ಆ್ಯಪ್ನಗರ

ಕೋವಿಡ್‌ ಟೆಸ್ಟ್‌ ಮಾಡಿಸಿ ಎಂದಿದ್ದಕ್ಕೆ ವೈದ್ಯರ ಮೇಲೆ ಹಲ್ಲೆ

ಖಾಸಗಿ ಆಸ್ಪತ್ರೆ ವೈದ್ಯ ಮತ್ತು ಆ್ಯಂಬುಲೆಸ್ಸ್‌ ಚಾಲಕರೊಬ್ಬರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಧಿಕ ರಕ್ತದೊತ್ತಡ ಎಂದು ಆಸ್ಪತ್ರೆಗೆ ಬಂದಿದ್ದ ವ್ಯಕ್ತಿ ಮತ್ತು ಅವರ ಕಡೆಯವರಿಂದ ಹಲ್ಲೆ ನಡೆದಿದೆ.

Vijaya Karnataka Web 30 Jun 2020, 8:05 am
ಬೆಂಗಳೂರು: ಖಾಸಗಿ ಆಸ್ಪತ್ರೆ ವೈದ್ಯ ಮತ್ತು ಆ್ಯಂಬುಲೆನ್ಸ್ ಚಾಲಕರೊಬ್ಬರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Vijaya Karnataka Web Covid-19


ಸಹಕಾರನಗರದ ನಾರಾಯಣ ಕ್ಲಿನಿಕ್‌ ವೈದ್ಯ ಡಾ.ಜಗನ್ನಾಥ್‌ ಮೇಲೆ ಹಲ್ಲೆ ನಡೆದಿದೆ. ಅಧಿಕ ರಕ್ತದೊತ್ತಡ ಎಂದು ಆಸ್ಪತ್ರೆಗೆ ಬಂದಿದ್ದ ವ್ಯಕ್ತಿ ಮತ್ತು ಅವರ ಕಡೆಯವರಿಂದ ಹಲ್ಲೆ ನಡೆದಿದೆ. ರಕ್ತದೊತ್ತಡ ಇದ್ದರೆ ಕೊವಿಡ್‌-19 ಪರೀಕ್ಷೆ ಮಾಡಿಸಿ ಎಂದು ವೈದ್ಯರು ಸೂಚಿಸಿದ್ದಲ್ಲದೆ, ಕೊರೊನಾ ಪರೀಕ್ಷೆ ಆಗದೆ ರಕ್ತದೊತ್ತಡಕ್ಕೆ ಚಿಕಿತ್ಸೆ ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಕ್ಕೆ ಹಲ್ಲೆನಡೆದಿದೆ ಎಂದು ದೂರು ದಾಖಲಾಗಿದೆ.

''ಖಾಸಗಿ ಆಸ್ಪತ್ರೆಯವರು ಕೊರೊನಾವನ್ನು ದಂಧೆ ಮಾಡಿಕೊಂಡಿದ್ದಾರೆ. ಹಣ ಸುಲಿಯುವ ಉದ್ದೇಶದಿಂದ ಕೊರೊನಾ ಪರೀಕ್ಷೆ ಮಾಡಿಸುತ್ತಿದ್ದೀರಾ'' ಎಂದು ರೋಗಿಯ ಕಡೆಯವರು ಆರೋಪಿಸಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾಗಿ ತಿಳಿದುಬಂದಿದೆ. ವೈದ್ಯರ ಮೇಲಿನ ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಕೊಡಿಗೇಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ