ಆ್ಯಪ್ನಗರ

ಒಳ ಉಡುಪಿನಲ್ಲಿ ಚಿನ್ನ ದ ಬಿಸ್ಕತ್‌ ಸಾಗಿಸುತ್ತಿದ್ದವನ ಬಂಧನ

ವಿಶೇಷವಾಗಿ ತಯಾರಿಸಿದ ಒಳ ಉಡುಪಿನೊಳಗೆ 26 ಲಕ್ಷ ರೂ.ಮೌಲ್ಯದ ಚಿನ್ನದ ಬಿಸ್ಕತ್ತುಗಳನ್ನು ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನಿಸಿದ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Vijaya Karnataka 21 Jul 2018, 5:00 am
ಬೆಂಗಳೂರು: ವಿಶೇಷವಾಗಿ ತಯಾರಿಸಿದ ಒಳ ಉಡುಪಿನೊಳಗೆ 26 ಲಕ್ಷ ರೂ.ಮೌಲ್ಯದ ಚಿನ್ನದ ಬಿಸ್ಕತ್ತುಗಳನ್ನು ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನಿಸಿದ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
Vijaya Karnataka Web KIAL


ಬೆಹರೈನ್‌ನಿಂದ ಬಂದಿದ್ದ ಬೆಂಗಳೂರು ನಿವಾಸಿ ಶಂಶುದ್ದೀನ್‌ ಬಂಧಿತ ಆರೋಪಿ. ಏರ್‌ಅರೇಬಿಯಾ ವಿಮಾನದಲ್ಲಿ ಬೆಂಗಳೂರಿಗೆ ಬಂದಿಳಿದಿದ್ದ ಆರೋಪಿ, ನಿಲ್ದಾಣದಿಂದ ಹೊರಗೆ ಅಸಹಜ ರೀತಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ. ಅದನ್ನು ಗಮನಿಸಿದ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಅರ್ಧ ಗಂಟೆ ತನಿಖೆ ಮಾಡಿದ್ದರು. ಈ ವೇಳೆ ಒಳ ಉಡುಪಿನಲ್ಲಿ ತಲಾ 116 ಗ್ರಾಂ ತೂಕದ ಏಳು ಚಿನ್ನದ ಬಿಸ್ಕತ್‌ಗಳು ಪತ್ತೆಯಾಗಿದ್ದವು.

ಕಳೆದ ಒಂದು ವಾರದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಪತ್ತೆ ಹಚ್ಚಿದ ನಾಲ್ಕನೇ ಪ್ರಕರಣ ಇದಾಗಿದ್ದು, ಜು.18ರಂದು ಚಾಕೋಲೇಟ್‌ ಕವರ್‌ನಲ್ಲಿ ಚಿನ್ನ ಸಾಗಿಸುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ