ಆ್ಯಪ್ನಗರ

ಕೋಲಾರ: ಮಚ್ಚು ಝಳಪಿಸುತ್ತಾ ರಸ್ತೆಯಲ್ಲಿ ಓಡಾಡಿ ಪ್ರಾಣ ಬೆದರಿಕೆ ಹಾಕಿದ ಗ್ರಾ.ಪಂ ಸದಸ್ಯನ ತಮ್ಮ

ಗ್ರಾಮ ಪಂಚಾಯತ್ ಸದಸ್ಯನ ಸಹೋದರ ಹಾಡುಹಗಲೇ ಸಾರ್ವಜನಿಕ ಸ್ಥಳದಲ್ಲೇ ಕೊಲೆ ಬೆದರಿಕೆ ಹಾಕಿದ್ದಾನೆ.

Vijaya Karnataka Web 12 Sep 2019, 12:00 pm
ಕೋಲಾರ: ಗ್ರಾಮ ಪಂಚಾಯತ್ ಸದಸ್ಯನ ತಮ್ಮನೊಬ್ಬ ಮಚ್ಚು ಹಿಡಿದು ಊರ ಬೀದಿಯಲ್ಲಿ ಓಡಾಡುತ್ತ ಗೂಂಡಾಗಿರಿ ಪ್ರದರ್ಶಿಸಿದ ಘಟನೆ ಬಂಗಾರಪೇಟೆ ತಾಲೂಕಿನ ಸಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಾಗೊಂದಿ ಗ್ರಾಮ ಪಂಚಾಯತ್ ಸದಸ್ಯ ಸೋಮಶೇಖರ ರೆಡ್ಡಿ ಸಹೋದರ ಸಂತೋಷ್ ರೆಡ್ಡಿ ಲಾಂಗ್ ಹಿಡಿದು ಓಡಾಡಿ ಕೊಲೆ ಬೆದರಿಕೆ ಹಾಕಿದ ವ್ಯಕ್ತಿ.

ಕುಪೇಂದ್ರ ಎನ್ನುವರೊಂದಿಗೆ ಕಾಮಗಾರಿ ಟೆಂಡರ್ ವಿಚಾರವಾಗಿ ಜಗಳವಾಡಿ ಗಲಾಟೆ ಮಾಡಿಕೊಂಡಿದ್ದ ರೆಡ್ಡಿ, ಲಾಂಗ್ ಹಿಡಿದು ಗ್ರಾಮದ ರಸ್ತೆಯಲ್ಲಿ ಓಡಾಡುತ್ತ ಬೆದರಿಕೆ ಹಾಕಿದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ