ಆ್ಯಪ್ನಗರ

ವಾಣಿ ವಿಲಾಸ ಸಾಗರ ಜಲಾಶಯ ಭರ್ತಿ ಮಾಡುವ ಕನಸು ನನಸು - ರಮೇಶ್‌ ಜಾರಕಿಹೊಳಿ

ಭದ್ರಾ ಮೇಲ್ದಂಡೆ ಏತ ನೀರಾವರಿ ಕಾಮಗಾರಿ ಪೂರ್ಣಗೊಂಡು ಕಳೆದ ಮಳೆಗಾಲದಲ್ಲಿ3.33 ಟಿಎಂಸಿ ನೀರನ್ನು ಜಲಾಶಯಕ್ಕೆ ಹರಿಸಲಾಗಿದೆ. ವಾರ್ಷಿಕ ನೀರಿನ ಹಂಚಿಕೆ 5.25 ಟಿಎಂಸಿ ಪೂರೈಸಿದ ನಂತರವೂ ಹೆಚ್ಚುವರಿ 5 ಟಿಎಂಸಿ ನೀರು ಲಭ್ಯವಿದೆ ಎಂದು ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.

Vijaya Karnataka 20 May 2020, 8:01 pm
ಬೆಂಗಳೂರು: ಭದ್ರಾ ಮೇಲ್ದಂಡೆ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಿ ವಾಣಿ ವಿಲಾಸ ಜಲಾಶಯ ಭರ್ತಿ ಮಾಡುವ ಕನಸು ನನಸಾಗಿದೆ. ಹಿರಿಯೂರು, ಚಿತ್ರದುರ್ಗ, ಚಳ್ಳಕೆರೆ, ಮೊಳಕಾಲ್ಮೂರು ಕ್ಷೇತ್ರಗಳಿಗೆ ನೀರು ಹರಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.
Vijaya Karnataka Web Vani Vilasa Sagara


ವಿಧಾನಸೌಧದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮೈಸೂರು ಮಹಾರಾಜರ ಕಾಲದಲ್ಲಿ1902ರಲ್ಲಿ ನಿರ್ಮಾಣವಾಗಿದ್ದ 30 ಟಿಎಂಸಿ ಸಾಮರ್ಥ್ಯದ ವಾಣಿವಿಲಾಸ ಜಲಾಶಯ 1933ರಲ್ಲಿ ಒಂದು ಬಾರಿ ಮಾತ್ರ ಭರ್ತಿಯಾಗಿತ್ತು. ವಾಣಿವಿಲಾಸ ಜಲಾಶಯವನ್ನು ಭರ್ತಿ ಮಾಡಬೇಕು ಎಂಬ ಎಂಬ ಕನಸು ಈಗ ಮತ್ತೆ ನನಸಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಭದ್ರಾ ಮೇಲ್ದಂಡೆ ಏತ ನೀರಾವರಿ ಕಾಮಗಾರಿ ಪೂರ್ಣಗೊಂಡು ಕಳೆದ ಮಳೆಗಾಲದಲ್ಲಿ3.33 ಟಿಎಂಸಿ ನೀರನ್ನು ಜಲಾಶಯಕ್ಕೆ ಹರಿಸಲಾಗಿದೆ. ವಾರ್ಷಿಕ ನೀರಿನ ಹಂಚಿಕೆ 5.25 ಟಿಎಂಸಿ ಪೂರೈಸಿದ ನಂತರವೂ ಹೆಚ್ಚುವರಿ 5 ಟಿಎಂಸಿ ನೀರು ಲಭ್ಯವಿದೆ. ಜಿಲ್ಲೆಯಲ್ಲಿ 11 ಬ್ಯಾರೇಜ್‌ಗಳು ಭರ್ತಿಯಾಗಿವೆ. ಸುತ್ತಮುತ್ತಲ 139 ಕೆರೆಗಳನ್ನು ತುಂಬಿಸಲಾಗಿದೆ ಎಂದು ಹೇಳಿದರು.

ಜಲಾಶಯದಿಂದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು, ಚಿತ್ರದುರ್ಗ, ಚಳ್ಳಕೆರೆ, ಮೊಳಕಾಲ್ಮೂರು ಕ್ಷೇತ್ರಗಳಿಗೆ ನೀರು ಹರಿಸಲಾಗಿದೆ. ಜಲಾಶಯದ ಅಚ್ಚುಕಟ್ಟು ಪ್ರದೇಶ 12,135 ಹೆಕ್ಟೇರ್‌ ಇದ್ದು, ಈ ಪೈಕಿ ತೋಟಗಾರಿಕೆ ಬೆಳೆಗಳ ಪ್ರದೇಶ 5,557 ಹೆಕ್ಟೇರ್‌ ಇದೆ. ಜಲಾಶಯದಿಂದ ಚಿತ್ರದುರ್ಗ ಜಿಲ್ಲೆಯ ಪಟ್ಟಣಗಳ ಜತೆಗೆ, ಡಿಆರ್‌ಡಿಒ, ಐಐಎಸ್ಸಿ, ಬಿಎಆರ್‌ಸಿ ಸಂಸ್ಥೆಗಳಿಗೆ ನೀರು ಕೊಡಲಾಗುವುದು. ಮಾರ್ಗಮಧ್ಯದ 18 ಹಳ್ಳಿಗಳಿಗೆ ಕುಡಿಯುವ ನೀರಿಗಾಗಿ 0.981 ಟಿಎಂಸಿ ಹಾಗೂ ಐಮಂಗಲ ಮತ್ತು 38 ಹಳ್ಳಿಗಳಿಗೆ ಕುಡಿಯುವ ನೀರಿಗೆ 0.155 ಟಿ.ಎಂ.ಸಿ ನೀರನ್ನು ಹಂಚಿಕೆ ಮಾಡಲಾಗುತ್ತದೆ ಎಂದು ಸಚಿವರು ವಿವರಿಸಿದರು.

ವಾಣಿವಿಲಾಸ ಸಾಗರ ಜಲಾಶಯಕ್ಕೆ ಹಲವು ವರ್ಷಗಳಿಂದ ಮಳೆ ಕೊರತೆಯಿಂದ ನೀರಿನ ಒಳಹರಿವು ಗಣನೀಯವಾಗಿ ಕ್ಷೀಣಿಸಿದೆ. ಜಲಾಶಯವು ನೀರಿನ ಕೊರತೆ ಶಾಶ್ವತವಾಗಿ ನೀಗಲು ಭದ್ರಾ ಮೇಲ್ದಂಡೆ ಯೋಜನೆಯಡಿ 2 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಈಗ ಒಟ್ಟಾರೆ ಜಲಾಶಯದಲ್ಲಿ 10.57 ಟಿಎಂಸಿ ನೀರು ಸಂಗ್ರಹವಿದೆ ಎಂದರು.

ಆದ್ಯತೆ ಮೇರೆಗೆ ಯೋಜನೆ ಜಾರಿ

ಸರಕಾರ ಭದ್ರಾ ಮೇಲ್ದಂಡೆ ಯೋಜನೆಯನ್ನು ಆದ್ಯತೆಯ ಮೇರೆಗೆ ಜಾರಿಗೊಳಿಸುತ್ತಿದೆ. ಪ್ರಸಕ್ತ ಸಾಲಿನಲ್ಲಿ ಚಿತ್ರದುರ್ಗ ಶಾಖಾ ಕಾಲುವೆ 60 ಕಿ.ಮೀ.ವರೆಗಿನ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಚಿತ್ರದುರ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳ ಅಚ್ಚುಕಟ್ಟು ಪ್ರದೇಶದ 48 ಕೆರೆಗಳಿಗೆ ನೀರನ್ನು ಪೂರೈಸಲು ಹಾಗೂ ಭದ್ರಾ ಮೇಲ್ದಂಡೆ ಯೋಜನೆಯಡಿ ತರೀಕೆರೆ ಏತ ನೀರಾವರಿ ಕಾಮಗಾರಿ ಪೂರ್ಣಗೊಳಿಸಿ ತರೀಕೆರೆ ತಾಲ್ಲೂಕಿನ 79 ಕೆರೆಗಳಿಗೆ ನೀರು ಪೂರೈಸಲು ಹಾಗೂ 50 ಸಾವಿರ ಎಕರೆಯಷ್ಟು ಭೂಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸೌಲಭ್ಯ ಕಲ್ಪಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಜಾರಕಿಹೊಳಿ ವಿವರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ