ಆ್ಯಪ್ನಗರ

ವಲಸೆ ವಿಭಾಗದ ಅಧಿಕಾರಿ ಮೇಲೆ ಹಲ್ಲೆ: ಕೊರಿಯಾ ಪ್ರಜೆ ಬಂಧನ

ವೀಸಾ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿ ವಲಸೆ ವಿಭಾಗದ ಅಧಿಕಾರಿ ಜತೆ ಜಗಳ ತೆಗೆದು ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ) ದಲ್ಲಿ ನಡೆದಿದೆ. ಹಲ್ಲೆ ನಡೆಸಿದ ದಕ್ಷಿಣ ಕೊರಿಯಾದ ಪ್ರಜೆ ಸಿಗ್ವಾನ್‌ ಪಾರ್ಕ್‌(24) ನನ್ನು ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ.

Vijaya Karnataka 20 Dec 2018, 5:00 am
ಬೆಂಗಳೂರು: ವೀಸಾ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿ ವಲಸೆ ವಿಭಾಗದ ಅಧಿಕಾರಿ ಜತೆ ಜಗಳ ತೆಗೆದು ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ) ದಲ್ಲಿ ನಡೆದಿದೆ. ಹಲ್ಲೆ ನಡೆಸಿದ ದಕ್ಷಿಣ ಕೊರಿಯಾದ ಪ್ರಜೆ ಸಿಗ್ವಾನ್‌ ಪಾರ್ಕ್‌(24) ನನ್ನು ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ.
Vijaya Karnataka Web attack on immigration officer arrest
ವಲಸೆ ವಿಭಾಗದ ಅಧಿಕಾರಿ ಮೇಲೆ ಹಲ್ಲೆ: ಕೊರಿಯಾ ಪ್ರಜೆ ಬಂಧನ


ಹಲ್ಲೆಗೆ ಒಳಗಾದ ವಲಸೆ ವಿಭಾಗದ ಅಧಿಕಾರಿಯ ಮುಖಕ್ಕೆ 12 ಹೊಲಿಗೆಗಳನ್ನು ಹಾಕಲಾಗಿದೆ. ಸದ್ಯ ಇವರು ಪ್ರಾಣಾಪಾಯದಿಂದ ಪಾರಾಗಿದ್ದು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಿಗ್ವಾನ್‌ ಪಾರ್ಕ್‌, ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಕೆಐಎಗೆ ಬಂದಿಳಿದ್ದರು. ಸಿಗ್ವಾನ್‌ನ ದಾಖಲೆಗಳನ್ನು ಪರಿಶೀಲಿಸಿದ ವಲಸೆ ಅಧಿಕಾರಿ ಶೈನ್‌, ವೀಸಾ ಶುಲ್ಕ 2 ಸಾವಿರ ರೂ. ಪಾವತಿಸುವಂತೆ ಸೂಚಿಸಿದ್ದರು. ಸಿಗ್ವಾನ್‌ ಬಳಿ ನಗದು ಇರಲಿಲ್ಲವಾದ್ದರಿಂದ ಕ್ರೆಡಿಟ್‌ ಕಾರ್ಡ್‌ ಮೂಲಕ ಶುಲ್ಕ ಪಾವತಿಸಲು ಮುಂದಾದರು. ಆದರೆ, ಕ್ರೆಡಿಟ್‌ ಕಾರ್ಡ್‌ನಿಂದ ಹಣ ಡ್ರಾ ಆಗದ ಹಿನ್ನೆಲೆಯಲ್ಲಿ ಭಾರತೀಯ ಕರೆನ್ಸಿಯಲ್ಲೇ ಶುಲ್ಕ ನೀಡುವಂತೆ ಅಧಿಕಾರಿ ಸೂಚಿಸಿದ್ದರು. ''ತನ್ನ ಬಳಿ ಭಾರತೀಯ ಕರೆನ್ಸಿ ಇಲ್ಲ. ತಾನು ದಕ್ಷಿಣ ಕೊರಿಯಾದಿಂದ ಬ್ರೆಜಿಲ್‌ಗೆ ಹೊರಟಿದ್ದು ಮಾರ್ಗ ಮಧ್ಯೆ ಬೆಂಗಳೂರಿಗೆ ಬಂದಿದ್ದೇನೆ''ಎಂದು ಸಿಗ್ವಾನ್‌ ಉತ್ತರ ನೀಡಿದ್ದ. ಇದೇ ವಿಚಾರಕ್ಕೆ ಜಗಳ ನಡೆದು ಹಲ್ಲೆ ನಡೆದಿತ್ತು ಎಂದು ಪೊಲೀಸರು ಮಾಹಿತಿ ನೀಡಿದರು.

''ಹಲ್ಲೆಗೆ ಒಳಗಾದ ಅಧಿಕಾರಿ ಮುಖದಿಂದ ರಕ್ತ ಸುರಿಯುತ್ತಿತ್ತು. ಸ್ಥಳದಲ್ಲಿದ್ದ ಕೆಐಎ ಪೊಲೀಸರು ಆರೋಪಿಯನ್ನು ಹಿಡಿದು ಅಧಿಕಾರಿಯನ್ನು ಆಸ್ಪತ್ರೆಗೆ ದಾಖಲಿಸಿದರು. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ,'' ಎಂದು ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ