ಆ್ಯಪ್ನಗರ

ಅನಾರೋಗ್ಯ, ಖಿನ್ನತೆಯಿಂದ ವೃದ್ಧ ದಂಪತಿ ಆತ್ಮಹತ್ಯೆ

ಶುಕ್ರವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಪತ್ನಿಗೆ ವಿಷ ಕೊಟ್ಟ ಕೃಷ್ಣಮೂರ್ತಿ, ನಂತರ ತಾನೂ ಸೇವಿಸಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊರಗೆ ಹೋಗಿದ್ದ ಮಗ, ಸೊಸೆ ಮನೆಗೆ ಮರಳಿದಾಗ, ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ ಎಂದು ಗಿರಿನಗರ ಪೊಲೀಸರು ತಿಳಿಸಿದರು.

Vijaya Karnataka 25 Aug 2019, 5:00 am
ವಿಕ ಸುದ್ದಿಲೋಕ ಬೆಂಗಳೂರು
Vijaya Karnataka Web hang


ಅನಾರೋಗ್ಯದಿಂದ ಖಿನ್ನತೆಗೆ ಒಳಗಾಗಿದ್ದ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗಿರಿನಗರ 4ನೇ ಹಂತದಲ್ಲಿ ವಾಸವಿದ್ದ ಬಿಇಎಲ್‌ನ ನಿವೃತ್ತ ಉದ್ಯೋಗಿ ಕೃಷ್ಣಮೂರ್ತಿ (70) ಮತ್ತು ಅವರ ಪತ್ನಿ ಸ್ವರ್ಣಾ ಮೂರ್ತಿ (68) ಮೃತರು.

ಕೃಷ್ಣಮೂರ್ತಿಯವರು ಪತ್ನಿ, ಮಗ, ಸೊಸೆ, ಮೊಮ್ಮಕ್ಕಳ ಜೊತೆ ಗಿರಿನಗರದಲ್ಲಿ ವಾಸವಿದ್ದರು. ಬೆನ್ನು ಹುರಿ ಸಮಸ್ಯೆಯ ಕಾರಣ ಸ್ವರ್ಣಮೂರ್ತಿಯವರಿಗೆ ಕೆಲ ವರ್ಷಗಳ ಹಿಂದೆ ಶಸ್ತ್ರಚಿಕಿತ್ಸೆ ಆಗಿತ್ತು. ಆದರೂ, ಆರೋಗ್ಯದಲ್ಲಿ ಸುಧಾರಣೆ ಕಂಡಿರಲಿಲ್ಲ. ಇದರಿಂದಾಗಿ ಒಂದೂವರೆ ವರ್ಷದಿಂದ ಹಾಸಿಗೆ ಹಿಡಿದಿದ್ದರು. ಪತ್ನಿಯ ಆರೈಕೆಯಲ್ಲಿ ತೊಡಗಿದ್ದ ಕೃಷ್ಣಮೂರ್ತಿ ಚಿಂತಿಸಿ ಖಿನ್ನತೆಗೆ ಒಳಗಾಗಿದ್ದರು. ತನ್ನಿಂದಾಗಿ ಪತಿಗೆ ತೊಂದರೆಯಾಗುತ್ತಿದೆ ಎಂದು ಸ್ವರ್ಣಾ ನೊಂದಿದ್ದರು.

ಶುಕ್ರವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಪತ್ನಿಗೆ ವಿಷ ಕೊಟ್ಟ ಕೃಷ್ಣಮೂರ್ತಿ, ನಂತರ ತಾನೂ ಸೇವಿಸಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊರಗೆ ಹೋಗಿದ್ದ ಮಗ, ಸೊಸೆ ಮನೆಗೆ ಮರಳಿದಾಗ, ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ ಎಂದು ಗಿರಿನಗರ ಪೊಲೀಸರು ತಿಳಿಸಿದರು.

ಗಿರಿನಗರ ಪೊಲೀಸ್‌ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ