ಆ್ಯಪ್ನಗರ

ಸಿಎಂ ಆಧುನಿಕ ಭಸ್ಮಾಸುರ: ಬಿಎಸ್‌ವೈ

ಡವರೊಂದಿಗೆ ಚೆಲ್ಲಾಟವಾಡುತ್ತಿರುವ ಸಿಎಂ ಆಧುನಿಕ ಭಸ್ಮಾಸುರ. ರಾಜ್ಯ ಪ್ರವಾಸ ಮಾಡುವ ವೇಳೆ ಈ ಸರಕಾರದ ಬಣ್ಣ ಬಯಲು ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ.

Vijaya Karnataka Web 17 Oct 2017, 3:51 pm
ಚಿತ್ರದುರ್ಗ: ಬಡವರೊಂದಿಗೆ ಚೆಲ್ಲಾಟವಾಡುತ್ತಿರುವ ಸಿಎಂ ಆಧುನಿಕ ಭಸ್ಮಾಸುರ. ರಾಜ್ಯ ಪ್ರವಾಸ ಮಾಡುವ ವೇಳೆ ಈ ಸರಕಾರದ ಬಣ್ಣ ಬಯಲು ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ.
Vijaya Karnataka Web yeddyurappa criticize to cm siddaramaiah
ಸಿಎಂ ಆಧುನಿಕ ಭಸ್ಮಾಸುರ: ಬಿಎಸ್‌ವೈ


ಹಿರಿಯೂರಿನಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರ 'ಮನ್ ಕಿ ಬಾತ್' ಬದಲಾಗಿ ಸಿಎಂ ಸಿದ್ದರಾಮಯ್ಯ 'ಲೂಟ್ ಕೀ ಬಾತ್' ಮಾಡುತ್ತಿದ್ದಾರೆ. ಪ್ರಧಾನಿಯನ್ನು ಟೀಕೆ ಮಾಡಿದರೆ ನಾನು ದೊಡ್ಡವನಾಗುತ್ತೇನೆ ಅನ್ನೋ ಭ್ರಮೆಯಲ್ಲಿ ಸಿಎಂ ಇದ್ದಾರೆ. ಬಿಬಿಎಂಪಿನಲ್ಲಿನ ಕಾರ್ನರ್ ನಿವೇಶನಗಳನ್ನು ಅಡ ಇಟ್ಟು ಸಾವಿರ ಕೋಟಿ ಪಡೆದಿದ್ದಾರೆ. ಅದೂ ಸಾಲದು ಅಂತ ಮತ್ತೆ ಎಂಟುನೂರು ಕೋಟಿ ಪಡೆಯಲು ನೋಟಿಸ್ ಕೊಡುವ ಮೂಲಕ
ಸರಕಾರದ ಖಜಾನೆ ಲೂಟಿ ಮಾಡುತ್ತಿದ್ದಾರೆ ಎಂದು ದೂರಿದರು.

ರಾಜ್ಯವನ್ನು ಸಾಲಗಾರ ರಾಜ್ಯ ಮಾಡುವ ಉದ್ದೇಶ ಸಿಎಂಗಿದೆ.ರಾಜಕಾರಣಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಎಂಬ ಪ್ರಮಾಣ ಪತ್ರ ನೀಡುವ ವಿಚಾರದಲ್ಲಿ ಹೈಕೋರ್ಟ್ ತೀರ್ಪು ಸ್ವಾಗತಾರ್ಹ. ರಾಜಕಾರಣಿಗಳು ಕಳೆದ ಚುನಾವಣೆಯಲ್ಲಿ ಗೆದ್ದಂತೆ ಈ ಬಾರಿ ಗೆಲ್ಲುವುದು ಅಸಾಧ್ಯ. ಗೆಲ್ಲುವ ಭ್ರಮೆಯಲ್ಲಿರಲು ಸಾಧ್ಯವಿಲ್ಲ. ಜನರು ಬುದ್ದಿವಂತರಾಗಿದ್ದಾರೆ. ವೇಣುಗೋಪಾಲ್ ಅವರ ಬಗ್ಗೆ ಟೀಕಿಸುವುದಿಲ್ಲ. ಅವರ ಕರ್ತವ್ಯ ಅವರು ಮಾಡುತ್ತಾರೆ ಎಂದು ಬಿಎಸ್ ವೈ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ