ಆ್ಯಪ್ನಗರ

ಎಸಿಬಿ ಬಲೆಗೆ ಎಫ್‌ಡಿಎ

ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಸಿಬ್ಬಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲು 2.75 ಲಕ್ಷ ರೂ. ಲಂಚ ಪಡೆದ ಆರೋಪದಲ್ಲಿ ಪಾಂಚಜನ್ಯ ವಿದ್ಯಾಪೀಠ ಪಾಲಿಟೆಕ್ನಿಕ್‌ ಕಾಲೇಜಿನ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಎಚ್‌. ಪ್ರಕಾಶ್‌ ಎಂಬುವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರು ಬಂಧಿಸಿದ್ದಾರೆ.

Vijaya Karnataka 12 Apr 2018, 5:00 am
ಬೆಂಗಳೂರು: ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಸಿಬ್ಬಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲು 2.75 ಲಕ್ಷ ರೂ. ಲಂಚ ಪಡೆದ ಆರೋಪದಲ್ಲಿ ಪಾಂಚಜನ್ಯ ವಿದ್ಯಾಪೀಠ ಪಾಲಿಟೆಕ್ನಿಕ್‌ ಕಾಲೇಜಿನ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಎಚ್‌. ಪ್ರಕಾಶ್‌ ಎಂಬುವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರು ಬಂಧಿಸಿದ್ದಾರೆ.
Vijaya Karnataka Web acb trap fda
ಎಸಿಬಿ ಬಲೆಗೆ ಎಫ್‌ಡಿಎ


ಬೆಂಗಳೂರಿನ ಕೋನೆ ಮಲ್ಲತಹಳ್ಳಿ ನಿವಾಸಿಯಾದ ಎಂ.ಎನ್‌ ಶ್ರೀನಿವಾಸ ಎಂಬುವರು ಪಿ.ವಿ.ಪಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಅನುದಾನಿತ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವೈಯಕ್ತಿಕ ಕಾರಣಗಳಿಂದ ರಜೆ ಪಡೆದು 2 ವರ್ಷಗಳ ಕಾಲ ಕರ್ತವ್ಯಕ್ಕೆ ಗೈರು ಹಾಜರಾಗಿದ್ದರು. ತಮ್ಮನ್ನು ಮರಳಿ ಕೆಲಸಕ್ಕೆ ಸೇರಿಸಿಕೊಳ್ಳುವ ವಿಚಾರವಾಗಿ ಹಲವು ಬಾರಿ ಕಾಲೇಜಿಗೆ ಮನವಿ ಮಾಡಿದ್ದರು. ಈ ಕುರಿತು ಏ.6ರಂದು ಕಾಲೇಜಿನ ಎಫ್‌ಡಿಎ ಎಚ್‌.ಪ್ರಕಾಶ್‌ ಎಂಬುವರನ್ನು ಭೇಟಿ ಮಾಡಿದಾಗ, ಕೆಲಸಕ್ಕೆ ವಾಪಸ್‌ ತೆಗೆದುಕೊಳ್ಳಲು ಸಂಬಂಧಪಟ್ಟವರ ಬಳಿ ಮಾತನಾಡಲು 2.75 ಲಕ್ಷ ರೂ. ಲಂಚ ನೀಡಬೇಕು ಎಂದು ಒತ್ತಾಯಿಸಿದ್ದರು ಎಂಬ ಆರೋಪವಿದೆ. ಆದರೆ, ಲಂಚ ನೀಡಲು ಇಚ್ಛಿಸದ ಶ್ರೀನಿವಾಸ, ಎಸಿಬಿಗೆ ದೂರು ನೀಡಿದ್ದರು. ಬುಧವಾರ (ಏ.11) ದೂರುದಾರರಿಂದ ಲಂಚದ ಹಣ 2.75 ಲಕ್ಷ ರೂ. ಸ್ವೀಕರಿಸುತ್ತಿದ್ದ ವೇಳೆ ಎಚ್‌.ಪ್ರಕಾಶ್‌ ಅವರನ್ನು ಬಂಧಿಸಿರುವ ಎಸಿಬಿ ಪೊಲೀಸರು ನ್ಯಾಯಾಲಯದ ಎದುರು ಹಾಜರುಪಡಿಸಿದ್ದಾರೆ.

ಪಿ.ವಿ.ಪಿ ಕಾಲೇಜು ಅನುದಾನಿತ ಶಿಕ್ಷಣ ಸಂಸ್ಥೆಯಾಗಿರುವ ಕಾರಣ, ಅಲ್ಲಿ ಕಾರ್ಯ ನಿರ್ವಹಿಸುವ ಅನುದಾನಿತ ನೌಕರರು ಸರಕಾರಿ ನೌಕರರ ವ್ಯಾಪ್ತಿಗೆ ಬರುವ ಕಾರಣ ಪ್ರಕರಣ ದಾಖಲಿಸಿ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಬಂಧಿಸಲಾಗಿದೆ ಎಂದು ಎಸಿಬಿ ಅಧಿಕಾರಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ