ಆ್ಯಪ್ನಗರ

ಬಸ್ ಡಿಕ್ಕಿ : ಕಾಲೇಜು ವಿದ್ಯಾರ್ಥಿ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಬನಶಂಕರಿಯಲ್ಲಿ ಸೋಮವಾರ ನಡೆದಿದೆ.

ವಿಕ ಸುದ್ದಿಲೋಕ 10 Aug 2016, 4:00 am
ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಬನಶಂಕರಿಯಲ್ಲಿ ಸೋಮವಾರ ನಡೆದಿದೆ.
Vijaya Karnataka Web bus crash college student death
ಬಸ್ ಡಿಕ್ಕಿ : ಕಾಲೇಜು ವಿದ್ಯಾರ್ಥಿ ಸಾವು


ಶಿವಶಂಕರ್(20) ಮೃತ ವಿದ್ಯಾರ್ಥಿ. ಬನಶಂಕರಿ 2ನೇ ಹಂತದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಿವಶಂಕರ್ ವ್ಯಾಸಾಂಗ ಮಾಡುತ್ತಿದ್ದರು. ಸೋಮವಾರ ಬೆಳಗ್ಗೆ ಜಯನಗರ 6ನೇ ಬ್ಲಾಕ್ ತಿಲಕ್‌ನಗರದಲ್ಲಿರುವ ತಮ್ಮ ಮನೆಯಿಂದ ಬೈಕ್‌ನಲ್ಲಿ ಕಾಲೇಜಿಗೆ ಹೋಗುತ್ತಿದ್ದರು. ಕಾಲೇಜು ಗೇಟ್ ಕಡೆ ತಿರುವು ಪಡೆಯುತ್ತಿದ್ದ ವೇಳೆ ಕನಕಪುರದಿಂದ ಮಾರುಕಟ್ಟೆ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಳಿಕ ನೆಲಕ್ಕೆ ಬಿದ್ದ ಆತನ ಮೇಲೆ ಬಸ್‌ನ ಮುಂದಿನ ಚಕ್ರ ಹರಿದಿದ್ದು, ಎಡಗಾಲು ಹಾಗೂ ಕೈ ಪುಡಿಯಾಗಿದೆ. ತಕ್ಷಣ ಉಳಿದ ವಿದ್ಯಾರ್ಥಿಗಳು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಬನಶಂಕರಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಯಿಂದ ಕೆರಳಿದ ವಿದ್ಯಾರ್ಥಿಗಳು, ಕಾಲೇಜು ಬಳಿ ಸಿಗ್ನಲ್ ಇಲ್ಲದಿರುವುದೇ ಘಟನೆಗೆ ಕಾರಣ ಎಂದು ಆರೋಪಿಸಿ ಯಡಿಯೂರು ಕೆರೆ ಬಳಿ ಪ್ರತಿಭಟನೆ ನಡೆಸಿದರು.

**

ಸರ ಕಳವು

ಅಂಗಡಿಗೆ ಹೋಗುತ್ತಿದ್ದ ಮಹಿಳೆಯ ಸರ ದೋಚಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಶ್ರೀಗಂಧ ಕಾವಲು ನಿವಾಸಿ ಪ್ರೇಮ ಸರ ಕಳೆದುಕೊಂಡವರು. ರಾತ್ರಿ ಸ್ನೇಹಿತೆ ಜತೆ ನಾಗರಬಾವಿಯ ಬಟ್ಟೆ ಅಂಗಡಿಗೆ ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸರ ಎಳೆದಿದ್ದು, ಅವರು ಸರವನ್ನು ಗಟ್ಟಿಯಾಗಿ ಹಿಡಿದುಕೊಂಡ ಕಾರಣ 25 ಗ್ರಾಂ ಚಿನ್ನ ಮಾತ್ರ ಕಳ್ಳರಪಾಲಾಗಿದೆ. ಜ್ಞಾನಭಾರತಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ