ಆ್ಯಪ್ನಗರ

ಗುಡುಗು ಸಹಿತ ಸುರಿದ ಮಳೆರಾಯ

ಕೋಟೆನಾಡು ಚಿತ್ರದುರ್ಗದಲ್ಲಿ ಮಂಗಳವಾರ ಸಂಜೆ ಕೆಲ ಕಾಲ ಗುಡುಗು ಸಹಿತ ಜೋರಾದ ಮಳೆ ಸುರಿಯಿತು.

Vijaya Karnataka 10 Apr 2019, 5:00 am
ಚಿತ್ರದುರ್ಗ : ಕೋಟೆನಾಡು ಚಿತ್ರದುರ್ಗದಲ್ಲಿ ಮಂಗಳವಾರ ಸಂಜೆ ಕೆಲ ಕಾಲ ಗುಡುಗು ಸಹಿತ ಜೋರಾದ ಮಳೆ ಸುರಿಯಿತು.
Vijaya Karnataka Web rainy rain with thunder
ಗುಡುಗು ಸಹಿತ ಸುರಿದ ಮಳೆರಾಯ


ಸಂಜೆ ನಾಲ್ಕೂವರೆಗೆ ಆರಂಭವಾದ ಮಳೆ ಅರ್ಧ ತಾಸಿಗೂ ಹೆಚ್ಚು ಕಾಲ ಧಾರಾಕಾರವಾಗಿ ಸುರಿಯಿತು. ಇದರಿಂದ ಕಾದ ಕಾವಲಿಯಂತಾಗಿದ್ದ ಇಳೆಯನ್ನು ತಂಪಾಗಿಸಿತು.

ಹಿಂದೆಂದಿಗಿಂತ ಈ ವರ್ಷ ಅಧಿಕ ತಾಪಮಾನದಿಂದ ಕೂಡಿತ್ತು. ಬಿಸಿಲಿನ ಝಳಕ್ಕೆ ಜನ ತತ್ತರಿಸಿದ್ದರು. ಮಂಗಳವಾರ ಸುರಿದ ಮಳೆಯಿಂದ ತಂಪಿನ ವಾತಾವರಣ ಸೃಷ್ಟಿಯಾಯಿತು.

ಧಾರಾಕಾರವಾಗಿ ಸುರಿದ ಮಳೆಯಿಂದ ನೀರು ಹರಿಯಿತು. ಕೆಲವು ಕಡೆಗಳಲ್ಲಿ ಚರಂಡಿಗಳು ತುಂಬಿ ಹರಿದವು. ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಮೂಲೆ ಸೇರಿ ಧೂಳು ಹಿಡಿದಿದ್ದ ಛತ್ರಿಗಳು ಹೊರಬಂದವು.

ಕಳೆದ ಎರಡು ದಿನಗಳ ಕಾಲ ಸಂಜೆ ವೇಳೆಯಲ್ಲಿ ಮೋಡ ಕವಿದ ವಾತಾವರಣ ಇದ್ದರೂ ಮಳೆ ಆಗಿರಲಿಲ್ಲ, ಸೋಮವಾರ ಎರಡು ಹನಿ ಬಿದ್ದಿದ್ದವು. ಆದರೆ ಜೋರಾದ ಮಳೆ ಬರುವ ನಿರೀಕ್ಷೆ ಹುಸಿಯಾಗಿತ್ತು. ಆದರೆ ಮಂಗಳವಾರ ಜೋರಾದ ಮಳೆ ಸುರಿದು ವಾತಾವರಣದಲ್ಲಿ ತುಸು ಬದಲಾವಣೆ ಉಂಟು ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ