ಆ್ಯಪ್ನಗರ

ಅನುಮತಿ ಪಡೆಯದೆ ದೀರ್ಘ ರಜೆ: ಎಎಸ್‌ಐ, ಪೇದೆ ವಜಾ

ಹಿರಿಯ ಅಧಿಕಾರಿಗಳಿಂದ ಅನುಮತಿ ಪಡೆಯದೆ ದೀರ್ಘ ಕಾಲ ಕರ್ತವ್ಯಕ್ಕೆ ಗೈರಾಗಿದ್ದ ಇಬ್ಬರನ್ನು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಸೇವೆಯಿಂದ ವಜಾಗೊಳಿಸಿದ್ದಾರೆ.

Vijaya Karnataka 17 Nov 2018, 5:00 am
ಬೆಂಗಳೂರು: ಹಿರಿಯ ಅಧಿಕಾರಿಗಳಿಂದ ಅನುಮತಿ ಪಡೆಯದೆ ದೀರ್ಘ ಕಾಲ ಕರ್ತವ್ಯಕ್ಕೆ ಗೈರಾಗಿದ್ದ ಇಬ್ಬರನ್ನು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಸೇವೆಯಿಂದ ವಜಾಗೊಳಿಸಿದ್ದಾರೆ.
Vijaya Karnataka Web  1
ಅನುಮತಿ ಪಡೆಯದೆ ದೀರ್ಘ ರಜೆ: ಎಎಸ್‌ಐ, ಪೇದೆ ವಜಾ


ಸಿದ್ದಾಪುರ ಠಾಣೆಯ ಪೇದೆ ಶಿವಣ್ಣ ಮತ್ತು ಸಿ.ಕೆ.ಅಚ್ಚುಕಟ್ಟು ಠಾಣೆಯ ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ ನಂಜಪ್ಪ ಕೆಲಸ ಕಳೆದುಕೊಂಡವರು. ಇವರಿಗೆ ಹಿಂದಿನ ಡಿಸಿಪಿ ಶರಣಪ್ಪ ಕೂಡ ಹಲವು ಬಾರಿ ಎಚ್ಚರಿಕೆ ನೀಡಿ ಸರಿಯಾಗಿ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಿದ್ದರು. ಆದರೂ ಕೆಲಸಕ್ಕೆ ಬಾರದೆ, ಹಿರಿಯ ಅಧಿಕಾರಿಗಳ ಕರೆಗೂ ಸ್ಪಂದಿಸದ ಹಿನ್ನೆಲೆಯಲ್ಲಿ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಹನುಮಂತನಗರ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪೇದೆ ಶಿವಣ್ಣ 2016ರಿಂದಲೂ ಕೆಲಸಕ್ಕೆ ಗೈರಾಗಿದ್ದರು. ಈ ಬಗ್ಗೆ ಹಲವು ನೋಟಿಸ್‌ಗಳನ್ನು ನೀಡಲಾಗಿತ್ತು. ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೂ ಸ್ಪಂದನೆ ಇರಲಿಲ್ಲ. ಇತ್ತೀಚೆಗೆ ಇವರನ್ನು ಸಿದ್ದಾಪುರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಆದರೂ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಇದೇ ರೀತಿ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯ ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ ನಂಜಪ್ಪ ಕೂಡ ಮೇಲಧಿಕಾರಿಗಳಿಂದ ಅನುಮತಿ ಪಡೆಯದೆ ಹಲವು ತಿಂಗಳುಗಳಿಂದ ಕೆಲಸಕ್ಕೆ ಗೈರಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ