ಆ್ಯಪ್ನಗರ

ಅಪಘಾತದಲ್ಲಿ ಇಬ್ಬರ ಸಜೀವ ದಹನ

ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆನ್ನಾಗರ ಗೇಟ್‌ ಬಳಿ ಖಾಸಗಿ ಬಸ್ಸು ಹಾಗೂ ಕಾರಿನ ನಡುವೆ ಅಪಘಾತದಲ್ಲಿ ಇಬ್ಬರು ಸಜೀವ ದಹನವಾದ ಘಟನೆ ಸೋಮವಾರ ಮುಂಜಾನೆ ನಡೆದಿದೆ.

Vijaya Karnataka 23 Jul 2018, 9:58 am
ಚಂದಾಪುರ: ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆನ್ನಾಗರ ಗೇಟ್‌ ಬಳಿ ಖಾಸಗಿ ಬಸ್ಸು ಹಾಗೂ ಕಾರಿನ ನಡುವೆ ಅಪಘಾತದಲ್ಲಿ ಇಬ್ಬರು ಸಜೀವ ದಹನವಾದ ಘಟನೆ ಸೋಮವಾರ ಮುಂಜಾನೆ ನಡೆದಿದೆ.
Vijaya Karnataka Web 0E8860BE-3333-44BF-8F70-026E36F51060


ಮೃತರನ್ನು ಹೊಸೂರು ನಿವಾಸಿಗಳಾದ ಜಬೀವುಲ್ಲಾ, ಇಸ್ಮಾಯಿಲ್‌ ಎಂದು ಗುರ್ತಿಸಲಾಗಿದೆ. ಸೋಮವಾರ ಬೆಳಗಿನ ಜಾವ 4.15 ರ ಸುಮಾರಿಗೆ ತಮಿಳುನಾಡು ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಗ್ರೀನ್‌ಲೈನ್‌ ಸಂಸ್ಥೆಗೆ ಸೇರಿದ ಬಸ್ಸು ಚಂದಾಪುರ ಫ್ಲೈಓವರ್‌ ದಾಟಿ ಇಳಿಜಾರಿನಲ್ಲಿ ವೇಗವಾಗಿ ಬರುತಿತ್ತು. ಕಾರು ಬೆಂಗಳೂರು ಕಡೆಯಿಂದ ಹೊಸೂರಿನತ್ತ ತೆರಳುತ್ತಿತ್ತು. ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು ಬಳಿಕ ಎದುರುಗಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಇಬ್ಬರು ಸಜೀವವಾಗಿ ಸುಟ್ಟು ಕರಕಲಾಗಿದ್ದಾರೆ.

ಬೆಂಕಿಯ ಕೆನ್ನಾಲಿಗೆ ಕ್ಷಣಾರ್ಧದಲ್ಲಿ ಹÜಬ್ಬಿದ್ದರಿಂದ ಕಾರು ಹಾಗು ಬಸ್ಸು ಸಂರ್ಪೂಣವಾಗಿ ಬೆಂಕಿಗಾಹುತಿಯಾಯಿತು. ಬಸ್ಸಿನಲ್ಲಿ 14 ಪ್ರಯಾಣಿಕರು ಇದ್ದರೆಂದು ಹೇಳಲಾಗಿದೆ. ಬೆಂಕಿ ಹೊತ್ತಿಕೊಂಡ ನಂತರ ಹಿಂಬದಿ ಗಾಜು ಒಡೆದು ಬಸ್‌ ಪ್ರಯಾಣಿಕರು ಹೊರ ಬಂದಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಸೂರ್ಯನಗರ ಪೊಲೀಸರು, ಅಗ್ನಿಶಾಮಕ ದಳವರು ಬೆಂಕಿಯನ್ನು ನಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ