ಆ್ಯಪ್ನಗರ

ಬಿಎಂಟಿಸಿ ಡಿಕ್ಕಿ ಹೊಡೆದು ಬಾಲಕ ಸಾವು

ಬಿಎಂಟಿಸಿ ಬಸ್‌ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಬಸ್ಸಿಗೆ ಸಿಲುಕಿ ಒಂಬತ್ತನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ವಿಜಯನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

Vijaya Karnataka 8 Sep 2019, 5:00 am
ಬೆಂಗಳೂರು : ಬಿಎಂಟಿಸಿ ಬಸ್‌ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಬಸ್ಸಿಗೆ ಸಿಲುಕಿ ಒಂಬತ್ತನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ವಿಜಯನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.
Vijaya Karnataka Web accident boy death
ಬಿಎಂಟಿಸಿ ಡಿಕ್ಕಿ ಹೊಡೆದು ಬಾಲಕ ಸಾವು


ಮಾಗಡಿ ರಸ್ತೆಯ ನಿವಾಸಿ ಆಯುಷ್‌(14) ಮೃತ ವಿದ್ಯಾರ್ಥಿ. ದುರ್ಘಟನೆ ಎಸಗಿದ ಬಿಎಂಟಿಸಿ ಬಸ್‌ ಚಾಲಕ ಮತ್ತು ನಿರ್ವಾಹಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಆಯುಷ್‌, ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಟ್ಯೂಷನ್‌ ಮುಗಿಸಿ ಅಗ್ರಹಾರ ದಾಸರಹಳ್ಳಿ ಸಮೀಪದ ಬೇಕರಿಯೊಂದರಲ್ಲಿ ತಿಂಡಿ ತಿಂದು ರಸ್ತೆ ಬದಿ ನಿಂತಿದ್ದ. ಈ ವೇಳೆ ವೇಗವಾಗಿ ಬಂದ ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಕೆಳಗೆ ಬಿದ್ದಿದ್ದಾನೆ. ಬಳಿಕ ಬಸ್ಸಿನ ಮಂದಿನ ಚಕ್ರ ವಿದ್ಯಾರ್ಥಿ ಮೇಲೆ ಹರಿದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ವೇಳೆ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣ ಪ್ರಮಾಣದಲ್ಲಿ ಗಾಯಗಳಾಗಿವೆ. ಸಾರ್ವಜನಿಕರು ಸಿಟ್ಟಿನಿಂದ ಹಲ್ಲೆ ನಡೆಸಬಹುದು ಎನ್ನುವ ಭಯದಿಂದ ಘಟನೆ ಬಳಿಕ ಚಾಲಕ ಮತ್ತು ನಿರ್ವಾಹಕ ಇಬ್ಬರೂ ಸ್ಥಳದಿಂದ ಪರಾರಿ ಆಗಿದ್ದರು.

ಸ್ಥಳಕ್ಕೆ ಧಾವಿಸಿದ ವಿಜಯನಗರ ಸಂಚಾರ ಠಾಣೆ ಪೊಲೀಸರು ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಹಸ್ತಾಂತರಿಸಿದ ಬಳಿಕ ಚಾಲಕ ಮತ್ತು ನಿರ್ವಾಹಕ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಬಸ್ಸಿನಲ್ಲಿ ಯಾವುದಾದರೂ ತಾಂತ್ರಿಕ ದೋಷ ಇತ್ತೇ ಎನ್ನುವ ಬಗ್ಗೆ ಎಂಜಿನಿಯರ್‌ ಒಬ್ಬರಿಂದ ವರದಿ ಕೇಳಲಾಗಿದೆ. ಆದರೆ ಪ್ರಾಥಮಿಕ ತನಿಖೆಯಲ್ಲಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ