ಆ್ಯಪ್ನಗರ

ಸಿಸಿಬಿ ಪೊಲೀಸರಿಂದ ಮೂರು ಇಸ್ಪೀಟ್‌ ಅಡ್ಡೆಗಳ ಮೇಲೆ ದಾಳಿ

ನಗರದ ವಿವಿಧೆಡೆ ನಡೆಯುತ್ತಿದ್ದ ಮೂರು ಇಸ್ಪೀಟ್‌ ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು, 59 ಮಂದಿ ಆರೋಪಿಗಳನ್ನು ಬಂಧಿಸಿ 7.18 ಲಕ್ಷ ರೂ. ಜಪ್ತಿ ಮಾಡಿದ್ದಾರೆ.

Vijaya Karnataka 3 Dec 2018, 5:00 am
ಬೆಂಗಳೂರು: ನಗರದ ವಿವಿಧೆಡೆ ನಡೆಯುತ್ತಿದ್ದ ಮೂರು ಇಸ್ಪೀಟ್‌ ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು, 59 ಮಂದಿ ಆರೋಪಿಗಳನ್ನು ಬಂಧಿಸಿ 7.18 ಲಕ್ಷ ರೂ. ಜಪ್ತಿ ಮಾಡಿದ್ದಾರೆ.
Vijaya Karnataka Web gambling ccb raid case register
ಸಿಸಿಬಿ ಪೊಲೀಸರಿಂದ ಮೂರು ಇಸ್ಪೀಟ್‌ ಅಡ್ಡೆಗಳ ಮೇಲೆ ದಾಳಿ


ಶನಿವಾರ (ಡಿ.1) ವರ್ತೂರಿನ ಕಾಚಮಾರನಹಳ್ಳಿಯಲ್ಲಿರುವ ಮಂಜುನಾಥ ಸ್ವಾಮಿ ಪ್ರಸನ್ನ ರಿಕ್ರಿಯೇಷನ್‌ ಕ್ಲಬ್‌ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, 28 ಜನರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಜೂಜಾಟಕ್ಕೆ ಸಂಬಂಧಿಸಿದ 3.92 ಲಕ್ಷ ರೂ. 274 ಟೋಕನ್‌ಗಳು, ಇಸ್ಪೀಟ್‌ ಎಲೆ ಸೇರಿ 5 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ವರ್ತೂರು ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

ವಸಂತ ನಗರ: ವಸಂತ ನಗರ 11ನೇ ಮುಖ್ಯರಸ್ತೆಯಲ್ಲಿರುವ ಫೈವ್‌ಸ್ಟಾರ್‌ ರಿಕ್ರಿಯೇಷನ್‌ ಅಸೋಸಿಯೇಷನ್‌ ಕ್ಲಬ್‌ ಮೇಲೆ ದಾಳಿ ನಡೆಸಿ ಹಣ ಪಣಕ್ಕಿಟ್ಟು ಇಸ್ಪೀಟ್‌ ಜೂಜಿನಲ್ಲಿ ತೊಡಗಿದ್ದ 19 ಜನರನ್ನು ಬಂಧಿಸಲಾಗಿದೆ.

ಇಸ್ಪೀಟ್‌ ದಂಧೆ ನಡೆಸುತ್ತಿರುವ ಕುರಿತು ಬಂದ ಮಾಹಿತಿ ಆಧರಿಸಿ ಶನಿವಾರ ದಾಳಿ ನಡೆಸಲಾಗಿದೆ. ಈ ವೇಳೆ 2.25 ಲಕ್ಷ ರೂ. 52 ಇಸ್ಪೀಟ್‌ ಕಾರ್ಡ್‌ಗಳನ್ನು ಜಪ್ತಿ ಮಾಡಲಾಗಿದೆ. ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂದರ್‌ ಬಾಹರ್‌ ಅಡ್ಡೆ ಮೇಲೆ ದಾಳಿ: ಎಚ್‌ಎಸ್‌ಆರ್‌ ಲೇಔಟ್‌ ಬಳಿಯ ಯಲಕುಂಟೆಯಲ್ಲಿರುವ ಫ್ಲ್ಯಾಟ್‌ನಲ್ಲಿ ನಡೆಯುತ್ತಿದ್ದ ಅಂದರ್‌ ಬಾಹರ್‌ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, 12 ಜನರನ್ನು ಬಂಧಿಸಿ 1.51 ಲಕ್ಷ ರೂ. ಹಾಗೂ 52 ಇಸ್ಪೀಟ್‌ ಎಲೆಗಳನ್ನು ಜಪ್ತಿ ಮಾಡಿದ್ದಾರೆ.

ಮಂಗಮ್ಮನಪಾಳ್ಯ ಮುಖ್ಯರಸ್ತೆಯಲ್ಲಿರುವ ಶಶಿ ರೆಸಿಡೆನ್ಸಿ ಫ್ಲ್ಯಾಟ್‌ನಲ್ಲಿ ಜೂಜಾಟ ನಡೆಯುತ್ತಿರುವ ಕುರಿತು ಬಂದ ಮಾಹಿತಿ ಆಧರಿಸಿ ನ.30ರಂದು ದಾಳಿ ನಡೆಸಲಾಗಿದೆ. ಈ ಕುರಿತು ಬಂಡೆಪಾಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ