ಆ್ಯಪ್ನಗರ

ಕಷ್ಟಪಟ್ಟು ಅಲ್ಲ, ಇಷ್ಟಪಟ್ಟು ಓದಿ

ಐಎಎಸ್‌, ಐಪಿಎಸ್‌, ಕೆಎಎಸ್‌ ಸೇರಿದಂತೆ ನಾನಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ವಿದ್ಯಾರ್ಥಿಗಳು ಕಷ್ಟಪಟ್ಟು ಅಲ್ಲ, ಇಷ್ಟ ಪಟ್ಟು ಅಧ್ಯಯನ ಮಾಡಬೇಕು ಎಂದು ಪ್ರೊಬೆಷನರಿ ಐಎಎಸ್‌ ಅಧಿಕಾರಿ ಡಾ. ನಂದಿನಿದೇವಿ ಸ್ಪರ್ಧಾಕ್ಷಾಂಕ್ಷಿಗಳಿಗೆ ಕಿವಿಮಾತು ಹೇಳಿದರು.

Vijaya Karnataka 29 Sep 2018, 5:00 am
ಚಿತ್ರದುರ್ಗ : ಐಎಎಸ್‌, ಐಪಿಎಸ್‌, ಕೆಎಎಸ್‌ ಸೇರಿದಂತೆ ನಾನಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ವಿದ್ಯಾರ್ಥಿಗಳು ಕಷ್ಟಪಟ್ಟು ಅಲ್ಲ, ಇಷ್ಟ ಪಟ್ಟು ಅಧ್ಯಯನ ಮಾಡಬೇಕು ಎಂದು ಪ್ರೊಬೆಷನರಿ ಐಎಎಸ್‌ ಅಧಿಕಾರಿ ಡಾ. ನಂದಿನಿದೇವಿ ಸ್ಪರ್ಧಾಕ್ಷಾಂಕ್ಷಿಗಳಿಗೆ ಕಿವಿಮಾತು ಹೇಳಿದರು.
Vijaya Karnataka Web read on like this not hard
ಕಷ್ಟಪಟ್ಟು ಅಲ್ಲ, ಇಷ್ಟಪಟ್ಟು ಓದಿ


ನಗರದ ಜಿಲ್ಲಾ ಗ್ರಂಥಾಲಯದ ಸಭಾಂಗಣದಲ್ಲಿ ಓದುಗ ವಿದ್ಯಾರ್ಥಿಗಳಿಗಾಗಿ ಯುಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆ ಕುರಿತಂತೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಐಎಎಸ್‌, ಐಪಿಎಸ್‌, ಐಎಫ್‌ಎಸ್‌, ಕೆಎಎಸ್‌ ಸೇರಿದಂತೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳುವುದು ಪಂಚವಾರ್ಷಿಕ ಯೋಜನೆಗಳಂತೆ ಅಲ್ಲ. ನಾಲ್ಕೈದು ವರ್ಷಗಳಿಂದ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವುದು ಸಮಂಜಸವಲ್ಲ. ಏಕೆಂದರೆ ವರ್ಷದಿಂದ ವರ್ಷಕ್ಕೆ ಪರೀಕ್ಷೆಯ ಸ್ವರೂಪ ಹಾಗೂ ಪ್ರಚಲಿತಗಳು ಬದಲಾವಣೆಯಾಗುತ್ತಿರುತ್ತದೆ ಎಂದರು.

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಇಂಗ್ಲಿಷ್‌ ಭಾಷೆ ಕಡ್ಡಾಯವಲ್ಲ. ಮಾತೃಭಾಷೆಯಲ್ಲಿಯೇ ಪರೀಕ್ಷೆ ಬರೆದು ಯಶಸ್ಸು ಕಾಣಬಹುದು. ರಾಜ್ಯದಲ್ಲಿ ಹಲವರು ಮಾತೃ ಭಾಷೆಯಲ್ಲಿಯೇ ಪರೀಕ್ಷೆ ಬರೆದು ಯಶಸ್ಸು ಕಂಡಿದ್ದಾರೆ. ಕಷ್ಟಪಟ್ಟು ಅಧ್ಯಯನ ಮಾಡುವುದಕ್ಕಿಂತ ಇಷ್ಟಪಟ್ಟು ಆಸಕ್ತಿದಾಯಕ ವಿಷಯಗಳನ್ನು ಅಧ್ಯಯನ ಮಾಡುವುದು ಉತ್ತಮ. ಯಾರದೋ ಒತ್ತಡದಿಂದ, ಆಸಕ್ತಿರಹಿತ ವಿಷಯಗಳನ್ನು ಅಧ್ಯಯನ ಮಾಡುವುದರಿಂದ ಯಶಸ್ಸು ಸಾಧಿಸುವುದು ಕಷ್ಟ ಎಂದು ಹೇಳಿದರು.

ಪ್ರೊಬೆಷನರಿ ಕೆಎಎಸ್‌ ಅಧಿಕಾರಿಗಳಾದ ಮಹೇಂದ್ರ ತಾಲ್‌ ಹಾಗೂ ಸುರೇಖಾ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಯಾವ ರೀತಿ ಸಿದ್ಧತೆ ಮಾಡಿಕೊಳ್ಳಬೇಕು. ಅಧ್ಯಯನದ ಸ್ವರೂಪ ಹಾಗೂ ವಿಷಯಗಳ ಆಯ್ಕೆ ಕುರಿತಂತೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಮುಖ್ಯ ಗ್ರಂಥಾಲಯ ಅಧಿಕಾರಿ ತಿಪ್ಪೇಸ್ವಾಮಿ ಮಾತನಾಡಿ,'ಜಿಲ್ಲಾ ಗ್ರಂಥಾಲಯಕ್ಕೆ ಬರುವ ಓದುಗ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆಯುವ ಕುರಿತು ಸಾಕಷ್ಟು ಪುಸ್ತಕ ಒದಗಿಸಲಾಗುತ್ತಿದೆ. ಅಲ್ಲದೆ ವಿದ್ಯಾರ್ಥಿಗಳ ಹಿತಾಸಕ್ತಿಗಾಗಿ ಐಎಎಸ್‌, ಕೆಎಎಸ್‌ ಉತ್ತೀರ್ಣರಾದ ಅಧಿಕಾರಿಗಳಿಂದ ಸ್ಪರ್ಧಾಕಾಂಕ್ಷಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಗಾಗ್ಗೆ ಆಯೋಜಿಸಲಾಗುತ್ತದೆ' ಎಂದರು.

ಸಂವಾದ ಕಾರ್ಯಕ್ರಮದಲ್ಲಿ ಐಎಎಸ್‌, ಕೆಎಎಸ್‌ ಪರೀಕ್ಷೆಯಲ್ಲಿ ಪಾಲ್ಗೊಳ್ಳಬಯಸುವ ನೂರಾರು ಸ್ಪರ್ಧಾಕಾಂಕ್ಷಿಗಳು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ