ಆ್ಯಪ್ನಗರ

ರಾಜ್ಯಕ್ಕೆ ಪರಿಹಾರ ನೀಡುವ ವಿಷಯದಲ್ಲಿ ಕೇಂದ್ರ ಸರ್ಕಾರ ಯಾವುದೇ ತಾರತಮ್ಯ ಮಾಡಿಲ್ಲ: ಆರ್‌ ಅಶೋಕ್‌

ರಾಜ್ಯಕ್ಕೆ ಪರಿಹಾರ ನೀಡುವ ವಿಷಯದಲ್ಲಿ ಕೇಂದ್ರ ಸರ್ಕಾರ ಯಾವುದೇ ತಾರತಮ್ಯ ಧೋರಣೆ ಅನುಸರಿಸಿಲ್ಲ ಎಂದ ಆರ್ ಅಶೋಕ್, ಕಳೆದ ಬಾರಿ ಕೇಂದ್ರ ಸರಕಾರ ಸಾವಿರ ಕೋಟಿಗೂ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿತ್ತು. ಈ ಬಾರಿ ಕೂಡಾ ಪರಿಹಾರ ಶೀಘ್ರವಾಗಿ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ನಾನು 14 ಜಿಲ್ಲೆಗಳಲ್ಲಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಅತಿವೃಷ್ಟಿಯಿಂದ ಸಂಭವಿಸಿರುವ ಅನಾಹುತ, ಹಾನಿಗೆ ಸಂಬಂಧಿಸಿದ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಿ, ಪರಿಹಾರ ಒದಗಿಸಲು ಕೋರಲಾಗುವುದು ಎಂದರು.

Vijaya Karnataka 11 Aug 2022, 8:58 pm

ಹೈಲೈಟ್ಸ್‌:

  • ರಾಜ್ಯಕ್ಕೆ ಪರಿಹಾರ ನೀಡುವ ವಿಷಯದಲ್ಲಿ ಕೇಂದ್ರ ಸರ್ಕಾರ ಯಾವುದೇ ತಾರತಮ್ಯ ಧೋರಣೆ ಅನುಸರಿಸಿಲ್ಲ
  • ಕಳೆದ ಬಾರಿ ಕೇಂದ್ರ ಸರಕಾರ ಸಾವಿರ ಕೋಟಿಗೂ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿತ್ತು
  • ಈ ಬಾರಿ ಕೂಡಾ ಪರಿಹಾರ ಶೀಘ್ರವಾಗಿ ಬಿಡುಗಡೆ ಮಾಡುವ ನಿರೀಕ್ಷೆ ಇದೆ
  • ಚಿತ್ರದುರ್ಗ ತಾಲೂಕಿನಲ್ಲಿ ಕಂದಾಯ ಸಚಿವ ಆರ್‌ ಅಶೋಕ್‌ ಹೇಳಿಕೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web R Ashok
ಚಿತ್ರದುರ್ಗ: ರಾಜ್ಯಕ್ಕೆ ಪರಿಹಾರ ನೀಡುವ ವಿಷಯದಲ್ಲಿ ಕೇಂದ್ರ ಸರ್ಕಾರ ಯಾವುದೇ ತಾರತಮ್ಯ ಧೋರಣೆ ಅನುಸರಿಸಿಲ್ಲ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಹೇಳಿದ್ದಾರೆ.
ಚಿತ್ರದುರ್ಗ ತಾಲೂಕಿನ ಬೆಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳೆದ ಬಾರಿ ಕೇಂದ್ರ ಸರಕಾರ ಸಾವಿರ ಕೋಟಿಗೂ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿತ್ತು. ಈ ಬಾರಿ ಕೂಡಾ ಪರಿಹಾರ ಶೀಘ್ರವಾಗಿ ಬಿಡುಗಡೆ ಮಾಡುವ ನಿರೀಕ್ಷೆ ಇದೆ ಎಂದರು.

ಇದೇ ವೇಳೆ ಎಚ್‌ಡಿಕೆ ವಿರುದ್ಧ ಕಿಡಿಕಾರಿದ ಅವರು, ರಾಜ್ಯದ ಜನ ಸಂಕಷ್ಟದಲ್ಲಿರುವಾಗ ವಿದೇಶಕ್ಕೆ ತೆರಳುವ, ಅಧಿವೇಶನ ನಡೆಯುವಾಗ ವಿಧಾನ ಸೌಧ ಪ್ರವೇಶಿಸದ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಯಾವ ರೈತರ ನೋವು, ಸಂಕಷ್ಟದ ಅರಿವಿದೆ? ಎಂದು ಪ್ರಶ್ನಿಸಿದ ಆರ್ ಅಶೋಕ್, ಎಚ್‌ಡಿ ಕುಮಾರಸ್ವಾಮಿ ಅವರು ಯಾವ ಸಂಕಷ್ಟದ ಪ್ರದೇಶಗಳಿಗೂ ಭೇಟಿ ನೀಡಿಲ್ಲ. ಅಧಿವೇಶನದಲ್ಲೂ ಇಂತಹ ವಿಷಯಗಳನ್ನು ಚರ್ಚಿಸುವುದಿಲ್ಲ. ನಾನು 14 ಜಿಲ್ಲೆಗಳಲ್ಲಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಅತಿವೃಷ್ಟಿಯಿಂದ ಸಂಭವಿಸಿರುವ ಅನಾಹುತ, ಹಾನಿಗೆ ಸಂಬಂಧಿಸಿದ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಿ, ಪರಿಹಾರ ಒದಗಿಸಲು ಕೋರಲಾಗುವುದು ಎಂದರು.
ಹಾವೇರಿ ಬೆಳೆ ಹಾನಿ ವರದಿ ಉತ್ಪ್ರೇಕ್ಷೆಯಿಂದ ಕೂಡಿದೆ, ನಿಖರ ವರದಿ ನೀಡಿ: ಸಿಎಂ ಬೊಮ್ಮಾಯಿ ಸೂಚನೆ
ತಿಂಗಳಲ್ಲೇ ಪರಿಹಾರ
ಮಳೆಯಿಂದ ಉಂಟಾದ ಬೆಳೆಹಾನಿ ಸರ್ವೇ ನಡೆಸಿ ಮಾಹಿತಿ ನೀಡಿದರೆ, ಆದಷ್ಟು ಶೀಘ್ರದಲ್ಲಿ ತಿಂಗಳೊಳಗೆ ಬೆಳೆಹಾನಿ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಕಂದಾಯ ಸಚಿವರು ಭರವಸೆ ನೀಡಿದರು. 'ಬೆಳೆಹಾನಿಯಿಂದಾಗಿ ರೈತರು ಕಂಗಾಲಾಗಿದ್ದಾರೆ. ಬೆಳೆ ಹಾನಿಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿಗಳ ಬಳಿ ಮಾತನಾಡಿದ್ದು, ಬೆಳೆ ಪರಿಹಾರ ಮೊತ್ತವನ್ನು ಮುಖ್ಯಮಂತ್ರಿಗಳು ದುಪ್ಟಟ್ಟು ಮಾಡಿದ್ದಾರೆ. ಹೆಕ್ಟೇರ್‌ಗೆ 13,800 ರೂ. ಹೆಚ್ಚಳ ಮಾಡಲಾಗಿದೆ. ಬೆಳೆಹಾನಿ ಸಮೀಕ್ಷೆ ನಡೆಸಿ ಆಪ್‌ನಲ್ಲಿ ಅಪ್‌ಲೊಡ್‌ ಮಾಡಿದ ತಕ್ಷಣ ಪರಿಹಾರ ನೀಡುತ್ತೇವೆ. ಮಧ್ಯವರ್ತಿಗಳ ಕಾಟ ತಪ್ಪಿಸಿ, ರೈತರ ಖಾತೆಗೆ ನೇರವಾಗಿ ಪರಿಹಾರದ ಹಣ ಜಮಾ ಮಾಡಲಾಗುವುದು ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ