ಆ್ಯಪ್ನಗರ

Crime News: ಕುಣಿಗಲ್‌: ವಿವಾಹಿತ ಮಹಿಳೆಯನ್ನು ಹೊತ್ತೊಯ್ದು ಅತ್ಯಾಚಾರವೆಸಗಿದ ಮುದುಕ!

ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ವೃದ್ಧನೊಬ್ಬ ವಿವಾಹಿತ ಮಹಿಳೆಯನ್ನು ಬಲವಂತವಾಗಿ ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ಎಸಗಿರುವ ಘಟನೆ ಕುಣಿಗಲ್‌ನ ತಾಲೂಕಿನ ಅಮೃತೂರು ಹೋಬಳಿ ದೊಡ್ಡಕಲ್ಲಹಳ್ಳಿ ಗ್ರಾಮದಲ್ಲಿ ನಡೆದರೆ, ಪತಿ ಮನೆಯಲ್ಲಿ ಇಲ್ಲದ ಸಂದರ್ಭ ಮಧ್ಯರಾತ್ರಿ ಮನೆಗೆ ನುಗ್ಗಿ ವಿವಾಹಿತೆಯ ಅತ್ಯಾಚಾರ ನಡೆಸಲು ಯತ್ನಿಸಿ, ಆ ಸಂದರ್ಭ ಸೆರೆಹಿಡಿದ ಫೋಟೊ ಬಳಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಘಟನೆ ಸಾಗರದಲ್ಲಿ ನಡೆದಿದೆ.

Vijaya Karnataka 28 Jun 2022, 12:40 pm
ಕುಣಿಗಲ್‌: ದನ ಮೇಯಿಸುತ್ತಿದ್ದ ವಿವಾಹಿತ ಗೃಹಿಣಿಯೊಬ್ಬಳನ್ನು ವೃದ್ಧನೊಬ್ಬ ಬಲವಂತವಾಗಿ ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ಎಸಗಿರುವ ಘಟನೆ ತಾಲೂಕಿನ ಅಮೃತೂರು ಹೋಬಳಿ ದೊಡ್ಡಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
Vijaya Karnataka Web 63 year old man in kunigal bookd on rape charges


ದೊಡ್ಡಕಲ್ಲಹಳ್ಳಿ ಗ್ರಾಮದ ರಾಮಕೃಷ್ಣಯ್ಯ (63) ಬಂಧಿತ ಆರೋಪಿ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಹುಲಿಯೂರು ದುರ್ಗ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆ ಮನೆ ಕೆಲಸ ಮುಗಿಸಿಕೊಂಡು ಎಂದಿನಂತೆ ಊರಿನ ಹೊರವಲಯದ ಬಯಲಿನಲ್ಲಿ ದನ ಮೇಯಿಸಲು ಹೋಗಿದ್ದರು. ಈ ವೇಳೆ ಅಲ್ಲಿಗೆ ಬಂದ ವೃದ್ಧ ರಾಮಕೃಷ್ಣಯ್ಯ ಸಂತ್ರಸ್ತ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ ಬಳಿಕ ಆಕೆಯನ್ನು ಹೆಗಲ ಮೇಲೆ ಹೊತ್ತೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.

ಹುಲಿಯೂರು ದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ರಾಮಕೃಷ್ಣಯ್ಯನಿಗೆ ವಯಸ್ಸಿಗೆ ಬಂದ ಇಬ್ಬರು ಗಂಡು ಮಕ್ಕಳಿದ್ದು, ಆತನ ಪತ್ನಿ ಕಳೆದ ಒಂದು ವರ್ಷದ ಹಿಂದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇದು ಎರಡನೇ ಕೃತ್ಯ
ಈ ಹಿಂದೆ 2016ರಲ್ಲಿ ಗ್ರಾಮದ ಮಹಿಳೆಯೊಬ್ಬರ ಮೇಲೆ ರಾಮಕೃಷ್ಣಯ್ಯ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ಸಂಬಂಧ ಹುಲಿಯೂರು ದುರ್ಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೂ ಸೇರಿದಂತೆ ಆತನ ವಿರುದ್ಧ ಎರಡು ಪ್ರಕರಣ ದಾಖಲಾಗಿವೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
ಚಲಿಸುವ ಕಾರಲ್ಲಿ ಮಹಿಳೆ ಹಾಗೂ 6 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ನಾಲೆಗೆ ಎಸೆದ ಕಿರಾತಕರು!
ಅತ್ಯಾಚಾರಕ್ಕೆ ಯತ್ನ, ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪಿ ಬಂಧನ
ಸಾಗರ: ಮತ್ತೊಂದು ಪ್ರಕರಣದಲ್ಲಿ ಪತಿ ಮನೆಯಲ್ಲಿ ಇಲ್ಲದ ಸಂದರ್ಭ ಮಧ್ಯರಾತ್ರಿ ಮನೆಗೆ ನುಗ್ಗಿ ವಿವಾಹಿತೆಯ ಅತ್ಯಾಚಾರ ನಡೆಸಲು ಯತ್ನಿಸಿ, ಆ ಸಂದರ್ಭ ಸೆರೆಹಿಡಿದ ಫೋಟೊ ಬಳಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗ್ರಾಮಾಂತರ ಠಾಣೆ ಪೊಲೀಸರು ಸೋಮವಾರ ಆರೋಪಿಯನ್ನು ಬಂಧಿಸಿದ್ದಾರೆ.

ದಿಗಟೆಕೊಪ್ಪದ ನಿವಾಸಿ ರಮೇಶ್‌ ಬಂಧಿತ ಆರೋಪಿ. ತಾಲೂಕಿನ ಮಾಸೂರು ಗ್ರಾಮದ ಮಹಿಳೆಯ ಪತಿ ಜತೆ ರಮೇಶ್‌ ಗೆಳೆತನ ಮಾಡಿಕೊಂಡು, ಆಗಾಗ್ಗೆ ಮನೆಗೆ ಬರುತ್ತಿದ್ದ. ಜೂನ್‌ ಮೊದಲ ವಾರ ಮಹಿಳೆಯ ಪತಿ ಕೆಲಸದ ನಿಮಿತ್ತ ಶಿವಮೊಗ್ಗಕ್ಕೆ ತೆರಳಿದ ಸಂದರ್ಭ ಮಧ್ಯರಾತ್ರಿ ರಮೇಶ್‌ ಮನೆಯ ಹಿಂದಿನ ಬಾಗಿಲು ಒಡೆದು ಒಳಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ಕಿರುಚಿಕೊಂಡಿದ್ದರಿಂದ ಅಕ್ಕಪಕ್ಕದ ಮನೆಯವರು ಹೊರಬಂದಿದ್ದು, ಈ ವೇಳೆ ಮಹಿಳೆಯ ಪೋಟೊ ತೆಗೆದುಕೊಂಡು ರಮೇಶ್‌ ಪರಾರಿಯಾಗಿದ್ದ. ಈ ಬಗ್ಗೆ ಠಾಣೆಗೆ ದೂರು ನೀಡಲು ಸಿದ್ಧತೆ ನಡೆಸಿದ್ದಾರೆ.
ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ: ಸ್ಕೂಟಿಯಲ್ಲಿ ಹೋಗುತ್ತಿದ್ದಾಕೆಯನ್ನು ತಡೆದು ಕೊಲೆಗೈದ ಕಿರಾತಕ!
ಆದರೆ, ಆರೋಪಿ ರಮೇಶ್‌ ದಂಪತಿಗೆ ಕರೆ ಮಾಡಿ ದೂರು ನೀಡಿದರೆ, ಬೇರೆಯವರಿಗೆ ತಿಳಿಸಿದರೆ ಮಹಿಳೆಯ ಫೋಟೊಗಳನ್ನ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡುವುದಾಗಿ ಬೆದರಿಸಿದ್ದಾನೆ. ಅಲ್ಲದೇ ಫೋಟೊ ನೆಪ ಮಾಡಿಕೊಂಡು ತಾನು ಕರೆದಲ್ಲಿ ಆಕೆ ಬರಬೇಕು ಎಂದು ಮಹಿಳೆಗೆ ಬ್ಲ್ಯಾಕ್‌ ಮೇಲ್‌ ಮಾಡಲು ಆರಂಭಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆ ಗ್ರಾಮಾಂತರ ಠಾಣೆಗೆ ಭಾನುವಾರ ದೂರು ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ