ಆ್ಯಪ್ನಗರ

ಡ್ಯಾಗರ್‌ನಿಂದ ಇರಿದು ಚಿನ್ನದ ಸರ, ಉಂಗುರ ದರೋಡೆ

ವಾಯುವಿಹಾರಕ್ಕೆ ಹೋಗಿದ್ದ 65 ವರ್ಷದ ಹಿರಿಯ ನಾಗರಿಕರೊಬ್ಬರಿಗೆ ಡ್ಯಾಗರ್‌ನಿಂದ ಇರಿದು ಅವರ ಕೊರಳಿನಲ್ಲಿದ್ದ ಚಿನ್ನದ ಸರ ಮತ್ತು ಕೈಯಲ್ಲಿದ್ದ ಉಂಗುರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಎಚ್‌ಆರ್‌ಬಿಆರ್‌ ಲೇಔಟ್‌ನಲ್ಲಿ ನಡೆದಿದೆ.

Vijaya Karnataka 19 May 2018, 5:00 am
ಬೆಂಗಳೂರು: ವಾಯುವಿಹಾರಕ್ಕೆ ಹೋಗಿದ್ದ 65 ವರ್ಷದ ಹಿರಿಯ ನಾಗರಿಕರೊಬ್ಬರಿಗೆ ಡ್ಯಾಗರ್‌ನಿಂದ ಇರಿದು ಅವರ ಕೊರಳಿನಲ್ಲಿದ್ದ ಚಿನ್ನದ ಸರ ಮತ್ತು ಕೈಯಲ್ಲಿದ್ದ ಉಂಗುರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಎಚ್‌ಆರ್‌ಬಿಆರ್‌ ಲೇಔಟ್‌ನಲ್ಲಿ ನಡೆದಿದೆ.
Vijaya Karnataka Web gold chariot ring robbery plunged by dagger
ಡ್ಯಾಗರ್‌ನಿಂದ ಇರಿದು ಚಿನ್ನದ ಸರ, ಉಂಗುರ ದರೋಡೆ


ಕಲ್ಯಾಣನಗರದ ನಿವಾಸಿ ಕಂಟ್ರಾಕ್ಟರ್‌ ಚಂದ್ರಶೇಖರ್‌ ದರೋಡೆಗೆ ಒಳಗಾದವರು. ಗಂಭೀರ ಗಾಯಗೊಂಡಿರುವ ಅವರು ಖಾಸಗಿ ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರತಿನಿತ್ಯ 5 ಗಂಟೆಗೆ ಎದ್ದು ವಾಯು ವಿಹಾರಕ್ಕೆ ಹೋಗುವುದು ಚಂದ್ರಶೇಖರ್‌ ಅವರ ಅಭ್ಯಾಸ. ಅದರಂತೆ ಬುಧವಾರವೂ ವಾಯು ವಿಹಾರಕ್ಕೆ ಹೋಗುತ್ತಿದ್ದಾಗ ಒಂದೇ ಬೈಕಿನಲ್ಲಿ ಬಂದ ಮೂವರು ಅವರನ್ನು ದಾಟಿ ಮುಂದಕ್ಕೆ ಹೋಗಿದ್ದಾರೆ. ಬಳಿಕ ವಾಪಸ್‌ ಬಂದ ದುಷ್ಕರ್ಮಿಗಳು ಸರ ಹಾಗೂ ಉಂಗುರ ಕೊಡುವಂತೆ ಬೆದರಿಸಿದ್ದಾರೆ. ಅದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ಚಂದ್ರಶೇಖರ್‌ ಅವರು ಮುಂದಕ್ಕೆ ಓಡಿದ್ದು, ಈ ವೇಳೆ ಅವರನ್ನು ಸುತ್ತುವರಿದ ಆರೋಪಿಗಳು ಡ್ಯಾಗರ್‌ನಿಂದ ಇರಿದು ಒಂದೂವರೆ ಲಕ್ಷ ರೂ. ಮೌಲ್ಯದ ಸರ ಮತ್ತು ಉಂಗುರ ಕಿತ್ತುಕೊಂಡು ಹೋಗಿದ್ದಾರೆ.

ರಕ್ತದ ಮಡುವಿನಲ್ಲಿ ಸ್ಥಳದಲ್ಲೇ ಕುಸಿದು ಬಿದ್ದಿದ್ದ ಚಂದ್ರಶೇಖರ್‌ ಅವರನ್ನು ನೋಡಿದ ಸಾರ್ವಜನಿಕರೊಬ್ಬರು 'ನಮ್ಮ 100' ಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಸ್ಥಳಕ್ಕೆ ಬಂದ ಹೊಯ್ಸಳ ವಾಹನದ ಸಿಬ್ಬಂದಿ ಸಾರ್ವಜನಿಕರ ನೆರವಿನಿಂದ ಚಂದ್ರಶೇಖರ್‌ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕಣ ಕುರಿತಂತೆ ಅವರ ಪುತ್ರ ಬಾಣಸವಾಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಟನಾ ಸ್ಥಳದಲ್ಲಿನ ಸಿಸಿಟವಿ ದೃಶ್ಯಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ