ಆ್ಯಪ್ನಗರ

ಗಾಂಜಾ ಮಾರಾಟ ಎಂಜಿನಿಯರಿಂಗ್‌ ವಿದ್ಯಾರ್ಥಿ ಸೇರಿ 6 ಸೆರೆ

ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎಂಜಿನಿಯರಿಂಗ್‌ ಡಿಪ್ಲೊಮಾ ವಿದ್ಯಾರ್ಥಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ.

Vijaya Karnataka Web 30 May 2017, 8:29 am

ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎಂಜಿನಿಯರಿಂಗ್‌ ಡಿಪ್ಲೊಮಾ ವಿದ್ಯಾರ್ಥಿ ಸೇರಿ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಎಂಜಿನಿಯರಿಂಗ್‌ ವಿದ್ಯಾರ್ಥಿ ತಮಿಳುನಾಡು ಮೂಲದ ರಾಕೇಶ್‌(26) ಹಾಗೂ ಆನೇಕಲ್‌ನ ಮಂಜ(38), ಜಿಗಣಿಯ ಆನಂದ ಗುಪ್ತ(47) ಹಾಗೂ ಹೆಬ್ಬಗೋಡಿಯ ಕೃಷ್ಣ(33) ಬಂಧಿತರು. ಆಂಧ್ರಪ್ರದೇಶ ಹಾಗೂ ಒಡಿಶಾದಲ್ಲಿರುವ ಗಾಂಜಾ ದಂಧೆಕೋರರ ಜತೆ ಸಂಪರ್ಕ ಸಾಧಿಸಿ ನಗರಕ್ಕೆ ಗಾಂಜಾ ತರುತ್ತಿದ್ದ ಆರೋಪಿಗಳು ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು.

ಮೇ.25ರಂದು ಎಲೆಕ್ಟ್ರಾನಿಕ್‌ ಸಿಟಿ 2ನೇ ಹಂತದಲ್ಲಿರುವ ಕಾಲೇಜೊಂದರ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದು ನಾಲ್ವರನ್ನು ಬಂಧಿಸಿ 3 ಕೆ.ಜಿ ಗಾಂಜಾ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಪ್ರಕರಣ

ಮತ್ತೊಂದು ಪ್ರಕರಣದಲ್ಲಿ ದೇವರಚಿಕ್ಕನಹಳ್ಳಿಯಲ್ಲಿ ಗೋಲ್ಡನ್‌ ಗೇಟ್‌ ಅಪಾರ್ಟ್‌ಮೆಂಟ್‌ ಬಳಿ ತಮಿಳುನಾಡು ಮೂಲದ ಪಟ್ಟಾಭಿರಾಮ(40) ಮತ್ತು ಸರ್ಜಾಪುರದ ನಾಗರಾಜ್‌(25) ಎಂಬುವರನ್ನು ಬಂಧಿಸಿರುವ ಬೊಮ್ಮನಹಳ್ಳಿ ಠಾಣೆ ಪೊಲೀಸರು 4 ಕೆ.ಜಿ ಗಾಂಜಾ ಜಪ್ತಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ