ಆ್ಯಪ್ನಗರ

ಬೆಂಗಳೂರು ಗ್ಯಾಂಗ್‌ರೇಪ್‌ ಪ್ರಕರಣದ ಏಳು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

2012ರ ಅ.13 ರಂದು ನಗರದ ಹೊರವಲಯದ ಜ್ಞಾನಭಾರತಿ ಆವರಣದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ಬಗ್ಗೆ ವಿಚಾರಣಾ ನ್ಯಾಯಾಲಯ 2013ರ ಸೆ.4ರಂದು ಈ ಅತ್ಯಾಚಾರ ಪ್ರಕರಣ ಅಪರೂಪದಲ್ಲಿ ಅಪರೂಪದ ಪ್ರಕರಣವೆಂದು ಅಭಿಪ್ರಾಯಪಟ್ಟು ಎಲ್ಲ ಎಂಟು ಆರೋಪಿಗಳನ್ನು ಅಪರಾಧಿಗಳೆಂದು ಸಾರಿ, ಎಲ್ಲರಿಗೂ ಜೀವಾವಧಿ ಶಿಕ್ಷೆ ವಿಧಿಸಿತ್ತು.

Vijaya Karnataka Web 27 Oct 2020, 7:54 am
ಬೆಂಗಳೂರು: ಬೆಂಗಳೂರು ವಿವಿಯ ಜ್ಞಾನಭಾರತಿ ಆವರಣದಲ್ಲಿ ಎಂಟು ವರ್ಷಗಳ ಹಿಂದೆ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್‌ ಏಳು ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ಖಾಯಂಗೊಳಿಸಿದೆ.
Vijaya Karnataka Web Karnataka High Court


ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿ ಆಲಿಸಿದ ನ್ಯಾ.ಬಿ.ವೀರಪ್ಪ ಮತ್ತು ನ್ಯಾ.ಕೆ.ನಟರಾಜನ್‌ ಅವರನ್ನೊಳಗೊಂಡ ವಿಭಾಗೀಯ ಪೀಠ, ಬುಧವಾರ ಈ ತೀರ್ಪು ನೀಡಿದೆ. ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಪೀಠ, ಅಧೀನ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದು, ಅದರಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ ಎಂದು ಹೇಳಿದೆ.

ಮಹಿಳೆಯರ ನೋವಿಗೆ ಸ್ಪಂದಿಸಲು ರಾಜಕೀಯದಲ್ಲಿ ಮಹಿಳೆಯರಿರಬೇಕು: ಡಿಕೆಶಿ

ನ್ಯಾಯಾಲಯದ ಆದೇಶದಿಂದಾಗಿ ಅಪರಾಧಿಗಳಾದ ರಾಮು, ಶಿವಣ್ಣ, ಮದ್ದೂರ, ಎಲೆಯಯ್ಯ, ಈರಯ್ಯ, ರಾಮ, ದೊಡ್ಡ ಈರಯ್ಯಗೆ ಜೀವಾವಧಿ ಶಿಕ್ಷೆ ಕಾಯಂ ಆಗಿದೆ. ಇವರೆಲ್ಲರೂ ರಾಮನಗರ ಜಿಲ್ಲೆಯ ಕೈಲಾಂಚ ಹೋಬಳಿಯ ಮೆಟರಿದೊಡ್ಡಿ ಗ್ರಾಮದವರು. ಪ್ರಕರಣದಲ್ಲಿ ಪ್ರಾಸಿಕ್ಯೂಶನ್‌ ಪರ ವಾದ ಮಂಡಿಸಿದ ಹೆಚ್ಚುವರಿ ಎಸ್‌ಪಿಪಿ ವಿಜಯ್‌ ಕುಮಾರ್‌ ಮಜಗೆ, ಏಳು ಮಂದಿ ಅಪರಾಧಿಗಳು ಗಂಭೀರ ಅಪರಾಧ ಎಸಗಿರುವ ಕಾರಣ ಎಲ್ಲರಿಗೂ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮನವಿ ಮಾಡಿದ್ದರು.

ಮದ್ಯಪ್ರಿಯರೇ ಇತ್ತ ಗಮನಿಸಿ.. ಇಂದು ನಾಳೆ ಬೆಂಗಳೂರಲ್ಲಿ ಎಣ್ಣೆ ಸಿಗಲ್ಲ..!

ಈ ಪ್ರಕರಣದಲ್ಲಿ ಒಟ್ಟು 8 ಅಪರಾಧಿಗಳಿಗೆ ಶಿಕ್ಷೆಯಾಗಿತ್ತು. ಮತ್ತೊಬ್ಬ ಬಾಲಾಪರಾಧಿ ಮೇಲ್ಮನವಿ ಸಲ್ಲಿಸಿರಲಿಲ್ಲ. ಹಾಗಾಗಿ, ಏಳೂ ಅಪರಾಧಿಗಳಿಗೂ ಇದೀಗ ಜೀವಾವಧಿ ಶಿಕ್ಷೆ ಕಾಯಂ ಆಗಿದೆ. 2012ರ ಅ.13 ರಂದು ನಗರದ ಹೊರವಲಯದ ಜ್ಞಾನಭಾರತಿ ಆವರಣದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ಬಗ್ಗೆ ವಿಚಾರಣಾ ನ್ಯಾಯಾಲಯ 2013ರ ಸೆ.4ರಂದು ಈ ಅತ್ಯಾಚಾರ ಪ್ರಕರಣ ಅಪರೂಪದಲ್ಲಿ ಅಪರೂಪದ ಪ್ರಕರಣವೆಂದು ಅಭಿಪ್ರಾಯಪಟ್ಟು ಎಲ್ಲ ಎಂಟು ಆರೋಪಿಗಳನ್ನು ಅಪರಾಧಿಗಳೆಂದು ಸಾರಿ, ಎಲ್ಲರಿಗೂ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ