ಆ್ಯಪ್ನಗರ

ನವ ವಿವಾಹಿತೆ ಆತ್ಮಹತ್ಯೆ

ತಲಘಟ್ಟಪುರ ಸಮೀಪದ ಗಾಣಿಗರ ಪಾಳ್ಯದಲ್ಲಿ ನವ ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೇಜಕುಮಾರಿ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ವರ್ಷದ ಹಿಂದೆ ಛಾಯಾಗ್ರಾಹಕ ಚೇತನ್‌ ಎಂಬುವವರನ್ನು ವಿವಾಹವಾಗಿದ್ದರು.

Vijaya Karnataka 19 Apr 2018, 10:51 am
ಬೆಂಗಳೂರು: ತಲಘಟ್ಟಪುರ ಸಮೀಪದ ಗಾಣಿಗರ ಪಾಳ್ಯದಲ್ಲಿ ನವ ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web hang

ತೇಜಕುಮಾರಿ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ವರ್ಷದ ಹಿಂದೆ ಛಾಯಾಗ್ರಾಹಕ ಚೇತನ್‌ ಎಂಬುವವರನ್ನು ವಿವಾಹವಾಗಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಆರಂಭದಲ್ಲಿ ದಂಪತಿ ಭಾರಿ ಅನೋನ್ಯವಾಗಿದ್ದರು. ಎರಡೂ ಮನೆಯವರೂ ಮೆಚ್ಚಿಕೊಳ್ಳುವ ರೀತಿಯಲ್ಲಿ ಸಂಸಾರ ನಡೆಸುತ್ತಿದ್ದರು. ಆದರೆ ಕೆಲ ವಾರಗಳಿಂದ ದಂಪತಿ ನಡುವೆ ಸಣ್ಣ ಪುಟ್ಟ ವಿಷಯಕ್ಕೂ ಮನಸ್ತಾಪ ಉಂಟಾಗುತ್ತಿತ್ತು. ಮಂಗಳವಾರ ಎಲ್ಲಾದರೂ ಹೊರಗೆ ಕರೆದುಕೊಂಡು ಹೋಗಿ ಎಂದು ತೇಜಕುಮಾರಿ ಪತಿಯನ್ನು ಕೇಳಿದ್ದರು. ಇದಕ್ಕೆ ಒಪ್ಪದ ಚೇತನ್‌, ರೇಗಾಡಿದ್ದ. ಇದೇ ವಿಷಯಕ್ಕೆ ಇಬ್ಬರ ನಡುವೆ ದೊಡ್ಡ ಜಗಳ ನಡೆದಿತ್ತು. ಇದರಿಂದ ನೊಂದ ತೇಜಕುಮಾರಿ ಮಲಗುವ ಕೋಣೆಯ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘‘ಪತಿ ಮತ್ತು ಕುಟುಂಬದವರ ಹಣದಾಸೆಗೆ ಮಗಳ ಪ್ರಾಣ ಹೋಗಿದೆ,’’ ಎಂದು ತೇಜಕುಮಾರಿ ಪೋಷಕರು ಪೊಲೀಸರಿಗೆ ದೂರಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪತಿ ಚೇತನ್‌ನನ್ನು ವಶಕ್ಕೆ ಪಡೆದ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ. ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ