನೆ ಇಲ್ಲ: ಶ್ರೀರಾಮುಲು


ಚಿತ್ರದುರ್ಗದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇಂದು ಸಂಜೆವೇಳೆಗೆ ಕೊಪ್ಪಳ ಟಿಕೆಟ್‌ ಅಂತಿಮ ಆಗಲಿದೆ. ಏಪ್ರಿಲ್‌ 2ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈಗಾಗಲೇ ಪ್ರಚಾರ ಕೂಡ ಆರಂಭಿಸಲಾಗಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ಕೊಟ್ಟು ರಾಜ್ಯ ರಾಜಕಾರಣದಲ್ಲಿ ಮುಂದುವರೆಯಬೇಕು ಎಂಬುದು ಯಡಿಯೂರಪ್ಪ ಮತ್ತು ನಮ್ಮ ತೀರ್ಮಾನವೂ ಅದೇ ಆಗಿದೆ ಎಂದರು.

ನಮಗೆ ಪೂರ್ತಿ ವಿಶ್ವಾಸ ಇದೆ. ದಕ್ಷಿಣ ಭಾರತದ ಹೆಬ್ಬಾಗಿಲು ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ 24ಕ್ಕೂ ಹೆಚ್ಚು ಸ್ಥಾನ ಗೆದ್ದು ನರೇಂದ್ರ ಮೋದಿ ಅವರು ಇನ್ನೊಂದು ಬಾರಿ ಪ್ರಧಾನಿ ಆಗಬೇಕು ಎಂಬುದು ನಮ್ಮ ಇಚ್ಛೆ ಆಗಿದೆ ಎಂದರು.

ಬಳ್ಳಾರಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷ ಕ್ಕೆ ಬಹಳ ಹಿಂದಿನಿಂದಲೂ ಶಕ್ತಿ ಇದೆ. ಉಪ ಚುನಾವಣೆಯಲ್ಲಿ ಸೋತಿರಬಹುದು. ಉಪ ಚುನಾವಣೆಯೇ ಬೇರೆ, ಸಾರ್ವತ್ರಿಕ ಚುನಾವಣೆಯೇ ಬೇರೆ, ಈ ಚುನಾವಣೆಯಲ್ಲಿ ಅಲ್ಲಿನ ಜನತೆ ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪರನ್ನ ಕೈಹಿಡೀತಾರೆ. ನರೇಂದ್ರ ಮೋದಿ ಅವರನ್ನ ಗೆಲ್ಲಿಸ್ತಾರೆ ಎಂದರು.

ನಮಗೆ ಕಾಂಗ್ರೆಸ್‌ನ ಯಾವುದೇ ಶಾಸಕರು ಸಂಪರ್ಕದಲ್ಲಿ ಇಲ್ಲ, ನಮ್ಮದೇ ಆದ ಕಾರ್ಯಕರ್ತರು ಶಕ್ತಿಶಾಲಿ ಆಗಿದ್ದಾರೆ. ಕಾರ್ಯಕರ್ತರ ಮೂಲಕ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುತ್ತೇವೆ ಎಂದರು.

ನಮ್ಮ ಕೋರ್‌ ಕಮಿಟಿಯಿಂದ ಒಮ್ಮತದ ಅಭ್ಯರ್ಥಿ ಪಟ್ಟಿ ಮಾಡಿ ಹೈಕಮಾಂಡ್‌ಗೆ ಕಳುಹಿಸಿದ್ದೇವೆ. ರಾಷ್ಟ್ರೀಯ ಅಧ್ಯಕ್ಷ ರು, ನಮ್ಮ ಪ್ರಧಾನಿಯವರು ಘೋಷಿಸಿದ ಅಭ್ಯರ್ಥಿಗಳ ಪರವಾಗಿ ನಾವು ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಇನ್ನು ಮುಂದೆ ಡಿಕೆಶಿಯವರು ಪಲ್ಲಕ್ಕಿ ಹೊರುವ ಅವಶ್ಯಕತೆ ಇಲ್ಲ. ಏಕೆಂದರೆ ಪಲ್ಲಕ್ಕಿ ಮೇಲೆ ನಾವೇ ಇರ್ತೀವಿ, ಬಿಜೆಪಿ ಪಲ್ಲಕ್ಕಿಯನ್ನು ಡಿಕೆಶಿ ಹೊರಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ದೇಶದಲ್ಲೇ ಕಾಂಗ್ರೆಸ್‌ ಪಕ್ಷ ಹೆಣವಾಗ್ತಾದೆ ಎಂದರು.

ಭಾರತೀಯ ಜನತಾ ಪಕ್ಷ ಬಹಳ ಹಿಂದಿನಿಂದ ಹಿಂದುತ್ವದ ಆಧಾರದ ಮೇಲೆ ಚುನಾವಣೆ ನಡೆಸಿಕೊಂಡು ಬರುತ್ತಿದೆ. ಎಲ್ಲಾ ವರ್ಗದವರು ಒಂದಾಗಿ ಚಿತ್ರದುರ್ಗದಲ್ಲಿ ನಾರಾಯಣಸ್ವಾಮಿ ಅವರನ್ನು ಗೆಲ್ಲಿಸುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಅವರು ಬೇಲ್‌ ಮೇಲೆ ಹೊರಗಿದ್ದಾರೆ. ಹಾಗಾಗಿ ನೆಹರು ಕುಟುಂಬದವರನ್ನು ಚೋರ್‌ ಎಂಬುದಾಗಿ ಕರೆಯಬೇಕಾಗುತ್ತದೆ. ಗಾಂಧಿ ಎಂಬ ಹೆಸರು ಇಟ್ಟುಕೊಂಡು ಮಹಾತ್ಮ ಗಾಂಧಿ ಅವರ ಮರ್ಯಾದೆ ಕಳೆಯುವಂತ ಕೆಲಸ ಮಾಡುತ್ತಿದ್ದಾರೆ. ಗಾಂಧಿ ಹೆಸರನ್ನು ತೆಗೆದುಹಾಕಿ ಜನರ ಮುಂದೆ ಬರಲಿ ಎಂದು ಸವಾಲು ಹಾಕಿದರು. ರಾಹುಲನ್‌ ಎಂಬ ಹೆಸರು ಇಟ್ಟುಕೊಳ್ಳಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ಪಕ್ಷ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಈ ದೇಶದಲ್ಲಿ ಕಾಂಗ್ರೆಸ್‌ ಪಕ್ಷ ನೆಲಸಮ ಆಗಬೇಕು, ಬೇರು ಸಮೇತ ಕಿತ್ತು ಹಾಕಬೇಕು. ಇದು ನಮ್ಮ ಆಸೆ ಅಷ್ಟೇ ಅಲ್ಲ, ಗಾಂಧೀಜಿ ಆಸೆ ಕೂಡ ಆಗಿತ್ತು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ