ಆ್ಯಪ್ನಗರ

ಕಾರು ಡಿಕ್ಕಿ : ಬೈಕ್‌ ಸವಾರ ಸಾವು

ಮಧುಸೂದನ್‌ ಮತ್ತು ಕುಮಾರ್‌ ಸ್ನೇಹಿತರಾಗಿದ್ದು, ಭಾನುವಾರ ರಾತ್ರಿ 1 ಗಂಟೆಯಲ್ಲಿ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದರು. ಬ್ಯಾಟರಾಯನಪುರ ಸಿಗ್ನಲ್‌ ದಾಟಿ ಸಾಗುವಾಗ ಅತಿವೇಗವಾಗಿ ಬಂದ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿದೆ.

Vijaya Karnataka 6 Aug 2019, 5:00 am
ವಿಕ ಸುದ್ದಿಲೋಕ ಬೆಂಗಳೂರು
Vijaya Karnataka Web accident


ಬಳ್ಳಾರಿ ರಸ್ತೆಯಲ್ಲಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಕಂಪನಿ ಉದ್ಯೋಗಿ ಮೃತಪಟ್ಟು, ಮತ್ತೊಬ್ಬರು ಗಾಯಗೊಂಡಿದ್ದಾರೆ.

ಹೆಬ್ಬಾಳ ಸಮೀಪದ ಬ್ಯಾಟರಾಯನಪುರ ಸಿಗ್ನಲ್‌ ಬಳಿ ಭಾನುವಾರ ತಡರಾತ್ರಿ 1 ಗಂಟೆಗೆ ಅಪಘಾತ ನಡೆದಿದೆ. ಜಕ್ಕೂರು ನಿವಾಸಿ ಮಧುಸೂದನ್‌ (34) ಮೃತರು. ಇವರ ಸ್ನೇಹಿತ ಹಿಂಬದಿ ಸವಾರಿ ಮಾಡುತ್ತಿದ್ದ ಕುಮಾರ್‌ ಗಾಯಗೊಂಡಿದ್ದಾರೆ. ಇವರನ್ನು ಖಾಸಗಿ ಆಸ್ಪತ್ರೆ ದಾಖಲಿಸಲಾಗಿದ್ದು ಪರಿಸ್ಥಿತಿ ಗಂಭೀರವಾಗಿದೆ.

ಮಧುಸೂದನ್‌ ಮತ್ತು ಕುಮಾರ್‌ ಸ್ನೇಹಿತರಾಗಿದ್ದು, ಭಾನುವಾರ ರಾತ್ರಿ 1 ಗಂಟೆಯಲ್ಲಿ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದರು. ಬ್ಯಾಟರಾಯನಪುರ ಸಿಗ್ನಲ್‌ ದಾಟಿ ಸಾಗುವಾಗ ಅತಿವೇಗವಾಗಿ ಬಂದ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ಮಧುಸೂದನ್‌ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿ ಮಾಡಿದ ಬಳಿಕ ಕಾರು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಆತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ