ಆ್ಯಪ್ನಗರ

ಬಲಮುರಿಯಲ್ಲಿ ಬೆಂಗಳೂರು ಉದ್ಯೋಗಿ ಸಾವು

ತಾಲೂಕಿನ ಪ್ರಮುಖ ಪ್ರವಾಸಿ ತಾಣವಾದ ಬಲಮುರಿಗೆ ಸೋಮವಾರ ಸ್ನೇಹಿತರೊಂದಿಗೆ ವಿಹಾರಕ್ಕೆ ಬಂದಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ವಿಕ ಸುದ್ದಿಲೋಕ 2 Jan 2017, 11:22 pm

ಶ್ರೀರಂಗಪಟ್ಟಣ: ತಾಲೂಕಿನ ಪ್ರಮುಖ ಪ್ರವಾಸಿ ತಾಣವಾದ ಬಲಮುರಿಗೆ ಸೋಮವಾರ ಸ್ನೇಹಿತರೊಂದಿಗೆ ವಿಹಾರಕ್ಕೆ ಬಂದಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಕೋಲಾರ ಜಿಲ್ಲೆ ಬಂಗಾರಪೇಟೆ ನಿವಾಸಿ, ಬೆಂಗಳೂರು ಖಾಸಗಿ ಕಂಪನಿ ಉದ್ಯೋಗಿ ಶಿವಕುಮಾರ್‌(26) ಮೃತ ವ್ಯಕ್ತಿ.

Vijaya Karnataka Web bangalore youth died in balamuri
ಬಲಮುರಿಯಲ್ಲಿ ಬೆಂಗಳೂರು ಉದ್ಯೋಗಿ ಸಾವು


ಹೊಸ ವರ್ಷದ ಹಿನ್ನೆಲೆಯಲ್ಲಿ ಆರು ಮಂದಿ ಸ್ನೇಹಿತರೊಂದಿಗೆ ಬಲಮುರಿಗೆ ಬಂದಿದ್ದರು. ನೀರಿನಲ್ಲಿ ಆಟ ಆಡುವಾಗ ಮುಳುಗಿ ಮೃತಪಟ್ಟಿದ್ದಾರೆ. ಕೆಆರ್‌ಎಸ್‌ ಪೊಲೀಸರು ಶವವನ್ನು ನೀರಿನಿಂದ ಹೊರತೆಗೆದು ಮೈಸೂರು ಕೆಆರ್‌ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ವಾರಸುದಾರರಿಗೆ ಒಪ್ಪಿಸಿದ್ದಾರೆ.

ಕೆಆರ್‌ಎಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ