ಆ್ಯಪ್ನಗರ

ಮಾಲೀಕನ ಮನೆಯಿಂದ 1 ಕೆ.ಜಿ ಚಿನ್ನ, ಸಿಸಿಟಿವಿ ಕದ್ದೊಯ್ದ ನೇಪಾಳಿ ದಂಪತಿ!

ವೀಡಿಯೋ ರೆಕಾರ್ಡರ್ (ಡಿವಿಆರ್‌) ಸಮೇತ 30 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದು ಆರೋಪಿ ದಂಪತಿ ಪರಾರಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

TIMESOFINDIA.COM 28 Dec 2018, 3:26 pm
ಬೆಂಗಳೂರು: 20 ದಿನಗಳ ಹಿಂದಷ್ಟೇ ಬಾರ್ ಮಾಲೀಕರೊಬ್ಬರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದ ನೇಪಾಳಿ ದಂಪತಿ, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ರಾಜಧಾನಿಯ ಹೊರಮಾವಿನಲ್ಲಿ ನಡೆದಿದೆ.
Vijaya Karnataka Web cctv


ವೀಡಿಯೋ ರೆಕಾರ್ಡರ್ (ಡಿವಿಆರ್‌) ಸಮೇತ 30 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದು ದಂಪತಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರವೀಣ್ ಕುಮಾರ್ ಎಂಬವರ ಮನೆಯಲ್ಲಿ ಕಳೆದ 20 ದಿನಗಳಿಂದ ನೇಪಾಳಿ ಮೂಲದ ಮಂಗಲ್ ಹಾಗೂ ಸೌಭಾಗ್ಯ ದೇವಿ ಎಂಬ ದಂಪತಿ ಕೆಲಸಕ್ಕೆ ಸೇರಿಕೊಂಡಿತ್ತು. ಪ್ರವೀಣ್ ಕುಟುಂಬಸ್ಥರು ಸಂಬಂಧಿಯೊಬ್ಬರ ತಿಥಿ ಕಾರ್ಯಕ್ಕೆ ತೆರಳಿದ್ದರು.

ಮನೆಯಲ್ಲಿ ಯಾರು ಇಲ್ಲದಿರುವುದನ್ನು ಅರಿತ ದಂಪತಿ ಮನೆಯ ಬೆಡ್ ರೂಮ್‌ನಲ್ಲಿದ್ದ ಬೀರುವಿನ ಬೀಗ ಒಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಅಲ್ಲದೇ ಕಳ್ಳತನದ ಸುಳಿವು ಸಿಗಬಾರದೆಂದು ಮನೆಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ ಸಹ ಕದ್ದಿದ್ದಾರೆ.

ತಮ್ಮ ಪತ್ರನ ಸಹಾಯ ಪಡೆದು ದಂಪತಿ ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಮನೆ ಮಾಲೀಕರ ಬಳಿ ದಂಪತಿಯ ಭಾವಚಿತ್ರ ಕೂಡ ಇಲ್ಲದಿರುವ ಕಾರಣ ಆರೋಪಿಗಳನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ