ಆ್ಯಪ್ನಗರ

ರಾಘವೇಂದ್ರ ಬಿಇಡಿ ಕಾಲೇಜ್‌ಗೆ ಶೇ.100ರ ಫಲಿತಾಂಶ

ತಾಲೂಕಿನ ಮಲ್ಲಾಡಿಹಳ್ಳಿ ಅನಾಥಸೇವಾಶ್ರಮ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ರಾಘವೇಂದ್ರ ಬಿಇಡಿ ಕಾಲೇಜಿನ ಪ್ರಸಕ್ತ ಸಾಲಿನ ದಾವಣಗೆರೆ ವಿಶ್ವವಿದ್ಯಾನಿಲಯ ಮಟ್ಟದ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್‌ಗಳ ಫಲಿತಾಂಶ ಪ್ರಕಟವಾಗಿದ್ದು, ಕಾಲೇಜು ಶೇ.100ರಷ್ಟು ಫಲಿತಾಂಶ ಪಡೆದುಕೊಂಡಿದೆ.

Vijaya Karnataka 27 Sep 2018, 5:00 am
ಹೊಳಲ್ಕೆರೆ : ತಾಲೂಕಿನ ಮಲ್ಲಾಡಿಹಳ್ಳಿ ಅನಾಥಸೇವಾಶ್ರಮ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ರಾಘವೇಂದ್ರ ಬಿಇಡಿ ಕಾಲೇಜಿನ ಪ್ರಸಕ್ತ ಸಾಲಿನ ದಾವಣಗೆರೆ ವಿಶ್ವವಿದ್ಯಾನಿಲಯ ಮಟ್ಟದ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್‌ಗಳ ಫಲಿತಾಂಶ ಪ್ರಕಟವಾಗಿದ್ದು, ಕಾಲೇಜು ಶೇ.100ರಷ್ಟು ಫಲಿತಾಂಶ ಪಡೆದುಕೊಂಡಿದೆ.
Vijaya Karnataka Web raghavendra bd college is 100 results
ರಾಘವೇಂದ್ರ ಬಿಇಡಿ ಕಾಲೇಜ್‌ಗೆ ಶೇ.100ರ ಫಲಿತಾಂಶ


ತೃತೀಯ ಸೆಮಿಸ್ಟರ್‌ನಲ್ಲಿ ಒಟ್ಟು 36 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 10 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಹೊಂದಿದ್ದಾರೆ. ಎನ್‌.ಗಣೇಶ್‌ (519) ಅಂಕಗಳಿಸಿ ಪ್ರಥಮ ಸ್ಥಾನ, ಎಂ.ಡಿ.ಮಧು (510) ಅಂಕ, ಹಾಗೂ ಎಂ.ಪಿ.ಪವಿತ್ರಾ (510) ಅಂಕಗಳಿಸಿ ದ್ವಿತೀಯ ಸ್ಥಾನ, ರೇಷ್ಮಾಬಾನು (509) ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪ್ರಥಮ ಸೆಮಿಸ್ಟರ್‌ನಲ್ಲಿ ಒಟ್ಟು 31 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 20 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಹೊಂದಿದ್ದು, ಕೆ.ಗೋಪಿ (500) ಅಂಕಗಳಿಸಿ ಪ್ರಥಮ ಸ್ಥಾನ, ಕೆ.ಆರ್‌.ರಮ್ಯಾ (495) ಅಂಕಗಳಿಸಿ ದ್ವಿತೀಯ ಸ್ಥಾನ ಹಾಗೂ ಕೆ.ಎಸ್‌.ಅನ್ನಪೂರ್ಣ (491) ಅಂಗಳಿಸಿ ತೃತೀಯ ಸ್ಥಾನ ಗಳಿಸಿದ್ದಾರೆ.

ಅತ್ಯುತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದ ಅಧ್ಯಾಪಕ ಮತ್ತು ಅಧ್ಯಾಪಕೇತರ ವರ್ಗದವರನ್ನು ಅನಾಥಸೇವಾಶ್ರಮದ ಅಧ್ಯಕ್ಷ ಡಾ.ಶಿವಮೂರ್ತಿ ಮುರುಘಾ ಶರಣರು, ಅನಾಥಸೇವಾಶ್ರಮದ ವಿಶೇಷಾಧಿಕಾರಿ ಪ್ರೊ.ಟಿ.ಎಚ್‌.ಕೃಷ್ಣಮೂರ್ತಿ, ಸ್ಥಾನಿಕಾಧಿಕಾರಿ ಕೆ.ಎಂ.ತಿಮ್ಮರಾಜು ಅಭಿನಂದಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ