ಆ್ಯಪ್ನಗರ

ಕಾರಿಗೆ ಹಿಂದಿನಿಂದ ಲಾರಿ ಡಿಕ್ಕಿ: ವಿದ್ಯಾರ್ಥಿ ಸೇರಿ ಮೂವರ ಸಾವು

ಮುಂದೆ ಹೋಗುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬ ವಿದ್ಯಾರ್ಥಿ ಸೇರಿ ಮೂವರು ಮೃತಪಟ್ಟಿರುವ ಘಟನೆ ನೈಸ್‌ರಸ್ತೆಯ ಬೇಗೂರು ಮೇಲ್ಸೇತುವೆ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.

Vijaya Karnataka 10 May 2018, 5:00 am
ಬೆಂಗಳೂರು: ಮುಂದೆ ಹೋಗುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬ ವಿದ್ಯಾರ್ಥಿ ಸೇರಿ ಮೂವರು ಮೃತಪಟ್ಟಿರುವ ಘಟನೆ ನೈಸ್‌ರಸ್ತೆಯ ಬೇಗೂರು ಮೇಲ್ಸೇತುವೆ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.
Vijaya Karnataka Web lorry collapses behind car triple death with student
ಕಾರಿಗೆ ಹಿಂದಿನಿಂದ ಲಾರಿ ಡಿಕ್ಕಿ: ವಿದ್ಯಾರ್ಥಿ ಸೇರಿ ಮೂವರ ಸಾವು


ಎಚ್‌ಬಿಆರ್‌ ಲೇಔಟ್‌ನ ಸುಭಾಷ್‌ ನಗರ ನಿವಾಸಿಗಳಾದ ಹೇಮಂತ್‌ (21), ಶೇಖರ್‌ (23) ಹಾಗೂ ರಾಜೇಶ್‌ (24) ಮೃತರು. ಅಪಘಾತದ ಬಳಿಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಮೃತರ ಪೈಕಿ ಶೇಖರ್‌ ನಗರದ ಸಿಎಂಆರ್‌ ಕಾಲೇಜಿನಲ್ಲಿ ಬಿ.ಕಾಂ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಹೇಮಂತ್‌ ಡಿಪ್ಲೊಮಾ ಮುಗಿಸಿ ಕೆಲಸಕ್ಕೆ ಹುಡುಕಾಟ ನಡೆಸುತ್ತಿದ್ದರು. ರಾಜೇಶ್‌ ಕಳೆದ ಮೂರು ವರ್ಷಗಳಿಂದ ಇಂದಿರಾನಗರದಲ್ಲಿರುವ ಬೈಕ್‌ ಶೋ ರೂಮ್‌ವೊಂದರಲ್ಲಿ ಮಾರಾಟ ಪ್ರತಿನಿಧಿ ಆಗಿ ಕೆಲಸ ಮಾಡುತ್ತಿದ್ದರು.

ಮೂವರು ಸ್ನೇಹಿತರಾಗಿದ್ದು, ಮಂಗಳವಾರ ರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯಿಂದ ಬನ್ನೇರುಘಟ್ಟಕ್ಕೆ ಸ್ಯಾಂಟ್ರೋ ಕಾರಿನಲ್ಲಿ ತೆರಳುತ್ತಿದ್ದರು. ರಾಜೇಶ್‌ ಕಾರು ಚಾಲನೆ ಮಾಡುತ್ತಿದ್ದರು. ಹೇಮಂತ್‌ ಚಾಲಕನ ಪಕ್ಕದ ಸೀಟಿನಲ್ಲಿ ಹಾಗೂ ಶೇಖರ್‌ ಹಿಂಬದಿ ಕುಳಿತಿದ್ದರು.

ನೈಸ್‌ ರಸ್ತೆಯಲ್ಲಿ ಬನ್ನೇರುಘಟ್ಟ ಕಡೆ ಹೋಗುವಾಗ ರಾತ್ರಿ 10.15ರ ಸುಮಾರಿಗೆ ಬೇಗೂರು ಮೇಲ್ಸೇತುವೆ ಬಳಿ ಹಿಂಬದಿಯಿಂದ ವೇಗವಾಗಿ ಬಂದ ಲಾರಿ, ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಯಾಂಟ್ರೋ ಕಾರು ಪಲ್ಟಿ ಹೊಡೆದು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.

ಡಿಕ್ಕಿ ಹೊಡೆದ ಲಾರಿ ರಾಜಸ್ತಾನ ನೋಂದಣಿ ಸಂಖ್ಯೆ ಹೊಂದಿದೆ. ಲಾರಿ ಮಾಲೀಕರ ಪತ್ತೆ ಹಚ್ಚಿ ಚಾಲಕನನ್ನು ಬಂಧಿಸಲಾಗುವುದು ಎಂದು ಪ್ರಕರಣ ದಾಖಲಿಸಿಕೊಂಡಿರುವ ಎಲೆಕ್ಟ್ರಾನಿಕ್‌ ಸಿಟಿ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ