ಚಿತ್ರದುರ್ಗ: ಹೊಲದಲ್ಲಿ ಕೆಲಸ ಮಾಡುವಾಗ ತಮ್ಮನಿಗೆ ಹಾವು ಕಚ್ಚಿ ಮೃತಪಟ್ಟಿದ್ದು, ಈ ವಿಷಯ ತಿಳಿದ ಈತನ ಅಣ್ಣ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹೊಸದುರ್ಗ ತಾಲೂಕು ಬಾಗೂರಿನಲ್ಲಿ ಭಾನುವಾರ ನಡೆದಿದೆ.
ಬಾಗೂರು ಗ್ರಾಮದ ಕರಡಿ ಗೌಡಪ್ಪ ಅವರ ಮಕ್ಕಳಾದ ಕೇಶವಮೂರ್ತಿ (55), ಗೋವಿಂದಪ್ಪ (60) ಮೃತರು.
ಕೇಶವಮೂರ್ತಿ ಅವರು ಭಾನುವಾರ ಮಧ್ಯಾಹ್ನ ತಮ್ಮ ಹೊಲದಲ್ಲಿ ಈರುಳ್ಳಿ ಬೆಳೆಯ ಕೆಲಸ ಮಾಡುವಾಗ ಹಾವು ಕಚ್ಚಿದ್ದು ತಕ್ಷ ಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ವಿಷಯ ತಿಳಿದ ಈತನ ಅಣ್ಣ ಗೋವಿಂದಪ್ಪ ಅವರು ಹೃದಯಾಘಾತದಿಂದ ಅಸುನೀಗಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.