ಶ್ರೀರಂಗಪಟ್ಟಣ: ತಾಲೂಕಿನ ಪ್ರಮುಖ ಪ್ರವಾಸಿ ತಾಣವಾದ ಬಲಮುರಿಗೆ ಸೋಮವಾರ ಸ್ನೇಹಿತರೊಂದಿಗೆ ವಿಹಾರಕ್ಕೆ ಬಂದಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಕೋಲಾರ ಜಿಲ್ಲೆ ಬಂಗಾರಪೇಟೆ ನಿವಾಸಿ, ಬೆಂಗಳೂರು ಖಾಸಗಿ ಕಂಪನಿ ಉದ್ಯೋಗಿ ಶಿವಕುಮಾರ್(26) ಮೃತ ವ್ಯಕ್ತಿ.
ಹೊಸ ವರ್ಷದ ಹಿನ್ನೆಲೆಯಲ್ಲಿ ಆರು ಮಂದಿ ಸ್ನೇಹಿತರೊಂದಿಗೆ ಬಲಮುರಿಗೆ ಬಂದಿದ್ದರು. ನೀರಿನಲ್ಲಿ ಆಟ ಆಡುವಾಗ ಮುಳುಗಿ ಮೃತಪಟ್ಟಿದ್ದಾರೆ. ಕೆಆರ್ಎಸ್ ಪೊಲೀಸರು ಶವವನ್ನು ನೀರಿನಿಂದ ಹೊರತೆಗೆದು ಮೈಸೂರು ಕೆಆರ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ವಾರಸುದಾರರಿಗೆ ಒಪ್ಪಿಸಿದ್ದಾರೆ.
ಕೆಆರ್ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.