ಆ್ಯಪ್ನಗರ

ಗ್ರಾಮಲೆಕ್ಕಿಗರ ಸಾಂಕೇತಿಕ ಮುಷ್ಕರ

ಅನ್ಯ ಇಲಾಖೆಯ ಕೆಲಸದ ಒತ್ತಡವನ್ನು ಇಲಾಖೆ ನೌಕರರ ಮೇಲೆ ಹೇರುತ್ತಿರುವ ಬಗ್ಗೆ ಸ್ಪಷ್ಟ ಆದೇಶ ನೀಡುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಜಿಲ್ಲೆಯ ಗ್ರಾಮ ಲೆಕ್ಕಿಗರು ಒಂದು ದಿನದ ಸಾಂಕೇತಿಕ ಮುಷ್ಕರ ನಡೆಸಿದರು.

Vijaya Karnataka 18 Jul 2019, 5:00 am
ಚಿತ್ರದುರ್ಗ : ಅನ್ಯ ಇಲಾಖೆಯ ಕೆಲಸದ ಒತ್ತಡವನ್ನು ಇಲಾಖೆ ನೌಕರರ ಮೇಲೆ ಹೇರುತ್ತಿರುವ ಬಗ್ಗೆ ಸ್ಪಷ್ಟ ಆದೇಶ ನೀಡುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಜಿಲ್ಲೆಯ ಗ್ರಾಮ ಲೆಕ್ಕಿಗರು ಒಂದು ದಿನದ ಸಾಂಕೇತಿಕ ಮುಷ್ಕರ ನಡೆಸಿದರು.
Vijaya Karnataka Web symbolic strike of villagers
ಗ್ರಾಮಲೆಕ್ಕಿಗರ ಸಾಂಕೇತಿಕ ಮುಷ್ಕರ


ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಜಿಲ್ಲಾ ಶಾಖೆಯ ನೇತೃತ್ವದಲ್ಲಿ ನಡೆದ ಈ ಪ್ರತಿಭಟನಾ ಮೆರವಣಿಗೆ ಪ್ರವಾಸಿ ಮಂದಿರದಿಂದ ಹೊರಟು, ಜಿಲ್ಲಾಧಿಕಾರಿ ಕಚೇರಿಗೆ ವರೆಗೆ ನಡೆಯಿತು.

ರಜಾ ದಿನಗಳಲ್ಲಿ ಕೆಲಸದ ಒತ್ತಡ ಹೇರುವುದನ್ನು ನಿಷೇಧಿಸಿ ಸರಕಾರದಿಂದ ಆದೇಶ ಹೊರಡಿಸಿದ್ದರೂ, ಹಲವಾರು ಜಿಲ್ಲೆಗಳಲ್ಲಿ ಪದೇ ಪದೇ ಸಾರ್ವತ್ರಿಕ ರಜೆ ದಿನಗಳಲ್ಲಿ ಕೆಲಸದ ಒತ್ತಡ ಹೇರಲಾಗುತ್ತಿದೆ. ಇದು ಇಲಾಖೆ ಕೆಲಸಕ್ಕೆ ತೊಡಕಾಗುವ ಜತೆಗೆ ಅನಗತ್ಯ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮ ಲೆಕ್ಕಾಧಿಕಾರಿಗಳ ಮುಂಬಡ್ತಿಯಲ್ಲಿ ಉಂಟಾಗುತ್ತಿರುವ ನಿರಂತರ ಅನ್ಯಾಯ ಸರಿಪಡಿಸಿ ಇಲಾಖೆಯ ದ್ವಿತೀಯ ಸಹಾಯಕ ಮತ್ತು ಗ್ರಾಮಲೆಕ್ಕಿಗರ ಜೇಷ್ಟತೆ ಒಟ್ಟುಗೂಡಿಸಿ, ಪದ ನವೀಕರಿಸಬೇಕು ಎಂದರು.

ಗ್ರಾಮ ಲೆಕ್ಕಾಧಿಕಾರಿಗಳ ಪ್ರಯಾಣಭತ್ಯೆ ದರ ಒಂದು ಸಾವಿರ ರೂ.ಗಳಿಗೆ ಹೆಚ್ಚಿಸಲು ಮನವಿ ಮಾಡಿದ್ದರೂ ರಾಜ್ಯ ಸರಕಾರ ಐದು ನೂರು ರೂ. ಮಾತ್ರ ಹೆಚ್ಚಳ ಮಾಡಿದೆ. ಒಂದು ಸಾವಿರ ಹೆಚ್ಚಳಕ್ಕೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಗ್ರಾಮ ಲೆಕ್ಕಾಧಿಕಾರಿಗಳಿಗೆ ಪರಿಷ್ಕೃತ ಜಾಬ್‌ಚಾರ್ಟ್‌ ನೀಡಬೇಕು. ಮರಳು ದಂಧೆಕೋರರಿಂದ ಸಾವಿಗೀಡಾದ ಗ್ರಾಮಲೆಕ್ಕಾಧಿಕಾರಿ ಸಾಹೇಬ್‌ ಪಾಟೀಲ್‌ ಕುಟುಂಬಕ್ಕೆ 20 ಲಕ್ಷ ರೂ ವಿಶೇಷ ಪರಿಹಾರ ನೀಡಬೇಕು ಎಂದರು.

ಅನಿರ್ದಿಷ್ಟಾವಧಿ ಮುಷ್ಕರ..

ನ್ಯಾಯಸಮ್ಮತ ಬೇಡಿಕೆ ಈಡೇರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ, ಬೆಂಗಳೂರಿನಲ್ಲಿ ಕುಟುಂಬ ಸಹಿತ ಅನಿರ್ದಿಷ್ಟಾವಧಿ ಮುಷ್ಕರ ನಡೆಸಬೇಕಾಗುತ್ತದೆ ಎಂದು ಗ್ರಾಮಲೆಕ್ಕಿಗರು ಎಚ್ಚರಿಕೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ