ಆ್ಯಪ್ನಗರ

ಅಪ್ಪನ ಆತ್ಮಹತ್ಯೆ: ನೊಂದ ಮಗನಿಂದ ಸಾಯುವ ಯತ್ನ

ಕುದಾಪುರ ಲಂಬಾಣಿ ಹಟ್ಟಿಯಲ್ಲಿ‌ ಅಪ್ಪನ ಆತ್ಮಹತ್ಯೆಯಿಂದ ನೊಂದು ಮಗ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

Vijaya Karnataka Web 20 Jun 2018, 10:58 am
ಚಿತ್ರದುರ್ಗ: ಕುದಾಪುರ ಲಂಬಾಣಿ ಹಟ್ಟಿಯಲ್ಲಿ‌ ಅಪ್ಪನ ಆತ್ಮಹತ್ಯೆಯಿಂದ ನೊಂದು ಮಗ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವೆಂಕಟೇಶ್ (22) ಆತ್ಮಹತ್ಯೆಗೆ ಯತ್ನಿಸಿದ್ದು, ಚಿತ್ರದುರ್ಗ ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.
Vijaya Karnataka Web hang


ಸಾಲಬಾಧೆ ಹಿನ್ನೆಲೆಯಲ್ಲಿ ರೈತ ರಾಮನಾಯ್ಕ (60) ಜಮೀನಿನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಸಾಲ ಮಾಡಿ ಕೊರೆಸಿದ್ದ ಕೊಳವೆ ಬಾವಿ ವಿಫಲವಾಗಿದ್ದ ಅವರು ಬೆಳೆ ಇಲ್ಲದೆ ಸುಮಾರು 7 ಲಕ್ಷ ಕೈ ಸಾಲ ಮಾಡಿಕೊಂಡಿದ್ದರು.

ಸಾಲ ತೀರಿಸುವ ಚಿಂತೆಯಿಂದ ರಾಮನಾಯ್ಕ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಬೇಸತ್ತ ಮಗ ವೆಂಕಟೇಶ್‌ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾಯಕನಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ