ಆ್ಯಪ್ನಗರ

ಬೆಂಗಳೂರು: ಅಕ್ರಮ ಪಿಸ್ತೂಲ್‌ ಮಾರಾಟ ಮಾಡುತ್ತಿದ್ದ 8 ಮಂದಿಯನ್ನು ಬಂಧಿಸಿದ ಪೊಲೀಸರು

ಆರೋಪಿಗಳು ಹೊರ ರಾಜ್ಯಗಳಿಂದ ಪಿಸ್ತೂಲ್‌ ಮತ್ತು ಜೀವಂತ ಮದ್ದು-ಗುಂಡುಗಳನ್ನು ತರಿಸಿಕೊಂಡು ಸಿಟಿ ಮಾರುಕಟ್ಟೆಯ ಕೊನಾರ್ಕ್ ರೆಸಿಡೆನ್ಸಿ ಲಾಡ್ಜ್‌ನಲ್ಲಿಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಟಿ ಮಾರುಕಟ್ಟೆ ಠಾಣೆ ಪೊಲೀಸರು, ಇನ್‌ಸ್ಪೆಕ್ಟರ್‌ ಕುಮಾರಸ್ವಾಮಿ ಮತ್ತವರ ತಂಡ ದಾಳಿ ನಡೆಸಿ ಮಾಲು ಸಮೇತ ಹೆಗಡೆ ನಗರದ ಖದೀರ್‌ ಖಾನ್‌ನನ್ನು ಬಂಧಿಸಿದ್ದರು.

Vijaya Karnataka Web 2 Mar 2021, 4:29 pm
ಬೆಂಗಳೂರು: ರಾಜಸ್ಥಾನ ಮತ್ತು ಮುಜಾಫರ್‌ ನಗರದಿಂದ ಶಸ್ತ್ರಾಸ್ತ್ರಗಳನ್ನು ತರಿಸಿಕೊಂಡು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆ ಹಚ್ಚಿರುವ ಸಿಟಿ ಮಾರ್ಕೆಟ್‌ ಠಾಣೆ ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
Vijaya Karnataka Web kamal pant


ಆರ್‌. ಹೆಗಡೆ ನಗರದ ಖದೀರ್‌ ಖಾನ್‌ (32), ಫೈಯಾಜ್‌ ಜುಲ್ಲಾಖಾನ್‌ (31), ತಮಿಳುನಾಡು ಮೂಲದ ವಿನಯ್‌ (29), ಉತ್ತರ ಪ್ರದೇಶದ ಪರಾಗ್‌ಕುಮಾರ್‌ (39), ಗುಜರಾತ್‌ ಮೂಲದ ಶಹನವಾಜ್‌ ಅನ್ಸಾರಿ (29), ಮಧ್ಯಪ್ರದೇಶದ ನಾಸಿರ್‌ ಶೇಖ್‌ (50), ಸಲ್ಮಾನ್‌ ಖಾನ್‌ (28), ಫಕ್ರುದ್ದೀನ್‌ (37) ಬಂಧಿತರು. ಆರೋಪಿಗಳಿಂದ 13 ಪಿಸ್ತೂಲ್‌ಗಳು, 52 ಜೀವಂತ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ತಿಳಿಸಿದರು.
ಬೆಂಗಳೂರು: ಕಳವು ಪ್ರಕರಣಗಳಲ್ಲಿ 10 ಮಂದಿ ಬಂಧನ; ₹1.8 ಕೋಟಿ ಮೌಲ್ಯದ ಚಿನ್ನಾಭರಣ ವಶ..!
ಆರೋಪಿಗಳು ಹೊರ ರಾಜ್ಯಗಳಿಂದ ಪಿಸ್ತೂಲ್‌ ಮತ್ತು ಜೀವಂತ ಮದ್ದು-ಗುಂಡುಗಳನ್ನು ತರಿಸಿಕೊಂಡು ಸಿಟಿ ಮಾರುಕಟ್ಟೆಯ ಕೊನಾರ್ಕ್ ರೆಸಿಡೆನ್ಸಿ ಲಾಡ್ಜ್‌ನಲ್ಲಿಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಟಿ ಮಾರುಕಟ್ಟೆ ಠಾಣೆ ಪೊಲೀಸರು, ಇನ್‌ಸ್ಪೆಕ್ಟರ್‌ ಕುಮಾರಸ್ವಾಮಿ ಮತ್ತವರ ತಂಡ ದಾಳಿ ನಡೆಸಿ ಮಾಲು ಸಮೇತ ಹೆಗಡೆ ನಗರದ ಖದೀರ್‌ ಖಾನ್‌ನನ್ನು ಬಂಧಿಸಿದ್ದರು. ಈತನನ್ನು ವಿಚಾರಣೆಗೊಳಪಡಿಸಿದ ವೇಳೆ ಇನ್ನಿತರ ಅಕ್ರಮ ಶಸ್ತಾ್ರಸ್ತ್ರ ಮಾರಾಟಗಾರರ ಬಗ್ಗೆ ಮಾಹಿತಿ ನೀಡಿದ್ದ. ಇದೇ ಮಾಹಿತಿ ಆಧರಿಸಿ ಕಾರ್ಯಾಚರಣೆಗಿಳಿದ ಪೊಲೀಸರು ಎಲ್ಲ ಹೊರ ರಾಜ್ಯದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವಿವರಿಸಿದರು.
ಬೆಂಗಳೂರು: ಶೀಲ ಶಂಕಿಸಿದ ಪತಿಯನ್ನು ನಾಲ್ವರ ಜೊತೆ ಸೇರಿ ಕೊಲೆ ಮಾಡಿಸಿದ ಪತ್ನಿ..! ಆರೋಪಿಗಳ ಬಂಧನ
ಆರೋಪಿ ಫಯಾಜುಲ್ಲಾಖಾನ್‌ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ಬಾಗಲೂರು ಪೊಲೀಸ್‌ ಠಾಣೆಯಲ್ಲಿಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣ ದಾಖಲಾಗಿದೆ. ಆರೋಪಿಗಳು ರಾಜಸ್ಥಾನ ಹಾಗೂ ಮುಜಾಫರ್‌ ನಗರದಿಂದ ಶಸ್ತ್ರಾಸ್ತ್ರಗಳನ್ನು ಅಕ್ರಮವಾಗಿ ಖರೀದಿಸಿ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಕಮಲ್‌ ಪಂಥ್‌ ತಿಳಿಸಿದರು. ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್‌ ಪಾಟೀಲ್‌ ಹಾಗೂ ತಂಡಕ್ಕೆ ನಗದು ಬಹುಮಾನ ಘೋಷಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ