ವಿಕ ಸುದ್ದಿಲೋಕ ಬೆಂಗಳೂರು
ಹಗಲು ಹೊತ್ತಿನಲ್ಲಿ ಕಾರು ಚಾಲಕರಾಗಿ ಕೆಲಸ ಮಾಡಿಕೊಂಡು ರಾತ್ರಿ ವೇಳೆ ಮೊಬೈಲ್ ದರೋಡೆ ನಡೆಸುತ್ತಿದ್ದ ಮೂವರನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೊರಮಾವು ನಿವಾಸಿ ಮುನಿಯಪ್ಪ (24), ಬಾಣಸವಾಡಿ ನಿವಾಸಿ ರಾಜಶೇಖರ್ (23), ಟಿ.ಸಿ.ಪಾಳ್ಯ ನಿವಾಸಿ ಶ್ರೀಕೃಷ್ಣ (19) ಬಂಧಿತ ಆರೋಪಿಗಳು. ಇವರು ಆವಲಹಳ್ಳಿ ಸುತ್ತ ಮುತ್ತ ರಾತ್ರಿ ವೇಳೆಯಲ್ಲಿ ಸಾರ್ವಜನಿಕರಿಂದ ಮೊಬೈಲ್ಗಳನ್ನು ದರೋಡೆ ನಡೆಸುತ್ತಿದ್ದರು. ಬಂಧಿತರಿಂದ 10 ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಹಗಲು ಹೊತ್ತಿನಲ್ಲಿ ಕ್ಯಾಬ್ ಚಾಲಕರಾಗಿ ಕೆಲಸ ಮಾಡುತ್ತಾರೆ. ರಾತ್ರಿ ಆಗುತ್ತಿದ್ದಂತೆ ದರೋಡೆಗೆ ಇಳಿಯುತ್ತಾರೆ. ಮುನಿಯಪ್ಪನ ಬಳಿ ಇರುವ ಹೋಂಡಾ ಡಿಯೋ ವಾಹನದಲ್ಲೇ ಮೂವರೂ ಓಡಾಡುತ್ತಾ ನಿರ್ಜನ ಪ್ರದೇಶಗಳಲ್ಲಿ ಹೊಂಚು ಹಾಕಿ ಮೊಬೈಲ್ ಕಸಿಯುತ್ತಿದ್ದರು. ಒಂಟಿಯಾಗಿ ಓಡಾಡುವವರೇ ಇವರ ಟಾರ್ಗೆಟ್ ಆಗಿದ್ದರು. ಬಾಗಲೂರು ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಪೊಲೀಸರು ನಾಕಾಬಂದಿ ಹಾಕಿ ತನಿಖೆ ನಡೆಸುತ್ತಿದ್ದರು. ಈ ವೇಳೆ ಒಂದೇ ಬೈಕ್ನಲ್ಲಿ ಬಂದ ಮೂವರನ್ನು ತಡೆದು ನಿಲ್ಲಿಸಿದಾಗ ಅವರು ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಅನುಮಾನ ಬಂದು ಅವರನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಅವರ ಬಳಿ ಹತ್ತಕ್ಕೂ ಹೆಚ್ಚು ಮೊಬೈಲ್ಗಳು ಪತ್ತೆಯಾದವು. ತಕ್ಷಣ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಮೊಬೈಲ್ ದರೋಡೆ ನಡೆಸುತ್ತಿದ್ದ ಸಂಗತಿ ಬೆಳಕಿಗೆ ಬಂದಿದೆ.
ಬಂಧಿತರಿಂದ 10 ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದ್ದು ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಹಿಳೆಯ ಮೊಬೈಲ್ ದರೋಡೆ
ಬೈಕ್ನಲ್ಲಿ ಬಂದು ಮೊಬೈಲ್ಗಳನ್ನು ಕಿತ್ತುಕೊಂಡು ಪರಾರಿ ಆಗುವ ಗ್ಯಾಂಗ್ಗಳ ಹಾವಳಿ ಬೆಂಗಳೂರಿನಲ್ಲಿ ಮಿತಿ ಮೀರಿದ್ದು ಚರ್ಚ್ ಸ್ಟ್ರೀಟ್ನ ಬ್ಲಾಸಮ್ ಬುಕ್ ಸ್ಟೋರ್ ಮುಂದೆ ನಿಂತಿದ್ದ ಮಹಿಳೆಯೊಬ್ಬರ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡು ಆರೋಪಿಗಳು ಪರಾರಿ ಆಗಿರುವ ಬಗ್ಗೆ ಕಬ್ಬನ್ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಾನಿ ಮೊಬೈಲ್ ಕಳೆದುಕೊಂಡವರು. ಇವರು ತಮ್ಮ ಸ್ನೇಹಿತ ಅಂಕಿತ್ ಗರ್ಗ್ ಎನ್ನುವವರ ಜತೆ ಬುಕ್ ಸ್ಟಾಲ್ ಮುಂದೆ ನಿಂತಿದ್ದಾಗ ರಾತ್ರಿ 10.30ರ ಸುಮಾರಿಗೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕೈಯಲಿದ್ದ ಬ್ಯಾಗ್ ಮತ್ತು ಮೊಬೈಲ್ ಕಿತ್ತುಕೊಂಡು ಪರಾರಿ ಆಗಿದ್ದಾರೆ. ಬ್ಯಾಗಿನಲ್ಲಿ ಕ್ರೆಡಿಟ್ ಕಾರ್ಡ್ ಹಾಗೂ ನಗದು ಇದ್ದುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ವಿವರಿಸಿದ್ದಾರೆ.
ಹಗಲು ಹೊತ್ತಿನಲ್ಲಿ ಕಾರು ಚಾಲಕರಾಗಿ ಕೆಲಸ ಮಾಡಿಕೊಂಡು ರಾತ್ರಿ ವೇಳೆ ಮೊಬೈಲ್ ದರೋಡೆ ನಡೆಸುತ್ತಿದ್ದ ಮೂವರನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೊರಮಾವು ನಿವಾಸಿ ಮುನಿಯಪ್ಪ (24), ಬಾಣಸವಾಡಿ ನಿವಾಸಿ ರಾಜಶೇಖರ್ (23), ಟಿ.ಸಿ.ಪಾಳ್ಯ ನಿವಾಸಿ ಶ್ರೀಕೃಷ್ಣ (19) ಬಂಧಿತ ಆರೋಪಿಗಳು. ಇವರು ಆವಲಹಳ್ಳಿ ಸುತ್ತ ಮುತ್ತ ರಾತ್ರಿ ವೇಳೆಯಲ್ಲಿ ಸಾರ್ವಜನಿಕರಿಂದ ಮೊಬೈಲ್ಗಳನ್ನು ದರೋಡೆ ನಡೆಸುತ್ತಿದ್ದರು. ಬಂಧಿತರಿಂದ 10 ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಹಗಲು ಹೊತ್ತಿನಲ್ಲಿ ಕ್ಯಾಬ್ ಚಾಲಕರಾಗಿ ಕೆಲಸ ಮಾಡುತ್ತಾರೆ. ರಾತ್ರಿ ಆಗುತ್ತಿದ್ದಂತೆ ದರೋಡೆಗೆ ಇಳಿಯುತ್ತಾರೆ. ಮುನಿಯಪ್ಪನ ಬಳಿ ಇರುವ ಹೋಂಡಾ ಡಿಯೋ ವಾಹನದಲ್ಲೇ ಮೂವರೂ ಓಡಾಡುತ್ತಾ ನಿರ್ಜನ ಪ್ರದೇಶಗಳಲ್ಲಿ ಹೊಂಚು ಹಾಕಿ ಮೊಬೈಲ್ ಕಸಿಯುತ್ತಿದ್ದರು. ಒಂಟಿಯಾಗಿ ಓಡಾಡುವವರೇ ಇವರ ಟಾರ್ಗೆಟ್ ಆಗಿದ್ದರು. ಬಾಗಲೂರು ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಪೊಲೀಸರು ನಾಕಾಬಂದಿ ಹಾಕಿ ತನಿಖೆ ನಡೆಸುತ್ತಿದ್ದರು. ಈ ವೇಳೆ ಒಂದೇ ಬೈಕ್ನಲ್ಲಿ ಬಂದ ಮೂವರನ್ನು ತಡೆದು ನಿಲ್ಲಿಸಿದಾಗ ಅವರು ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಅನುಮಾನ ಬಂದು ಅವರನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಅವರ ಬಳಿ ಹತ್ತಕ್ಕೂ ಹೆಚ್ಚು ಮೊಬೈಲ್ಗಳು ಪತ್ತೆಯಾದವು. ತಕ್ಷಣ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಮೊಬೈಲ್ ದರೋಡೆ ನಡೆಸುತ್ತಿದ್ದ ಸಂಗತಿ ಬೆಳಕಿಗೆ ಬಂದಿದೆ.
ಬಂಧಿತರಿಂದ 10 ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದ್ದು ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಹಿಳೆಯ ಮೊಬೈಲ್ ದರೋಡೆ
ಬೈಕ್ನಲ್ಲಿ ಬಂದು ಮೊಬೈಲ್ಗಳನ್ನು ಕಿತ್ತುಕೊಂಡು ಪರಾರಿ ಆಗುವ ಗ್ಯಾಂಗ್ಗಳ ಹಾವಳಿ ಬೆಂಗಳೂರಿನಲ್ಲಿ ಮಿತಿ ಮೀರಿದ್ದು ಚರ್ಚ್ ಸ್ಟ್ರೀಟ್ನ ಬ್ಲಾಸಮ್ ಬುಕ್ ಸ್ಟೋರ್ ಮುಂದೆ ನಿಂತಿದ್ದ ಮಹಿಳೆಯೊಬ್ಬರ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡು ಆರೋಪಿಗಳು ಪರಾರಿ ಆಗಿರುವ ಬಗ್ಗೆ ಕಬ್ಬನ್ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಾನಿ ಮೊಬೈಲ್ ಕಳೆದುಕೊಂಡವರು. ಇವರು ತಮ್ಮ ಸ್ನೇಹಿತ ಅಂಕಿತ್ ಗರ್ಗ್ ಎನ್ನುವವರ ಜತೆ ಬುಕ್ ಸ್ಟಾಲ್ ಮುಂದೆ ನಿಂತಿದ್ದಾಗ ರಾತ್ರಿ 10.30ರ ಸುಮಾರಿಗೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕೈಯಲಿದ್ದ ಬ್ಯಾಗ್ ಮತ್ತು ಮೊಬೈಲ್ ಕಿತ್ತುಕೊಂಡು ಪರಾರಿ ಆಗಿದ್ದಾರೆ. ಬ್ಯಾಗಿನಲ್ಲಿ ಕ್ರೆಡಿಟ್ ಕಾರ್ಡ್ ಹಾಗೂ ನಗದು ಇದ್ದುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ವಿವರಿಸಿದ್ದಾರೆ.