ಆ್ಯಪ್ನಗರ

ಕೇಂದ್ರದ ಮಹಿಳಾಪರ ಯೋಜನೆ ಪ್ರಚಾರ ಮಾಡಿ

ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮಹಿಳೆಯರು ಸಂಘಟಿತರಾಗಿ ಕೇಂದ್ರ ಸರಕಾರ ಜಾರಿಗೆ ತಂದಿರುವ ಜನಪರ, ಮಹಿಳಾ ಪರವಾದ ಯೋಜನೆಗಳ ಪ್ರಚಾರ ಮಾಡಬೇಕು ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ಯಾಮಲ ಶಿವಪ್ರಕಾಶ್‌ ಹೇಳಿದರು.

Vijaya Karnataka 9 Sep 2018, 8:52 pm
ಚಿತ್ರದುರ್ಗ: ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮಹಿಳೆಯರು ಸಂಘಟಿತರಾಗಿ ಕೇಂದ್ರ ಸರಕಾರ ಜಾರಿಗೆ ತಂದಿರುವ ಜನಪರ, ಮಹಿಳಾ ಪರವಾದ ಯೋಜನೆಗಳ ಪ್ರಚಾರ ಮಾಡಬೇಕು ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ಯಾಮಲ ಶಿವಪ್ರಕಾಶ್‌ ಹೇಳಿದರು.
Vijaya Karnataka Web promote centers womens plan
ಕೇಂದ್ರದ ಮಹಿಳಾಪರ ಯೋಜನೆ ಪ್ರಚಾರ ಮಾಡಿ


ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, 'ಜಿಲ್ಲೆ ಎಲ್ಲ ಕಡೆ ಮಹಿಳೆಯರ ಬೂತ್‌ ಕಮಿಟಿಯನ್ನು ರಚಿಸಿ, ಪಕ್ಷದ ಸಿದ್ಧಾಂತ, ಕೇಂದ್ರದ ಸಾಧನೆಗಳನ್ನು ಮನವರಿಕೆ ಮಾಡಿಕೊಡಬೇಕು'ಎಂದರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚದಿಂದ ಕೊಡಗಳ್ಳಿಯನ್ನು ದತ್ತು ತೆಗೆದುಕೊಂಡಿದ್ದು, ಆ ಗ್ರಾಮ ವನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸುವಲ್ಲಿ ಶಕ್ತಿ ಮೀರಿ ಶ್ರಮಿಸುತ್ತೇನೆ. ಐದುನೂರು ಗಿಡಗಳನ್ನು ಗ್ರಾಮದಲ್ಲಿ ನೆಡಲಾಗುವುದು. ಹಿರಿಯ ನಾಗರೀಕರಿಗೆ ಕೇಂದ್ರದ ಪಿಂಚಣಿ ಕೊಡಿಸುವುದು, ಗ್ರಾಮ ದಲ್ಲಿ ಮೂಲಭೂತ ಸೌಲಭ್ಯ ಅಭಿವೃದ್ಧಿಪಡಿಸಬೇಕಿದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್‌.ನವೀನ್‌ ಮಾತನಾಡಿ, ಮೇ ತಿಂಗಳು ನಡೆದ ವಿಧಾನಸಭೆ ಚುನಾವಣೆ ಯಲ್ಲಿ ಜಿಲ್ಲೆಯಲ್ಲಿ ಐದು ಕ್ಷೇತ್ರಗಳಲ್ಲಿ ಪಕ್ಷ ವನ್ನು ಗೆಲ್ಲಿಸಿಕೊಂಡು ಹಿಂದೆಂದೂ ಕಾಣದ ಗೆಲುವು ಸಾಧಿಸಲಾಗಿದೆ. ಜಿಲ್ಲೆಯಲ್ಲಿ ಪೂರ್ಣಿಮ ಶ್ರೀನಿವಾಸ್‌ರವರನ್ನು ಹಿರಿಯೂರು ಕ್ಷೇತ್ರದಿಂದ ಗೆಲ್ಲಿಸಿ ಕೊಂಡಿರುವುದು ಪಕ್ಷದ ಹೆಗ್ಗಳಿಕೆ ಎಂದರು.

ನಾಲ್ಕುವರೆ ವರ್ಷದಲ್ಲಿ ದೇಶದ ಪ್ರಧಾನಿ ನರೇಂದ್ರಮೋದಿರವರು ಮಹಿಳೆಯರಿಗೆ ನೀಡಿರುವ ವಿಶೇಷ ಯೋಜನೆಳನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ಪಾರ್ಲಿಮೆಂಟ್‌ ಚುನಾವಣೆಯಲ್ಲಿ ಮತ್ತೆ ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಮಹಿಳೆಯರ ಪಾತ್ರ ಮುಖ್ಯವಾದುದು ಎಂದು ಹೇಳಿದರು.

ಲೋಕಸಭಾ ಕ್ಷೇತ್ರದಲ್ಲಿ ಹದಿನೇಳು ಲಕ್ಷ ಮತದಾರರಿದ್ದು, 8.50 ಲಕ್ಷ ಮಹಿಳಾ ಮತದಾರ ರಿರುವುದರಿಂದ ನಿಮ್ಮ ನಿಮ್ಮ ಮನೆಗಳಲ್ಲಿ ಹದಿನೆಂಟು ವರ್ಷ ತುಂಬಿರುವ ಯುವಕ, ಯುವತಿ ಯರಿಗೆ ಮೋದಿಯವರ ವಿಚಾರಗಳನ್ನು ತಿಳಿಸಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಒಳ್ಳೆಯ ತಂಡಗಳನ್ನು ಕಟ್ಟಿಕೊಂಡು ಲೋಕಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಿ ಎಂದು ತಿಳಿಸಿದರು.

ಸಭೆಯಲ್ಲಿ ಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿ ಶಾರದ ಬಸಮ್ಮ, ವಕ್ತಾರ ನಾಗರಾಜ್‌ಬೇದ್ರೆ ವೇದಿಕೆಯಲ್ಲಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ