ಆ್ಯಪ್ನಗರ

ಸ್ಮಾರ್ಟ್‌ ಕಾರ್ಡ್‌ ಚಾಲಕರ ವಿಮೆ ಸೌಲಭ್ಯಕ್ಕೆ ಸಹಕಾರಿ

ಚಾಲಕರು ಕಾರ್ಮಿಕ ಇಲಾಖೆಯಲ್ಲಿ ನೊಂದಣಿ ಮಾಡಿಸಿಕೊಂಡು ಸ್ಮಾರ್ಟ್‌ ಕಾರ್ಡ್‌ಗಳನ್ನು ಪಡೆದುಕೊಂಡಲ್ಲಿ ಅಪಘಾತ ವಿಮೆ ಯೋಜನೆಯಡಿ ಪರಿಹಾರ ಪಡೆಯಲು ಅನುಕೂಲವಾಗಲಿದೆ ಎಂದು ಕಾರ್ಮಿಕ ನಿರೀಕ್ಷ ಕ ಡಿ. ರಾಜಣ್ಣ ತಿಳಿಸಿದರು.

Vijaya Karnataka 31 May 2019, 5:00 am
ಚಿತ್ರದುರ್ಗ : ಚಾಲಕರು ಕಾರ್ಮಿಕ ಇಲಾಖೆಯಲ್ಲಿ ನೊಂದಣಿ ಮಾಡಿಸಿಕೊಂಡು ಸ್ಮಾರ್ಟ್‌ ಕಾರ್ಡ್‌ಗಳನ್ನು ಪಡೆದುಕೊಂಡಲ್ಲಿ ಅಪಘಾತ ವಿಮೆ ಯೋಜನೆಯಡಿ ಪರಿಹಾರ ಪಡೆಯಲು ಅನುಕೂಲವಾಗಲಿದೆ ಎಂದು ಕಾರ್ಮಿಕ ನಿರೀಕ್ಷ ಕ ಡಿ. ರಾಜಣ್ಣ ತಿಳಿಸಿದರು.
Vijaya Karnataka Web smart card drivers assistance provides
ಸ್ಮಾರ್ಟ್‌ ಕಾರ್ಡ್‌ ಚಾಲಕರ ವಿಮೆ ಸೌಲಭ್ಯಕ್ಕೆ ಸಹಕಾರಿ


ನಗರದ ತರಾಸು ರಂಗಮಂದಿರಲ್ಲಿ ರಾಜ್ಯ ಖಾಸಗಿ ಟ್ಯಾಕ್ಸಿ ವಾಹನ ಚಾಲಕರ ಸಂಘ, ಚಿತ್ರದುರ್ಗ ಲಘು ವಾಹನ ಚಾಲಕರು ಮತ್ತು ಮಾಲೀಕರ ಸಂಘದಿಂದ ಗುರುವಾರ ಆಯೋಜಿಸಿದ್ದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ 16,249 ಚಾಲಕರಿಗೆ ಸ್ಮಾರ್ಟ್‌ ಕಾರ್ಡ್‌ ನೀಡಲಾಗಿದೆ. ಅಪಘಾತದಲ್ಲಿ ಮರಣ ಹೊಂದಿದ ಜಿಲ್ಲೆಯ 21 ಚಾಲಕರ ಕುಟುಂಬಗಳಿಗೆ 39.66 ಲಕ್ಷ ರೂ. ಪರಿಹಾರ ನೀಡಲಾಗಿದೆ. ಮೃತ ಚಾಲಕರ ಆರು ಮಕ್ಕಳಿಗೆ ವಿದ್ಯಾರ್ಥಿ ವೇತನ ಕೊಡುವುದೊಂದು ಬಾಕಿ ಇದೆ. ಶಾಲಾ ದಾಖಲೆ ಪರಿಶೀಲಿಸಿ, ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ಹೇಳಿದರು.

ಅಪಘಾತ ಜೀವರಕ್ಷ ಕ ಯೋಜನೆಯಡಿ 1,756 ಚಾಲಕರಿಗೆ ಪ್ರಥಮ ಚಿಕಿತ್ಸಾ ತರಬೇತಿ ನೀಡಲಾಗಿದೆ. 1936 ಚಾಲಕರು ಸ್ಮಾರ್ಟ್‌ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಿದ್ದಾರೆ. ಹಂತ ಹಂತವಾಗಿ ಎಲ್ಲಾ ಚಾಲಕರಿಗೆ ಸ್ಮಾರ್ಟ್‌ ಕಾರ್ಡ್‌ ನೀಡಲಾಗುವುದು ಎಂದರು.

ಅಸಂಘಟಿತ ಕಾರ್ಮಿಕರಿಗೆ ಸೇವಾ ಭದ್ರತೆ ಹಾಗೂ ಜೀವನ ಭದ್ರತೆಗಾಗಿ ಕೇಂದ್ರ ಸರಕಾರ ಅನೇಕ ಯೋಜನೆ ಜಾರಿಗೆ ತಂದಿದೆ. 90 ದಿನಗಳ ಕಾಲ ನಿರಂತರವಾಗಿ ಕಟ್ಟಡ ಕಟ್ಟುವ ಕೆಲಸ ಮಾಡಿರುವ ಕಾರ್ಮಿಕರು ನೊಂದಣಿ ಮಾಡಿಸಿಕೊಂಡು ಸೌಲಭ್ಯ ಪಡೆಯಬಹುದು ಎಂದರು.

ರಾಜ್ಯ ಖಾಸಗಿ ಟ್ಯಾಕ್ಸಿ ವಾಹನ ಚಾಲಕರ ಸಂಘದ ರಾಜ್ಯಾಧ್ಯಕ್ಷ ನಿಂಗರಾಜ್‌ ಗಾಜಿ ಮಾತನಾಡಿ 'ವಾಹನ ಚಾಲಕರು ಹಾಗೂ ಮಾಲೀಕರಿಗೆ ಪೊಲೀಸ್‌ ಹಾಗೂ ಆರ್‌ಟಿಓ ಇಲಾಖೆಯಿಂದ ಸಾಕಷ್ಟು ಕಿರುಕುಳವಿದೆ. ರಾಜ್ಯಾದ್ಯಂತ ಚಾಲಕರು, ಮಾಲೀಕರು ಭಿನ್ನಾಭಿಪ್ರಾಯ ಬದಿಗಿರಿಸಿ ಸಂಘಟಿತರಾಗಬೇಕು. ಇಲ್ಲವಾದಲ್ಲಿ ಕಿರುಕುಳ ಮುಂದುವರಿಯಲಿದೆ' ಎಂದು ತಿಳಿಸಿದರು.

ಸಂಘದ ಗೌರವಾಧ್ಯಕ್ಷ ಗುರಿಕಾರ್‌ ಮಾತನಾಡಿ 'ರಾಜ್ಯದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೊರಡಿಸಿರುವ ಪ್ರಣಾಳಿಕೆಯಲ್ಲಿ ಖಾಸಗಿ ವಾಹನ ಚಾಲಕರು ಮತ್ತು ಮಾಲೀಕರಿಗೆ ಅನೇಕ ಭರವಸೆ ನೀಡಿದ್ದಾರೆ. ರಾಜ್ಯ ಮಟ್ಟದ ಸಮಾವೇಶ ಆಯೋಜಿಸಿ, ಮುಖ್ಯಮಂತ್ರಿಗಳನ್ನು ಆಹ್ವಾನಿಸಿ, ಮನವಿ ಸಲ್ಲಿಸಲಾಗುವುದು' ಎಂದರು.

ಸಂಘದ ಜಿಲ್ಲಾಧ್ಯಕ್ಷ ನಿಂಗೇಶ್‌ಗೌಡ, ರಾಜ್ಯ ಉಪಾಧ್ಯಕ್ಷ ರಾದ ರಾಜಣ್ಣ, ಪಾಪಣ್ಣ, ಜಿಲ್ಲಾ ಪದಾಧಿಕಾರಿಗಳಾದ ಮೋಹನ್‌ ಕುಮಾರ್‌, ದಾದಣ್ಣ, ಭಾಷಣ್ಣ, ಮೋಹನ್‌ರೆಡ್ಡಿ, ವಸಂತ್‌ ಮತ್ತಿತರರು ಇದ್ದರು.

ರಾಜ್ಯದ ನಾನಾ ಜಿಲ್ಲೆಗಳ ವಾಹನ ಚಾಲಕರು ಮತ್ತು ಮಾಲೀಕರು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ