ಆ್ಯಪ್ನಗರ

ನಡುರಾತ್ರಿಯಲ್ಲಿ ಲಾರಿ ಅಡ್ಡಗಟ್ಟಿ ಚಾಲಕನ ದರೋಡೆ

ಲಾರಿ ಚಾಲಕನೊಬ್ಬನನ್ನು ಅಡ್ಡಗಟ್ಟಿ ದರೋಡೆ ನಡೆಸಿರುವ ಘಟನೆ ಯಲಹಂಕದಲ್ಲಿ ನಡೆದಿದೆ.

Vijaya Karnataka 27 Apr 2019, 5:00 am
Vijaya Karnataka Web lorry driver looted
ನಡುರಾತ್ರಿಯಲ್ಲಿ ಲಾರಿ ಅಡ್ಡಗಟ್ಟಿ ಚಾಲಕನ ದರೋಡೆ
ವಿಕ ಸುದ್ದಿಲೋಕ ಬೆಂಗಳೂರು

ಲಾರಿ ಚಾಲಕನೊಬ್ಬನನ್ನು ಅಡ್ಡಗಟ್ಟಿ ದರೋಡೆ ನಡೆಸಿರುವ ಘಟನೆ ಯಲಹಂಕದಲ್ಲಿ ನಡೆದಿದೆ.

ತಮಿಳುನಾಡು ಮೂಲದ ಲಾರಿ ಚಾಲಕ ಕಾರ್ತಿಕ್‌ ದರೋಡೆಗೆ ಒಳಗಾದವರು. ತಮಿಳುನಾಡಿನಿಂದ ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟ ಕಚ್ಚಾ ಪದಾರ್ಥಗಳನ್ನು ತುಂಬಿಕೊಂಡು ಬೆಂಗಳೂರಿಗೆ ಬಂದಿದ್ದ ಲಾರಿ ಕೋಗಿಲು ಸಮೀಪದ ಇಟ್ಟಿಗೆ ಕಾರ್ಖಾನೆಯಲ್ಲಿ ಕಚ್ಚಾ ಸಾಮಗ್ರಿಗಳನ್ನು ಇಳಿಸಿ ರಾತ್ರಿ 2 ಗಂಟೆ ಸುಮಾರಿಗೆ ವಾಪಸ್ಸಾಗುತ್ತಿತ್ತು. ಈ ವೇಳೆ ಇಂಡಿಕಾ ಕಾರಿನಲ್ಲಿ ಲಾರಿಯನ್ನು ಹಿಂಬಾಲಿಸಿಕೊಂಡು ಬಂದ ದರೋಡೆಕೋರರು ಕೃತ್ಯ ಎಸಗಿದ್ದಾರೆ.

ದರೋಡೆಕೋರರು ರಸ್ತೆ ಮಧ್ಯೆ ಲಾರಿಗೆ ಅಡ್ಡಲಾಗಿ ಕಾರು ನಿಲ್ಲಿಸಿದ್ದರು. ಯಾರೋ ಪೊಲೀಸರು ಅಥವಾ ಸಾರಿಗೆ ಇಲಾಖೆ ಅಧಿಕಾರಿಗಳು ಇರಬೇಕು ಎಂದು ತಿಳಿದ ಕಾರ್ತಿಕ್‌ ಲಾರಿಯನ್ನು ನಿಲ್ಲಿಸಿದ್ದ. ಬಳಿಕ ಕಾರಿನಿಂದ ಇಳಿದ ಮೂವರು ಚಾಲಕನನ್ನು ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ನಡೆಸಿದ್ದಾರೆ. ಲಾರಿಯ ಕೀ ಕಿತ್ತುಕೊಂಡು ಚಾಲಕ ಕಾರ್ತಿಕ್‌ ಬಳಿ ಇದ್ದ ಮೊಬೈಲ್‌ ಮತ್ತು ಐದು ಸಾವಿರ ರೂ ನಗದನ್ನು ಕಿತ್ತುಕೊಂಡು ಲಾರಿ ಕೀ ಸಮೇತ ಪರಾರಿ ಆಗಿದ್ದಾರೆ. ಸ್ಥಳೀಯರ ನೆರವಿನಿಂದ ಯಲಹಂಕ ಠಾಣೆಗೆ ಧಾವಿಸಿದ ಚಾಲಕ ನಡೆದ ಘಟನೆಯನ್ನು ಪೊಲೀಸರಿಗೆ ವಿವರಿಸಿ ದೂರು ನೀಡಿದ್ದಾನೆ.

ಪೊಲೀಸರು ಘಟನೆ ಬಗ್ಗೆ ತನಿಖೆ ಆರಂಭಿಸಿದ್ದು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ. ಮತ್ತೊಂದು ಕೀ ನೆರವಿನಿಂದ ಚಾಲಕ ಲಾರಿಯನ್ನು ತೆಗೆದುಕೊಂಡು ಹೋಗಿದ್ದಾನೆ ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ